ರಾಜ್ಯ

ಧರ್ಮಸ್ಥಳ : ಚಿನ್ನಯ್ಯ ಮತ್ತೆ 3 ದಿನ ಎಸ್‌ಐಟಿ ವಶಕ್ಕೆ

ಬೆಂಗಳೂರು : ಧರ್ಮಸ್ಥಳದಲ್ಲಿ ಶವ ಹೂತಿದ್ದಾಗಿ ಹೇಳಿದ್ದ ದೂರುದಾರ ಚಿನ್ನಯ್ಯನನ್ನು ಮತ್ತೆ 3 ದಿನ ವಿಶೇಷ ತನಿಖಾ ತಂಡದ ಕಸ್ಟಡಿಗೆ ನೀಡಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ನ್ಯಾಯಾಲಯ ಬುಧವಾರ ಆದೇಶ ಹೊರಡಿಸಿದೆ.

ಸೆ.6ರಂದು ಚಿನ್ನಯ್ಯನನ್ನು ಮತ್ತೆ ಹಾಜರುಪಡಿಸಲು ಕೋರ್ಟ್ ಅಧಿಕಾರಿಗಳಿಗೆ​ ಸೂಚನೆ ನೀಡಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಬೆಳ್ತಂಗಡಿಯ ನ್ಯಾಯಾಲಯ ದೂರುದಾರ ಚಿನ್ನಯ್ಯನನ್ನು ಹತ್ತು ದಿನಗಳ ಕಾಲ ಎಸ್​ಐಟಿ ಕಸ್ಟಡಿಗೆ ನೀಡಿತ್ತು. ಬುಧವಾರ(ಸೆ.3) ಎಸ್​ಐಟಿ ಕಸ್ಟಡಿ ಮುಕ್ತಾಯ ಹಿನ್ನಲೆ ಚಿನ್ನಯ್ಯನನ್ನು ಎಸ್ಐಟಿ ಪೊಲೀಸರು ಕೋರ್ಟ್​ಗೆ ಹಾಜರುಪಡಿಸಿದ್ದರು.

ಇದನ್ನು ಓದಿ:ಧರ್ಮಸ್ಥಳ ಪ್ರಕರಣಕ್ಕೆ ಇಡಿ ಎಂಟ್ರಿ: ಕೆಲವರಿಗೆ ತನಿಖೆಯ ಬಿಸಿ ಎದುರಾಗುವ ಸಾಧ್ಯತೆ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ನ್ಯಾಯಾಲಯದಲ್ಲಿ ಕೋರ್ಟ್ ಹಾಲ್​ನ ಬಾಗಿಲು ಮುಚ್ಚಿ ವಿಚಾರಣೆ ಮಾಡಲಾಗಿದೆ. ಸರ್ಕಾರಿ ಅಭಿಯೋಜಕರಿಂದ ಸಾಕ್ಷಿ ಸಂಗ್ರಹಣೆ, ಬಾಕಿ ವಿಚಾರಣೆ ಇತ್ಯಾದಿ ವಿವರಗಳ ತನಿಖೆಯ ಪ್ರಗತಿ ವರದಿ ಸಲ್ಲಿಕೆ ಮಾಡಿದರು.

ಎಸ್ಐಟಿಯಿಂದಲೂ ಕೋರ್ಟ್‌ಗೆ ತನಿಖಾ ಪ್ರಗತಿ ವರದಿ ಸಲ್ಲಿಕೆ ಮಾಡಲಾಯಿತು. ಕಾನೂನು ಸೇವಾ ಪ್ರಾಧಿಕಾರದ ವಕೀಲರಿಂದ ಚಿನ್ನಯ್ಯ ಪರ ವಾದ ಮಂಡಿಸಿದರು. ಈ ವೇಳೆ ಎಸ್ಐಟಿ ತನಿಖಾಧಿಕಾರಿ‌, ಸರ್ಕಾರಿ ಅಭಿಯೋಜಕ, ಚಿನ್ನಯ್ಯ ಮತ್ತು ಕಾನೂನು ಸೇವಾ ಪ್ರಾಧಿಕಾರದ ಇಬ್ಬರು ವಕೀಲರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

11 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

11 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

12 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

14 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

17 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

17 hours ago