ರಾಜ್ಯ

ಮಕ್ಕಳು ಅವರಿಗೆ ತಿಳಿದಿರುವ ಭಾಷೆಯಲ್ಲಿ ಪರೀಕ್ಷೆಗಳನ್ನು ಬರೆಯುವಂತಾಗಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕೇಂದ್ರ ಸರ್ಕಾರದ ಉದ್ಯೋಗಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಮಾತ್ರ ನಡೆಸುವುದನ್ನು ಒಪ್ಪಲು ಸಾಧ್ಯವಿಲ್ಲ. ಕನ್ನಡದಲ್ಲಿ ಪ್ರವೇಶ ಪರೀಕ್ಷೆ ನಡೆಸುವಂತೆ ಈ ಹಿಂದೆ ಒತ್ತಾಯಿಸಿದ್ದೆ. ಅಗತ್ಯ ಬಿದ್ದರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಭಾಷಾ ಮಾಧ್ಯಮವನ್ನು ಮರುಪರಿಶೀಲಿಸುವಂತೆ ಪ್ರಧಾನಿ ಮೋದಿಗೆ ಮತ್ತೊಮ್ಮೆ ಪತ್ರ ಬರೆಯುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಆಯೋಜನೆ ಮಾಡಿದ್ದ 68ನೇ ಕರ್ನಾಟಕ ರಾಜ್ಯೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಕೇಂದ್ರ ಸರ್ಕಾರ ಹಿಂದಿ ಮತ್ತು ಇಂಗ್ಲಿಷ್ನಲ್ಲಿ ಮಾತ್ರ ಸ್ಪರ್ಧಾತ್ಮಕ ಪರೀಕ್ಷೆ ನಡೆಸುತ್ತದೆ. ಅದನ್ನು ನಾವು ವಿರೋಧಿಸಬೇಕು ಎಂದು ಶಿವಾಜಿ ನಗರ ಶಾಸಕ ರಿಜ್ವಾನ್ ಆರ್ಷದ್ ಅವರು ಸರಿಯಾಗಿಯೇ ಹೇಳಿದ್ದಾರೆ. ನಮ್ಮ ಮಕ್ಕಳು ಅವರಿಗೆ ತಿಳಿದಿರುವ ಭಾಷೆಯಲ್ಲಿ ಪರೀಕ್ಷೆಗಳನ್ನು ಬರೆಯುವಂತಾಗಬೇಕು. ಭಾಷಾ ಮಾಧ್ಯಮ ಮರು ಪರಿಶೀಲಿಸುವಂತೆ ನಾನು ನಮ್ಮ ಪ್ರಧಾನಿ ಅವರಿಗೆ ಮನವಿ ಮಾಡುತ್ತೇನೆ ಎಂದರು.

ಸರ್ಕಾರಿ ಶಾಲೆಗಳಲ್ಲಿ ಮಾತ್ರ ಕನ್ನಡ ಬೋಧನಾ ಮಾಧ್ಯಮವಾಗಿದೆಯೇ ಹೊರತು ಖಾಸಗಿ ಶಾಲೆಗಳಲ್ಲಿ ಅಲ್ಲ. ಖಾಸಗಿ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳು ಮಾತ್ರ ಪ್ರತಿಭಾವಂತರು ಹಾಗೂ ತಕ್ಕುದಾದ ಉದ್ಯೋಗವನ್ನು ಗಿಟ್ಟಿಸಿಕೊಳ್ಳುತ್ತಾರೆ ಎನ್ನುವ ತಪ್ಪು ಕಲ್ಪನೆ ಜನರಲ್ಲಿದೆ” ಎಂದು ಸಿಎಂ ವಿಷಾದ ವ್ಯಕ್ತಪಡಿಸಿದರು.

ಕನ್ನಡ ಮಾಧ್ಯಮದಲ್ಲಿ ಅಧ್ಯಯನ ಮಾಡಿದ ಅನೇಕ ಖ್ಯಾತ ವಿಜ್ಞಾನಿಗಳಿಗೆ ನಮ್ಮ ನಾಡು ಜನ್ಮ ನೀಡಿದೆ. ತಮ್ಮ ಆಯ್ಕೆ ಬೋಧನಾ ಮಾಧ್ಯಮದಲ್ಲಿ ಶಿಕ್ಷಣ ನೀಡುವ ಹಕ್ಕ ಪೋಷಕರಿಗೆ ಇದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ನಿಟ್ಟಿನಲ್ಲಿ ಕರ್ನಾಟಕದಲ್ಲಿ 10ನೇ ತರಗತಿವರೆಗೆ ಕನ್ನಡವನ್ನು ಕಡ್ಡಾಯಗೊಳಿಸಬೇಕು. ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಸಿಗುವಂತೆ ಮೇಲ್ದರ್ಜೆಗೇರಿಸಬೇಕು ಎಂದು ಅಭಿಪ್ರಾಯಪಟ್ಟರು.

andolanait

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

1 hour ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

1 hour ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

1 hour ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

1 hour ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

1 hour ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

1 hour ago