ಮಂಗಳೂರು: ರಾಜ್ಯವು ಬಾಲ್ಯ ವಿವಾಹ ಪ್ರಕರಣದಲ್ಲಿ ದೇಶದಲ್ಲಿ ಎರಡನೇ ಸ್ಥಾನ ಹೊಂದಿರುವುದು ದುರದೃಷ್ಟಕರ ಸಂಗತಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಳ್ಕರ್ ವಿಷಾದ ವ್ಯಕ್ತಪಡಿಸಿದರು.
ನಗರದಲ್ಲಿ ಸುದ್ದಿಗಾರರ ಜೊತೆ ಶನಿವಾರ(ಜು.13) ಮಾತನಾಡಿದ ಅವರು, ಜವಾಬ್ದಾರಿಯುತ ಸ್ಥಾನದಲ್ಲಿರುವ ಮಂತ್ರಿಯಾಗಿ, ನನಗೂ ತಲೆ ತಗ್ಗಿಸುವ ವಿಚಾರವಿದು. ಬಾಲ್ಯ ವಿವಾಹದಲ್ಲಿ ಬಳ್ಳಾರಿ ಜಿಲ್ಲೆಯು ರಾಜ್ಯಕ್ಕೆ ಪ್ರಥಮ ಹಾಗೂ ಬೆಳಗಾವಿ ಎರಡನೇ ಸ್ಥಾನದಲ್ಲಿದೆ ಎಂದು ಹೇಳಲೂ ನನಗೆ ನಾಚಿಕೆ ಆಗುತ್ತದೆ ಎಂದು ಹೇಳಿದರು.
ಇದಕ್ಕೆ ನಮ್ಮ ಇಲಾಖೆಯಲ್ಲಿನ ದೋಷಗಳ ಮಾತ್ರ ಕಾರಣವಲ್ಲ. ಸ್ಥಳೀಯ ಮಟ್ಟದ ಗ್ರಾಮ ಪಂಚಾಯ್ತಿ, ಪ್ರಾಥಾಮಿಕ ಶಾಲೆಯ ಎಸ್ಡಿಎಂಸಿಗಳು, ಕಾನೂನು, ಆರೋಗ್ಯ ಹಾಗೂ ಪೊಲೀಸ್ ಇಲಾಖೆಗಳು ಸಹಕಾರ ನೀಡಬೇಕು. ಎಲ್ಲರೂ ಒಗ್ಗಟ್ಟಿನಲ್ಲಿ ಕೆಲಸ ನಿರ್ವಹಿಸಿದರೆ ಮಾತ್ರ ಬಾಲ್ಯವಿವಾಹವನ್ನು ಬೇರು ಮಟ್ಟದಿಂದ ಕಿತ್ತುಹಾಕಲು ಸಾಧ್ಯ ಎಂದು ಅವರು ಹೇಳಿದರು.
ಬಾಲ್ಯವಿವಾಹವನ್ನು ಮೂಢನಂಬಿಕೆಯಿಂದ ಮಾಡುತ್ತಾರೋ, ಏನೋ ಎಂದೇ ಗೊತ್ತಾಗುತ್ತಿಲ್ಲ. ಇದನ್ನು ತಡೆಯಲು ಗ್ರಾಮ ಮಟ್ಟದಿಂದ ಜಿಲ್ಲಾ ಮಟ್ಟದವರೆಗೂ ಸಮಿತಿ ಇದೆ. ಅದರಲ್ಲಿ ವಕೀಲರು, ಸಂಘ ಸಂಸ್ಥೆಗಳ ಮುಖ್ಯಸ್ಥರು ಇದ್ದಾರೆ. ಬಾಲ್ಯವಿವಾಹದ ಬಗ್ಗೆ ನಮಗೆ ತಿಳಿದರೆ ತಕ್ಷಣ ಎಫ್ಐಆರ್ ದಾಖಲಿಸುತ್ತೇವೆ. ಕಟ್ಟುನಿಟ್ಟಿನ ಕ್ರಮ ಕೂಡ ಆಗುತ್ತಿದೆ ಎಂದರು.
ಇಷ್ಟೆಲ್ಲಾ ಕ್ರಮಗಳ ಹೊರತಾಗಿಯೂ ಬಾಲ್ಯ ವಿವಾಹ ನಡೆದು, ಬಾಲಾವಸ್ಥೆಯಲ್ಲೇ ಹೆಣ್ಣು ಮಕ್ಕಳು ಗರ್ಭಿಣಿ ಆಗುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಬೇರುಮಟ್ಟದಿಂದ ಇದನ್ನು ಕಿತ್ತುಹಾಕಲು ಪ್ರಯತ್ನಿಸಲಾಗುವುದು. ಈ ಬಗ್ಗೆ ಎಲ್ಲಾ ಅಧಿಕಾರಿಗಳಿಗೂ ನಿರ್ದೇಶನ ನೀಡಲಾಗಿದೆ ಎಂದು ಸಚಿವೆ ತಿಳಿಸಿದರು.
ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…
ರಿಯಾಧ್: ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್…
ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…
ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…
ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…
ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…