ರಾಜ್ಯ

ಚಿಕ್ಕಮಗಳೂರು: ಶರಣಾದ ನಕ್ಸಲರ ಶಸ್ತ್ರಾಸ್ತ್ರ ವಶಪಡಿಸಿದ ಪೊಲೀಸರು

ಚಿಕ್ಕಮಗಳೂರು: ದಕ್ಷಿಣ ಭಾರತದ ಮೊಸ್ಟ್‌ ವಾಂಟೆಂಡ್‌ನ ಆರು ನಕ್ಸಲರು ಮುಖ್ಯವಾಹಿನಿಗೆ ಬಂದ ಬೆನ್ನಲ್ಲೇ ಪೊಲೀಸರು ಅರಣ್ಯದಲ್ಲಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.

ನಕ್ಸಲರು ಬುಧವಾರ(ಜ.8) ರಂದು ಮುಖ್ಯವಾಹಿನಿಗೆ ಬಂದು ಶರಣಾಗಿದ್ದರು. ಬಳಿಕ ಶರಣಾಗತಿಯ ವೇಳೆ ಯಾವುದೇ ಶಸ್ತ್ರಾಸ್ತ್ರಗಳನ್ನು ಸರ್ಕಾರಕ್ಜಕೆ ಹಸ್ತಾಂತರ ಮಾಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಪೊಲೀಸರು ಶಸ್ತ್ರಾಸ್ತ್ರಗಳನ್ನು ಪತ್ತೆ ಹಚ್ಚುವ ಕಾರ್ಯಾಚರಣೆಯಲ್ಲಿದ್ದು ಅವರಿಗೆ, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಜಯಪುರ ವ್ಯಾಪ್ತಿಗೊಳಪಡುವ ಕಿತ್ತಲೆಗುಳಿ ಬಳಿಯ ಅರಣ್ಯದಲ್ಲಿ ಆರು ಬಂದೂಕು ಮತ್ತು ಮದ್ದು ಗುಂಡುಗಳು ಸಿಕ್ಕಿವೆ. ಅವುಗಳನ್ನು ಈಗಾಗಲೇ ವಶಪಡಿಸಿಕೊಳ್ಳಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಪೊಲೀಸರು ಅರಣ್ಯದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಒಂದು ಎ.ಕೆ-56, ಮೂರು 303 ರೈಫಲ್‌, ಹನ್ನೆರಡು ಬೋರ್‌ ಎಸ್‌ಬಿಬಿಎಲ್‌ ಹಾಗೂ ಒಂದು ಸ್ವದೇಶ ನಿರ್ಮಿತ ಬಂದೂಕು ದೊರೆತಿದೆ. ಅಲ್ಲದೇ 7.62 ಎಂಎಂ ಎ.ಕೆ. ಮದ್ದು ಗುಂಡು-11, 303-ರೈಫಲ್‌ ಮದ್ದು ಗುಂಡು-133, ಎ.ಕೆ.-56 ಖಾಲಿ ಮ್ಯಾಗಿನ್‌-01, 12 ಬೋರ್‌ ಕಾರ್ಟೀಡ್ಜಸ್‌-24, ಸ್ವದೇಶ ನಿರ್ಮಿತ ಪಿಸ್ತೂಲ್‌ ಮದ್ದು ಗುಂಡು-8 ಸೇರಿದಂತೆ ಒಟ್ಟು 176 ಮದ್ದು ಗುಂಡುಗಳನ್ನು ದೊರೆತಿವೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಜಯಪುರ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಚಿಕ್ಕಮಗಳೂರು ಜಿಲ್ಲೆಯ ಎಸ್‌ಪಿ ವಿಕ್ರಮ್‌ ಅಮಟೆ ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

2 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

2 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

2 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

2 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

2 hours ago

ಕೆಡ್ಲಿ ಬಾಳ್ಲಿ ನಮ್‌ ಬದ್ಕ್‌ ನಾಮ್‌ ನೋಡ್ಬೇಕು ಕಣ ಕುಸೋ

ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…

2 hours ago