ರಾಜ್ಯ

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ : ಡಿಎನ್‌ಎ ಅರ್ಜಿ ವಜಾ

ಬೆಂಗಳೂರು : ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಾಧೀಶ ಮೈಕಲ್ ಡಿ ಕುನ್ಹಾ ಅವರ ತನಿಖಾ ವರದಿಯನ್ನು ಪ್ರಶ್ನಿಸಿ ಡಿಎನ್‌ಎ ಎಂಟರ್‌ಟೈನ್‌ಮೆಂಟ್ ನೆಟ್‌ವರ್ಕ್ ಲಿಮಿಟೆಡ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಹಲವು ವಿಶ್ಲೇಷಣೆಗಳು, ವಾದ-ಪ್ರತಿವಾದಗಳ ನಂತರ, ಹೈಕೋರ್ಟ್ ವಿಭಾಗೀಯ ಪೀಠವು ಡಿಎನ್‌ಎ ಸಂಸ್ಥೆಯು ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ. ನ್ಯಾ.ಡಿ.ಕೆ.ಸಿಂಗ್ ಮತ್ತು ನ್ಯಾ. ತಾರಾ ವಿತಾಸ್ತಾ ಗಂಜು ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ.

ಈ ಪ್ರಕರಣದಲ್ಲಿ ನಿವೃತ್ತ ನ್ಯಾಯಾಧೀಶ ಮೈಕಲ್ ಕುನ್ಹಾ ನೀಡಿದ್ದ ತನಿಖಾ ವರದಿ ವಿವಾದಕ್ಕೆ ಕಾರಣವಾಗಿತ್ತು. ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಜನಸಂದಣಿಯಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆ ತನಿಖೆಗೆ ಕುನ್ಹಾ ಆಯೋಗವನ್ನು ರಚಿಸಲಾಗಿತ್ತು. ಘಟನೆಯ ಸಂದರ್ಭ, ಭದ್ರತಾ ವ್ಯವಸ್ಥೆಗಳ ವೈಫಲ್ಯ, ಕಾರ್ಯಕ್ರಮ ನಿರ್ವಹಣೆಯಲ್ಲಿನ ಅವ್ಯವಸ್ಥೆಗಳು ಸೇರಿ ಹಲವು ಅಂಶಗಳನ್ನು ವರದಿ ವಿವರಿಸಿದೆ. ಆದರೆ ವರದಿಯ ಹಲವು ನಿರ್ಣಾಯಕ ಭಾಗಗಳು ಡಿಎನ್‌ಎ ಎಂಟರ್‌ಟೈನ್‌ಮೆಂಟ್ ನೆಟ್‌ವರ್ಕ್ ವಿರುದ್ಧವಾಗಿ ದಾಖಲಾಗಿವೆ.

ಇದನ್ನೂ ಓದಿ:-ಮೆಕ್ಕೆಜೋಳದ ಬೆಲೆಕುಸಿತ : ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರದ ನೆರವು : ಸಿಎಂ

ಕುನ್ಹಾ ವರದಿಯಲ್ಲಿ ಡಿಎನ್‌ಎ ಎಂಟರ್‌ಟೈನ್‌ಮೆಂಟ್ ನೆಟ್‌ವರ್ಕ್ ಸಂಸ್ಥೆಯದೇ ತಪ್ಪು ಎಂಬ ರೀತಿಯ ಉಲ್ಲೇಖಗಳಿವೆ, ತನಿಖೆ ಇನ್ನೂ ಪೂರ್ಣವಾಗದೇ ಇದ್ದರೂ ಆರೋಪದಂತಹ ಪದಪ್ರಯೋಗ ಬಳಸಲಾಗಿದೆ ಎಂಬುದು ಡಿಎನ್‌ಎ ಸಂಸ್ಥೆಯ ಮುಖ್ಯ ಆಕ್ಷೇಪವಾಗಿತ್ತು. ತನಿಖೆಯ ಅಂತಿಮ ನಿರ್ಣಯಕ್ಕೆ ಬರಬೇಕಿದ್ದ ಹಂತದಲ್ಲೇ ಆರೋಪದ ನೋಟ ನೀಡಿರುವುದು ನ್ಯಾಯ, ಪ್ರಕ್ರಿಯೆಗಳ ಕುರಿತ ನಿರ್ದಿಷ್ಟತೆಯನ್ನು ಉಲ್ಲಂಘಿಸುವಂತಿದೆ ಎಂದು ಡಿಎನ್‌ಎ ಪರ ವಕೀಲರು ವಾದಿಸಿದ್ದರು. ಅಲ್ಲದೇ ವರದಿಯಲ್ಲಿರುವ ಹಲವಾರು ಅಂಶಗಳು ಪಕ್ಷಪಾತದ ಸ್ವರೂಪದಲ್ಲಿವೆ, ಪರಿಶೀಲನೆ ಅಥವಾ ವಿಷಯ ಪ್ರಮಾಣದ ಕೊರತೆಯಿದೆ ಎಂಬುದು ಮತ್ತೊಂದು ಆಕ್ಷೇಪವಾಗಿತ್ತು. ಈ ಹಿನ್ನೆಲೆಯಲ್ಲಿ ಕುನ್ಹಾ ವರದಿ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿತ್ತು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

5 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

5 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

5 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

5 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

5 hours ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

5 hours ago