ರಾಜ್ಯ

ಸರ್ಕಾರಿ,ಅರೆ ಸರ್ಕಾರಿ ಕಟ್ಟಡಗಳ ಮೇಲೆ ಮಕ್ಕಳ ಸಹಾಯವಾಣಿ ಸಂಖ್ಯೆ ಕಡ್ಡಾಯ

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅರೆ ಸರ್ಕಾರಿ / ಸೇವಾ ಸಂಸ್ಥೆಗಳ ಕಟ್ಟಡಗಳ ಮೇಲೆ ಮಕ್ಕಳ ಸಹಾಯವಾಣಿ ಸಂಖ್ಯೆ 1098 ನ್ನು ಕಡ್ಡಾಯವಾಗಿ ಬರೆಸಲು ಮುಖ್ಯ ಕಾರ್ಯದರ್ಶಿಗಳು ಸೂಚನೆ ನೀಡಿದ್ದಾರೆ.

ಮಕ್ಕಳ ಹಕ್ಕುಗಳ ರಕ್ಷಣೆ ಇಂದಿನ ತುರ್ತು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಅನುಷ್ಠಾನಗೊಂಡಿರುವ ಮಿಷನ್ ವಾತ್ಸಲ್ಯ ಯೋಜನೆಯು ಮಕ್ಕಳ ಅಭಿವೃದ್ಧಿ ಮತ್ತು ರಕ್ಷಣೆಯ ಆದ್ಯತೆಯನ್ನು ಸಾಧಿಸುವ ಒಂದು ಮಾರ್ಗವಾಗಿದೆ. ಸಂಕಷ್ಟದಲ್ಲಿನ ಹಾಗೂ ಸವಾಲಿನಲ್ಲಿರುವ ಮಕ್ಕಳ ಹಿತರಕ್ಷಣೆಗೆ ಹೆಚ್ಚು ಒತ್ತು ನೀಡುತ್ತಿದೆ. ಇಂತಹ ಮಕ್ಕಳ ಗುರುತಿಸುವಿಕೆ, ಸಂಕಷ್ಟ ಸ್ಥಿತಿಯಲ್ಲಿ ಮಾಹಿತಿ ಹಂಚಿಕೊಳ್ಳಲು ಹಾಗೂ ಪುನರ್ ವಸತಿ ಸೇವೆ ಕಲ್ಪಿಸುವಲ್ಲಿ ಮಕ್ಕಳ ಸಹಾಯವಾಣಿ 1098 ಮಹತ್ವದ ಪಾತ್ರ ವಹಿಸುತ್ತದೆ. ಈ ಸಂಖ್ಯೆಯನ್ನು ವ್ಯಾಪಕವಾಗಿ ಪ್ರಚಾರ ಮಾಡಿದಲ್ಲಿ ಬಾಲ್ಯವಿವಾಹ, ಬಾಲಕಾರ್ಮಿಕತೆ ಸಂಕಷ್ಟದಲ್ಲಿನ ಮಕ್ಕಳ ರಕ್ಷಣೆ ಸೇರಿದಂತೆ ವಿವಿಧ ರೀತಿಯ ಮಕ್ಕಳ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಸಾಧ್ಯವಾಗಲಿದೆ.

ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರದ ಎಲ್ಲಾ ಸರ್ಕಾರಿ, ಅರೆ ಸರ್ಕಾರಿ, ಶೈಕ್ಷಣಿಕ ಸಂಸ್ಥೆಗಳು, ಖಾಸಗಿ ಸೇವಾ ಸಂಸ್ಥೆಗಳು ಸೇರಿದಂತೆ ಎಲ್ಲಾ ಕಟ್ಟಡಗಳ ಮೇಲೆ ಮಕ್ಕಳ ಸಹಾಯವಾಣಿ ಸಂಖ್ಯೆ 1098 ನ್ನು ಕಡ್ಡಾಯವಾಗಿ ಶಾಶ್ವತ ಫಲಕದಲ್ಲಿ ಪ್ರದರ್ಶಿಸಲು ಮುಖ್ಯ ಕಾರ್ಯದರ್ಶಿಗಳು ಸೂಚನೆ ನೀಡಿದ್ದಾರೆ.

ಈಗಾಗಲೇ ಕೆಲವು ಇಲಾಖೆಗಳು ಈ ಕುರಿತು ಕ್ರಮವಹಿಸಿವೆ. ಕೆಲವು ಇಲಾಖೆಗಳಲ್ಲಿ ಈ ಬಗ್ಗೆ ನಿರ್ದೇಶನವಿಲ್ಲ ಎಂಬ ಗೊಂದಲಗಳಿಂದ ಶಾಶ್ವತ ಫಲಕಗಳಲ್ಲಿ ಪ್ರದರ್ಶಿಸದೇ ಇರುವುದು ತಿಳಿದು ಬಂದಿದ್ದು, ಮಕ್ಕಳ ಸಹಾಯವಾಣಿ ಸಂಖ್ಯೆಯನ್ನು ಶಾಶ್ವತ ಫಲಕದಲ್ಲಿ ಪ್ರದರ್ಶಿಸದೆ ಇರುವ ಇಲಾಖೆಗಳು ಯಾವುದೇ ಗೊಂದಲಗಳಿಗೆ ಆಸ್ಪದ ಕೊಡದೇ ತಕ್ಷಣ ಕ್ರಮಕೈಗೊಂಡು ಮಕ್ಕಳ ಸಹಾಯವಾಣಿ ಸಂಖ್ಯೆ 1098 ನ್ನು ತಮ್ಮ ಇಲಾಖೆಯ ಶಾಶ್ವತ ಫಲಕದಲ್ಲಿ ಪ್ರದರ್ಶಿಸುವಂತೆ ಮುಖ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸಿಎಂಗೆ ವಿದ್ಯಾರ್ಥಿಗಳ ಪತ್ರ

ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…

34 mins ago

ದಿವ್ಯ ಎಂಬ ಅಂದಿನ ಕಾಲದ ಪಣ ಪರೀಕ್ಷೆ

ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…

40 mins ago

ಎಮ್ಮೆ ನಿನಗೆ ಸಾಟಿ ಇಲ್ಲ…

ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…

44 mins ago

ಭಾನುವಾರದ ಪುರವಣಿಗಳಲ್ಲಿ ಸಾಹಿತ್ಯ ಯಾಕೆ ಮಾಯ?

ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…

48 mins ago

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

12 hours ago