Mysore
24
overcast clouds

Social Media

ಸೋಮವಾರ, 16 ಮಾರ್ಚ್ 2026
Light
Dark

ಚಿಕ್ಕಮಗಳೂರು: ಮುತ್ತೋಡಿ ಅರಣ್ಯದಲ್ಲಿ ಭಾರೀ ಕಾಡ್ಗಿಚ್ಚು

ಚಿಕ್ಕಮಗಳೂರು: ತಾಲ್ಲೂಕಿನ ಮುತ್ತೋಡಿ ಅರಣ್ಯ ವಲಯದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಪರಿಣಾಮ ಅಪರೂಪದ ಅರಣ್ಯ ಸಂಪತ್ತು ನಾಶವಾಗಿದೆ.

ಭದ್ರಾ ಅಭಯಾರಣ್ಯ ವ್ಯಾಪ್ತಿಗೆ ಕಾಡ್ಗಿಚ್ಚು ಹಬ್ಬಿರುವುದು ಸ್ಥಳೀಯರು ಹಾಗೂ ಪರಿಸರ ಪ್ರೇಮಿಗಳಲ್ಲಿ ಆತಂಕ ಮೂಡಿಸಿದೆ. ಮುತ್ತೋಡಿ ಅರಣ್ಯ ವ್ಯಾಪ್ತಿಯ ಎಮ್ರಹಳ್ಳಿ ಮತ್ತು ಹೊಸಕಾನ್‌ ಸುತ್ತಮುತ್ತಲಿನ ಅರಣ್ಯ ಪ್ರದೇಶಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಬಿಸಿಲ ಬೇಗೆಗೆ ಒಣಗಿದ ತರಗೆಲೆಗಳು ಮತ್ತು ಹುಲ್ಲಿನಿಂದಾಗಿ ಕ್ಷಣಾರ್ಧದಲ್ಲೇ ಕಿಲೋ ಮೀಟರ್‌ಗಳಷ್ಟು ದೂರ ಬೆಂಕಿ ವ್ಯಾಪಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಅಭಯಾರಣ್ಯದಲ್ಲಿನ ಜೀವಸಂಕುಲಕ್ಕೂ ಸಂಚಕಾರ ಎದುರಾಗಿದೆ.

ಬೆಂಕಿಯನ್ನು ನಿಯಂತ್ರಣಕ್ಕೆ ತರಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ. ಅರಣ್ಯ ಇಲಾಖೆಯಲ್ಲಿ ವಾಚರ್‌ಗಳ ಕೊರತೆ ಇರುವುದರಿಂದ ಬೆಂಕಿಯನ್ನು ನಿಯಂತ್ರಿಸಲು ತೊದರೆಯಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

 

 

Tags:
error: Content is protected !!