ಚಿಕ್ಕಮಗಳೂರು : ಬಾಬಾಬುಡನ್ಗಿರಿ ಪ್ರದೇಶದಕ್ಕೆ ಪ್ರವಾಸ ಬಂದಿದ್ದ ಕೇರಳದ 16 ವರ್ಷದ ವಿದ್ಯಾರ್ಥಿನಿ ಶ್ರೀನಂದಾ ನಾಪತ್ತೆಯಾಗಿದ್ದು, ಕುಂಟುಬದವರು ಮತ್ತು ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.
ಕೇರಳದ ಪಾಲಕ್ಕಾಡ್ ಜಿಲ್ಲೆಯವಳಾದ ಈ 10 ನೇ ತರಗತಿ ವಿದ್ಯಾರ್ಥಿನಿ ತನ್ನ ಕುಟುಂಬದೊಂದಿಗೆ ಚಿಕ್ಕಮಗಳೂರು ಪ್ರವಾಸಕ್ಕೆ ಬಂದಿದ್ದಳು. ಬಾಬಾಬುಡನ್ಗಿರಿ ಬೆಟ್ಟಗಳಲ್ಲಿರುವ ಮಣಿಕ್ಯಧಾರ ಜಲಪಾತದ ಸಮೀಪ ಅವಳು ನಾಪತ್ತೆಯಾಗಿರುವುದು ತಿಳಿದುಬಂದಿದೆ.
ನಿನ್ನೆ ಸಂಜೆ 5.30ರ ಸುಮಾರಿಗೆ ಜಲಪಾತ ಪ್ರದೇಶದಲ್ಲಿ ಸುತ್ತಾಡುತ್ತಿದ್ದಾಗ ವಿದ್ಯಾರ್ಥಿನಿ ಕಾಣೆಯಾಗಿರುವುದು ಕುಟುಂಬದ ಸದಸ್ಯರ ಗಮನಕ್ಕೆ ಬಂದಿದೆ. ರಾತ್ರಿ ಎಂಟು ಗಂಟೆ ತನಕ ಹುಡುಕಿ ನಂತರ ಕುಟುಂಬದವರು ಚಿಕ್ಕಮಗಳೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಮತ್ತು ಸ್ಥಳೀಯರು ಸೇರಿ ವಿದ್ಯಾರ್ಥಿನಿಯನ್ನು ರಾತ್ರಿ ಹುಡುಕಾಟ ನಡೆಸಿದ್ದಾರೆ.
ಥರ್ಮಲ್ ಡ್ರೋಣ್ ಬಳಸಿ ಬೆಳಗಿನ ಜಾವ 4.30ರ ತನಕ ಹುಡುಕಾಟ ನಡೆಸಲಾಗಿದೆ. ಇಂದು ಬೆಳಿಗ್ಗೆಯಿಂದಲೂ ಸಹ ಹುಡುಕಾಟದ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರಕುಮಾರ್ ದಯಾಮ ತಿಳಿಸಿದ್ದಾರೆ.
ನವದೆಹಲಿ: ನೀಟ್-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…
ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಂದು ಪ್ರಧಾನಿ…
ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್ ವಾಂಗ್ಚುಕ್ ಅವರನ್ನು ಇಲ್ಲಿನ ಸಫ್ದರ್ಜಂಗ್…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…
ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…
ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್ ಮುಂದುವರಿಯಲಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದೀಪ್ಕೆ…