ಬೆಂಗಳೂರು : ಧರ್ಮಸ್ಥಳದಲ್ಲಿ ಶವ ಹೂತಿದ್ದಾಗಿ ಹೇಳಿದ್ದ ದೂರುದಾರ ಚಿನ್ನಯ್ಯನನ್ನು ಮತ್ತೆ 3 ದಿನ ವಿಶೇಷ ತನಿಖಾ ತಂಡದ ಕಸ್ಟಡಿಗೆ ನೀಡಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ನ್ಯಾಯಾಲಯ ಬುಧವಾರ ಆದೇಶ ಹೊರಡಿಸಿದೆ.
ಸೆ.6ರಂದು ಚಿನ್ನಯ್ಯನನ್ನು ಮತ್ತೆ ಹಾಜರುಪಡಿಸಲು ಕೋರ್ಟ್ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಬೆಳ್ತಂಗಡಿಯ ನ್ಯಾಯಾಲಯ ದೂರುದಾರ ಚಿನ್ನಯ್ಯನನ್ನು ಹತ್ತು ದಿನಗಳ ಕಾಲ ಎಸ್ಐಟಿ ಕಸ್ಟಡಿಗೆ ನೀಡಿತ್ತು. ಬುಧವಾರ(ಸೆ.3) ಎಸ್ಐಟಿ ಕಸ್ಟಡಿ ಮುಕ್ತಾಯ ಹಿನ್ನಲೆ ಚಿನ್ನಯ್ಯನನ್ನು ಎಸ್ಐಟಿ ಪೊಲೀಸರು ಕೋರ್ಟ್ಗೆ ಹಾಜರುಪಡಿಸಿದ್ದರು.
ಇದನ್ನು ಓದಿ:ಧರ್ಮಸ್ಥಳ ಪ್ರಕರಣಕ್ಕೆ ಇಡಿ ಎಂಟ್ರಿ: ಕೆಲವರಿಗೆ ತನಿಖೆಯ ಬಿಸಿ ಎದುರಾಗುವ ಸಾಧ್ಯತೆ
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ನ್ಯಾಯಾಲಯದಲ್ಲಿ ಕೋರ್ಟ್ ಹಾಲ್ನ ಬಾಗಿಲು ಮುಚ್ಚಿ ವಿಚಾರಣೆ ಮಾಡಲಾಗಿದೆ. ಸರ್ಕಾರಿ ಅಭಿಯೋಜಕರಿಂದ ಸಾಕ್ಷಿ ಸಂಗ್ರಹಣೆ, ಬಾಕಿ ವಿಚಾರಣೆ ಇತ್ಯಾದಿ ವಿವರಗಳ ತನಿಖೆಯ ಪ್ರಗತಿ ವರದಿ ಸಲ್ಲಿಕೆ ಮಾಡಿದರು.
ಎಸ್ಐಟಿಯಿಂದಲೂ ಕೋರ್ಟ್ಗೆ ತನಿಖಾ ಪ್ರಗತಿ ವರದಿ ಸಲ್ಲಿಕೆ ಮಾಡಲಾಯಿತು. ಕಾನೂನು ಸೇವಾ ಪ್ರಾಧಿಕಾರದ ವಕೀಲರಿಂದ ಚಿನ್ನಯ್ಯ ಪರ ವಾದ ಮಂಡಿಸಿದರು. ಈ ವೇಳೆ ಎಸ್ಐಟಿ ತನಿಖಾಧಿಕಾರಿ, ಸರ್ಕಾರಿ ಅಭಿಯೋಜಕ, ಚಿನ್ನಯ್ಯ ಮತ್ತು ಕಾನೂನು ಸೇವಾ ಪ್ರಾಧಿಕಾರದ ಇಬ್ಬರು ವಕೀಲರು ಉಪಸ್ಥಿತರಿದ್ದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…