ರಾಜ್ಯ

ಸರ್ಕಾರಿ,ಅರೆ ಸರ್ಕಾರಿ ಕಟ್ಟಡಗಳ ಮೇಲೆ ಮಕ್ಕಳ ಸಹಾಯವಾಣಿ ಸಂಖ್ಯೆ ಕಡ್ಡಾಯ

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅರೆ ಸರ್ಕಾರಿ / ಸೇವಾ ಸಂಸ್ಥೆಗಳ ಕಟ್ಟಡಗಳ ಮೇಲೆ ಮಕ್ಕಳ ಸಹಾಯವಾಣಿ ಸಂಖ್ಯೆ 1098 ನ್ನು ಕಡ್ಡಾಯವಾಗಿ ಬರೆಸಲು ಮುಖ್ಯ ಕಾರ್ಯದರ್ಶಿಗಳು ಸೂಚನೆ ನೀಡಿದ್ದಾರೆ.

ಮಕ್ಕಳ ಹಕ್ಕುಗಳ ರಕ್ಷಣೆ ಇಂದಿನ ತುರ್ತು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಅನುಷ್ಠಾನಗೊಂಡಿರುವ ಮಿಷನ್ ವಾತ್ಸಲ್ಯ ಯೋಜನೆಯು ಮಕ್ಕಳ ಅಭಿವೃದ್ಧಿ ಮತ್ತು ರಕ್ಷಣೆಯ ಆದ್ಯತೆಯನ್ನು ಸಾಧಿಸುವ ಒಂದು ಮಾರ್ಗವಾಗಿದೆ. ಸಂಕಷ್ಟದಲ್ಲಿನ ಹಾಗೂ ಸವಾಲಿನಲ್ಲಿರುವ ಮಕ್ಕಳ ಹಿತರಕ್ಷಣೆಗೆ ಹೆಚ್ಚು ಒತ್ತು ನೀಡುತ್ತಿದೆ. ಇಂತಹ ಮಕ್ಕಳ ಗುರುತಿಸುವಿಕೆ, ಸಂಕಷ್ಟ ಸ್ಥಿತಿಯಲ್ಲಿ ಮಾಹಿತಿ ಹಂಚಿಕೊಳ್ಳಲು ಹಾಗೂ ಪುನರ್ ವಸತಿ ಸೇವೆ ಕಲ್ಪಿಸುವಲ್ಲಿ ಮಕ್ಕಳ ಸಹಾಯವಾಣಿ 1098 ಮಹತ್ವದ ಪಾತ್ರ ವಹಿಸುತ್ತದೆ. ಈ ಸಂಖ್ಯೆಯನ್ನು ವ್ಯಾಪಕವಾಗಿ ಪ್ರಚಾರ ಮಾಡಿದಲ್ಲಿ ಬಾಲ್ಯವಿವಾಹ, ಬಾಲಕಾರ್ಮಿಕತೆ ಸಂಕಷ್ಟದಲ್ಲಿನ ಮಕ್ಕಳ ರಕ್ಷಣೆ ಸೇರಿದಂತೆ ವಿವಿಧ ರೀತಿಯ ಮಕ್ಕಳ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಸಾಧ್ಯವಾಗಲಿದೆ.

ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರದ ಎಲ್ಲಾ ಸರ್ಕಾರಿ, ಅರೆ ಸರ್ಕಾರಿ, ಶೈಕ್ಷಣಿಕ ಸಂಸ್ಥೆಗಳು, ಖಾಸಗಿ ಸೇವಾ ಸಂಸ್ಥೆಗಳು ಸೇರಿದಂತೆ ಎಲ್ಲಾ ಕಟ್ಟಡಗಳ ಮೇಲೆ ಮಕ್ಕಳ ಸಹಾಯವಾಣಿ ಸಂಖ್ಯೆ 1098 ನ್ನು ಕಡ್ಡಾಯವಾಗಿ ಶಾಶ್ವತ ಫಲಕದಲ್ಲಿ ಪ್ರದರ್ಶಿಸಲು ಮುಖ್ಯ ಕಾರ್ಯದರ್ಶಿಗಳು ಸೂಚನೆ ನೀಡಿದ್ದಾರೆ.

ಈಗಾಗಲೇ ಕೆಲವು ಇಲಾಖೆಗಳು ಈ ಕುರಿತು ಕ್ರಮವಹಿಸಿವೆ. ಕೆಲವು ಇಲಾಖೆಗಳಲ್ಲಿ ಈ ಬಗ್ಗೆ ನಿರ್ದೇಶನವಿಲ್ಲ ಎಂಬ ಗೊಂದಲಗಳಿಂದ ಶಾಶ್ವತ ಫಲಕಗಳಲ್ಲಿ ಪ್ರದರ್ಶಿಸದೇ ಇರುವುದು ತಿಳಿದು ಬಂದಿದ್ದು, ಮಕ್ಕಳ ಸಹಾಯವಾಣಿ ಸಂಖ್ಯೆಯನ್ನು ಶಾಶ್ವತ ಫಲಕದಲ್ಲಿ ಪ್ರದರ್ಶಿಸದೆ ಇರುವ ಇಲಾಖೆಗಳು ಯಾವುದೇ ಗೊಂದಲಗಳಿಗೆ ಆಸ್ಪದ ಕೊಡದೇ ತಕ್ಷಣ ಕ್ರಮಕೈಗೊಂಡು ಮಕ್ಕಳ ಸಹಾಯವಾಣಿ ಸಂಖ್ಯೆ 1098 ನ್ನು ತಮ್ಮ ಇಲಾಖೆಯ ಶಾಶ್ವತ ಫಲಕದಲ್ಲಿ ಪ್ರದರ್ಶಿಸುವಂತೆ ಮುಖ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

5 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

7 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

8 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

10 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

15 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

22 hours ago