ರಾಜ್ಯ

ಚಿಕ್ಕಮಗಳೂರು: ಶರಣಾದ ನಕ್ಸಲರ ಶಸ್ತ್ರಾಸ್ತ್ರ ವಶಪಡಿಸಿದ ಪೊಲೀಸರು

ಚಿಕ್ಕಮಗಳೂರು: ದಕ್ಷಿಣ ಭಾರತದ ಮೊಸ್ಟ್‌ ವಾಂಟೆಂಡ್‌ನ ಆರು ನಕ್ಸಲರು ಮುಖ್ಯವಾಹಿನಿಗೆ ಬಂದ ಬೆನ್ನಲ್ಲೇ ಪೊಲೀಸರು ಅರಣ್ಯದಲ್ಲಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.

ನಕ್ಸಲರು ಬುಧವಾರ(ಜ.8) ರಂದು ಮುಖ್ಯವಾಹಿನಿಗೆ ಬಂದು ಶರಣಾಗಿದ್ದರು. ಬಳಿಕ ಶರಣಾಗತಿಯ ವೇಳೆ ಯಾವುದೇ ಶಸ್ತ್ರಾಸ್ತ್ರಗಳನ್ನು ಸರ್ಕಾರಕ್ಜಕೆ ಹಸ್ತಾಂತರ ಮಾಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಪೊಲೀಸರು ಶಸ್ತ್ರಾಸ್ತ್ರಗಳನ್ನು ಪತ್ತೆ ಹಚ್ಚುವ ಕಾರ್ಯಾಚರಣೆಯಲ್ಲಿದ್ದು ಅವರಿಗೆ, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಜಯಪುರ ವ್ಯಾಪ್ತಿಗೊಳಪಡುವ ಕಿತ್ತಲೆಗುಳಿ ಬಳಿಯ ಅರಣ್ಯದಲ್ಲಿ ಆರು ಬಂದೂಕು ಮತ್ತು ಮದ್ದು ಗುಂಡುಗಳು ಸಿಕ್ಕಿವೆ. ಅವುಗಳನ್ನು ಈಗಾಗಲೇ ವಶಪಡಿಸಿಕೊಳ್ಳಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಪೊಲೀಸರು ಅರಣ್ಯದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಒಂದು ಎ.ಕೆ-56, ಮೂರು 303 ರೈಫಲ್‌, ಹನ್ನೆರಡು ಬೋರ್‌ ಎಸ್‌ಬಿಬಿಎಲ್‌ ಹಾಗೂ ಒಂದು ಸ್ವದೇಶ ನಿರ್ಮಿತ ಬಂದೂಕು ದೊರೆತಿದೆ. ಅಲ್ಲದೇ 7.62 ಎಂಎಂ ಎ.ಕೆ. ಮದ್ದು ಗುಂಡು-11, 303-ರೈಫಲ್‌ ಮದ್ದು ಗುಂಡು-133, ಎ.ಕೆ.-56 ಖಾಲಿ ಮ್ಯಾಗಿನ್‌-01, 12 ಬೋರ್‌ ಕಾರ್ಟೀಡ್ಜಸ್‌-24, ಸ್ವದೇಶ ನಿರ್ಮಿತ ಪಿಸ್ತೂಲ್‌ ಮದ್ದು ಗುಂಡು-8 ಸೇರಿದಂತೆ ಒಟ್ಟು 176 ಮದ್ದು ಗುಂಡುಗಳನ್ನು ದೊರೆತಿವೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಜಯಪುರ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಚಿಕ್ಕಮಗಳೂರು ಜಿಲ್ಲೆಯ ಎಸ್‌ಪಿ ವಿಕ್ರಮ್‌ ಅಮಟೆ ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಶಿಷ್ಯವೇತನಕ್ಕೆ ಸಂಶೋಧಕರ ಆಗ್ರಹ : ಭಾನುವಾರ ಸಭೆ

ಮೈಸೂರು : ಶಿಷ್ಯವೇತನಕ್ಕೆ ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರು ನಡೆಸುತ್ತಿರುವ ಹೋರಾಟವನ್ನು ತೀವ್ರಗೊಳಿಸಲು ಭಾನುವಾರ ಬೆಳಿಗ್ಗೆ 11ಕ್ಕೆ ವಿಶ್ವವಿದ್ಯಾನಿಲಯದ ಕ್ರಾಫರ್ಡ್…

1 hour ago

ನಿರ್ಮಾಣ ಹಂತದಲ್ಲಿದ್ದ ಹನುಮನ ದೇಗುಲದ ಛಾವಣಿ ಕುಸಿತ ; 7 ಭಕ್ತರು ಸಾವು

ಮುಂಬೈ : ಇಲ್ಲಿನ ಪರ್ಭಾನಿಯಲ್ಲಿರುವ ನಿರ್ಮಾಣ ಹಂತದ ಹನುಮನ ದೇವಾಲಯದ ಛಾವಣಿ ಕುಸಿದು 7 ಭಕ್ತರು ಸಾವನ್ನಪ್ಪಿದ್ದು, 30ಕ್ಕೂ ಅಧಿಕ…

3 hours ago

ಚೂರಿ ಇರಿತ ಆರೋಪ : ಐವರ ವಿರುದ್ಧ ಪ್ರಕರಣ

ಸಿದ್ದಾಪುರ : ಟಿಂಬರ್ ಯೂನಿಯನ್ ಸಭೆಯಲ್ಲಿ ಮಾರಾಮಾರಿ ನಡೆದು ಇಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಆರೋಪದಡಿ ಐವರ ವಿರುದ್ಧ ಸಿದ್ದಾಪುರ…

5 hours ago

ಹನೂರು | ಪೊನ್ನಾಚಿ ಗ್ರಾಮದ ಬಳಿ ಬೋನಿಗೆ ಬಿದ್ದ ಚಿರತೆ

ಹನೂರು : ಅನೇಕ ದಿನಗಳಿಂದ ಸಾಕುಪ್ರಾಣಿಗಳನ್ನು ಕೊಂದು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಚಿರತೆಯನ್ನು ಕೊನೆಗೂ ಸೆರೆ…

6 hours ago

ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ ಸಮಸ್ಯೆಯಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…

9 hours ago

ಕದನ ವಿರಾಮದ ನಡುವೆ ಮತ್ತೆ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ: 5 ಮಂದಿ ಸಾವು

ಬೈರುತ್:‌ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್‌ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…

9 hours ago