ರಾಜ್ಯ

ಮಕ್ಕಳನ್ನೇ ಬೆಂಬಿಡದೇ ಕಾಡುತ್ತಿದ್ದೆ ಡೆಂಗ್ಯೂ: ಶಾಲಾ ಮಕ್ಕಳ ಮೇಲೆ ತೀವ್ರ ನಿಗಾ

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮಕ್ಕಳನ್ನೇ ಬೆಂಬಿಡದೇ ಕಾಡುತ್ತಿದೆ.

ರಾಜ್ಯದಲ್ಲಿ ಡೆಂಗ್ಯೂ ಆರ್ಭಟ ಯಾಕೋ ನಿಲ್ಲುವ ಹಾಗೆ ಕಾಣುತ್ತಿಲ್ಲ. ಅದರಲ್ಲೂ ಶಾಲಾಮಕ್ಕಳನ್ನೇ ಡೆಂಗ್ಯೂ ಹೆಮ್ಮಾರಿಯಂತೆ ಕಾಡುತ್ತಿದ್ದು, ಡೆಂಗ್ಯೂ ಜ್ವರ ಬಂದವರಲ್ಲಿ ಈ ಬಾರಿ ಮಕ್ಕಳೇ ಹೆಚ್ಚು ಟಾರ್ಗೆಟ್‌ ಆಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಡೆಂಗ್ಯೂ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಶಾಲೆಗಳಲ್ಲಿ ಹೊಸ ಪ್ಲಾನ್‌ ಮಾಡಿದೆ.

ಸಿಲಿಕಾನ್‌ ಸಿಟಿ ಬೆಂಗಳೂರು ಡೆಂಗ್ಯೂ ಹಾಟ್‌ಸ್ಪಾಟ್‌ ಆಗುತ್ತಿದ್ದು, ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ಭಯಪಡುತ್ತಿದ್ದಾರೆ. ಶಾಲೆಗಳಲ್ಲಿ ಡೆಂಗ್ಯೂ ಬಗ್ಗೆ ಆರೋಗ್ಯ ಇಲಾಖೆ ಜಾಗೃತಿ ಮೂಡಿಸುತ್ತಿದ್ದು, ಮಕ್ಕಳು ಹಾಗೂ ಶಿಕ್ಷಕರು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಂಪೂರ್ಣವಾಗಿ ವಿವರ ನೀಡುತ್ತಿದೆ.

ಆರೋಗ್ಯ ಇಲಾಖೆಯು ಡೆಂಗ್ಯೂ ಜಾಸ್ತಿ ಕಂಡುಬರುತ್ತಿರುವ ಶಾಲೆಗಳ ಏರಿಯಾಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ಅಗತ್ಯ ಕ್ರಮ ವಹಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ಮಕ್ಕಳನ್ನು ಬಾಧಿಸುತ್ತಿರುವ ಡೆಂಗ್ಯೂ ತಡೆಗೆ ಆರೋಗ್ಯ ಇಲಾಖೆ ಕಠಿಣ ಕ್ರಮ ಕೈಗೊಳ್ಳುತ್ತಿದ್ದು, ಮಕ್ಕಳ ಸುರಕ್ಷತೆಗೆ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಇದರ ಜೊತೆಗೆ ಮಕ್ಕಳ ಆರೋಗ್ಯದ ಬಗ್ಗೆ ಪೋಷಕರು ಕೂಡ ಗಮನಹರಿಸಬೇಕು ಎಂದು ಸೂಚನೆ ನೀಡಲಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

2 hours ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

2 hours ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ

ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

2 hours ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಸಂಭ್ರಮ : ಮಾದಪ್ಪನಿಗೆ ಎಣ್ಣೆಮಜ್ಜನ

ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…

2 hours ago

ಕುಡಿಯುವ ನೀರು ಸಮಸ್ಯೆಗೆ ಸರ್ಕಾರದ ಕ್ರಮವೇನು? : ಅಧಿವೇಶನದಲ್ಲಿ ಎಂಎಲ್‌ಎ ಮಂಜುನಾಥ್‌ ಪ್ರಶ್ನೆ

ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…

3 hours ago

ಚಾಮರಾಜನಗರದಲ್ಲಿ ದಿಢೀರ್‌ ಆಲಿಕಲ್ಲು ಸಹಿತ ಮಳೆ ಅಬ್ಬರ

ಚಾಮರಾಜನಗರ : ರಾಜ್ಯದಲ್ಲಿ ಬೇಸಿಗೆಯ ತಾಪ ದಿನದಿಂದ ದಿನಕ್ಕೆ ಏರುತ್ತಿರುವ ಬೆನ್ನಲ್ಲೇ, ವರುಣ ದಿಢೀರ್ ಪ್ರತ್ಯಕ್ಷನಾಗಿ ಧರೆಗೆ ತಂಪೆರೆದಿದ್ದಾನೆ. ರಾಜ್ಯದ…

3 hours ago