ರಾಜ್ಯ

ಧರ್ಮಸ್ಥಳ : ಚಿನ್ನಯ್ಯ ಮತ್ತೆ 3 ದಿನ ಎಸ್‌ಐಟಿ ವಶಕ್ಕೆ

ಬೆಂಗಳೂರು : ಧರ್ಮಸ್ಥಳದಲ್ಲಿ ಶವ ಹೂತಿದ್ದಾಗಿ ಹೇಳಿದ್ದ ದೂರುದಾರ ಚಿನ್ನಯ್ಯನನ್ನು ಮತ್ತೆ 3 ದಿನ ವಿಶೇಷ ತನಿಖಾ ತಂಡದ ಕಸ್ಟಡಿಗೆ ನೀಡಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ನ್ಯಾಯಾಲಯ ಬುಧವಾರ ಆದೇಶ ಹೊರಡಿಸಿದೆ.

ಸೆ.6ರಂದು ಚಿನ್ನಯ್ಯನನ್ನು ಮತ್ತೆ ಹಾಜರುಪಡಿಸಲು ಕೋರ್ಟ್ ಅಧಿಕಾರಿಗಳಿಗೆ​ ಸೂಚನೆ ನೀಡಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಬೆಳ್ತಂಗಡಿಯ ನ್ಯಾಯಾಲಯ ದೂರುದಾರ ಚಿನ್ನಯ್ಯನನ್ನು ಹತ್ತು ದಿನಗಳ ಕಾಲ ಎಸ್​ಐಟಿ ಕಸ್ಟಡಿಗೆ ನೀಡಿತ್ತು. ಬುಧವಾರ(ಸೆ.3) ಎಸ್​ಐಟಿ ಕಸ್ಟಡಿ ಮುಕ್ತಾಯ ಹಿನ್ನಲೆ ಚಿನ್ನಯ್ಯನನ್ನು ಎಸ್ಐಟಿ ಪೊಲೀಸರು ಕೋರ್ಟ್​ಗೆ ಹಾಜರುಪಡಿಸಿದ್ದರು.

ಇದನ್ನು ಓದಿ:ಧರ್ಮಸ್ಥಳ ಪ್ರಕರಣಕ್ಕೆ ಇಡಿ ಎಂಟ್ರಿ: ಕೆಲವರಿಗೆ ತನಿಖೆಯ ಬಿಸಿ ಎದುರಾಗುವ ಸಾಧ್ಯತೆ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ನ್ಯಾಯಾಲಯದಲ್ಲಿ ಕೋರ್ಟ್ ಹಾಲ್​ನ ಬಾಗಿಲು ಮುಚ್ಚಿ ವಿಚಾರಣೆ ಮಾಡಲಾಗಿದೆ. ಸರ್ಕಾರಿ ಅಭಿಯೋಜಕರಿಂದ ಸಾಕ್ಷಿ ಸಂಗ್ರಹಣೆ, ಬಾಕಿ ವಿಚಾರಣೆ ಇತ್ಯಾದಿ ವಿವರಗಳ ತನಿಖೆಯ ಪ್ರಗತಿ ವರದಿ ಸಲ್ಲಿಕೆ ಮಾಡಿದರು.

ಎಸ್ಐಟಿಯಿಂದಲೂ ಕೋರ್ಟ್‌ಗೆ ತನಿಖಾ ಪ್ರಗತಿ ವರದಿ ಸಲ್ಲಿಕೆ ಮಾಡಲಾಯಿತು. ಕಾನೂನು ಸೇವಾ ಪ್ರಾಧಿಕಾರದ ವಕೀಲರಿಂದ ಚಿನ್ನಯ್ಯ ಪರ ವಾದ ಮಂಡಿಸಿದರು. ಈ ವೇಳೆ ಎಸ್ಐಟಿ ತನಿಖಾಧಿಕಾರಿ‌, ಸರ್ಕಾರಿ ಅಭಿಯೋಜಕ, ಚಿನ್ನಯ್ಯ ಮತ್ತು ಕಾನೂನು ಸೇವಾ ಪ್ರಾಧಿಕಾರದ ಇಬ್ಬರು ವಕೀಲರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

4 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

4 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

4 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

4 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

4 hours ago

ʼಮಣ್ಣಿನ ಗಣಪನಿಗೆ ಮನ್ನಣೆಗೆ ಸಿಗಲಿʼ

ಭಾರತಿ ಸಜ್ಜನ್‌ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…

5 hours ago