ಚಿತ್ರದುರ್ಗ: ಚಿತ್ರದುರ್ಗದ ಚಳ್ಳಕೆರೆ ಗೇಟ್ ಸಮೀಪವಿರುವ ಜೈಲ್ ರಸ್ತೆಯಲ್ಲಿರುವ ಪಾಳುಬಿದ್ದ ಮನೆಯೊಂದರಲ್ಲಿ ಐದು ಅಸ್ಥಿಪಂಜರಗಳು ಪತ್ತೆಯಾಗಿವೆ. ಚಿತ್ರದುರ್ಗದ ದೊಡ್ಡ ಸಿದ್ದವ್ವನಹಳ್ಳಿಯ ಜಗನ್ನಾಥ್ ರೆಡ್ಡಿ ಎಂಬವರಿಗೆ ಸೇರಿದ ಮನೆ ಇದಾಗಿದೆ. ಇವರು ಪಿಡಬ್ಲ್ಯುಡಿ ಎಕ್ಸಿಕ್ಯೂಟಿವ್ ಇಂಜಿನಿಯರ್ ಆಗಿದ್ದು ನಿವೃತ್ತರಾಗಿದ್ದರು. ಮನೆಯ ಮುಂದೆ ನಿವೃತ್ತ ಇಂಜಿನಿಯರ್ ಎಂಬ ಬೋರ್ಡ್ ಇದೆ.
ಸ್ಥಳೀಯ ಪವನ್ ಕುಮಾರ್ ಎಂಬುವರು ಚಿತ್ರದುರ್ಗ ಬಡಾವಣೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಇವೆಲ್ಲವೂ ಒಂದೇ ಕುಟುಂಬಸ್ಥರ ಶವಗಳು ಎಂದು ಹೇಳಲಾಗುತ್ತಿದ್ದು, ಸುಮಾರು 4 ವರ್ಷಗಳ ಹಿಂದೆಯೇ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಜಗನ್ನಾಥ ರೆಡ್ಡಿಗೆ 3 ಜನ ಗಂಡು ಮಕ್ಕಳು ಹಾಗೂ ಒಬ್ಬರು ಹೆಣ್ಣು ಮಗಳು ಎಂದು ಹೇಳಲಾಗಿದೆ. ಕುಟುಂಬಸ್ಥರಿಗೆ ಗಂಭೀರ ಆರೋಗ್ಯ ಸಮಸ್ಯೆ ಇತ್ತು ಎಂದು ಹೇಳಲಾಗುತ್ತಿದೆ.
2022ರ ಬಳಿಕ ಈ ಮನೆಯವರು ಯಾರಿಗೂ ಕಾಣಿಸಿಕೊಂಡಿಲ್ಲ. ಈಗ ಅವರ ಮನೆಯಲ್ಲಿ ಅಸ್ತಿಪಂಜರಗಳು ತೊರೆತಿದ್ದು, ಈ ಪ್ರಕರಣ ಹೆಚ್ಚಿನ ಕುತೂಹಲಕ್ಕೆ ದಾರಿಮಾಡಿ ಕೊಟ್ಟಿದೆ. ಸಿಕ್ಕ ಐದು ಅಸ್ಥಿಪಂಜರಗಳು ಯಾರು, ಯಾರದು? ಎಲ್ಲರ ಸಾವಿಗೆ ಕಾರಣವೇನು? ನಾಲ್ಕಾರು ವರ್ಷಗಳಾದರೂ ಈ ಸಾವುಗಳು ಯಾರ ಗಮನಕ್ಕೂ ಬರದೇ ಇದ್ದುದು ಹೇಗೆ? ಎಂಬೆಲ್ಲಾ ಪ್ರಶ್ನೆಗಳು ಮೂಡತೊಡಗಿದ್ದು, ಸ್ಥಳೀಯರು ಆತಂಕಕ್ಕೀಡಾಗಿದ್ದಾರೆ.
ಈ ಸಂಬಂಧ ಚಿತ್ರದುರ್ಗಾ ಬಡಾವಣೆ ಪೊಲೀಸರು ಪ್ರಕರಣ ದಾಖಲಿಸಿದ್ದು, ತನಿಖೆ ಕೈಗೊಂಡಿದ್ದಾರೆ. ಜೊತೆಗೆ ಬೆರಳಚ್ಚು ತಂಡ ಮತ್ತು ವಿಧಿ ವಿಜ್ಞಾನ ತಂಡ ಕೂಡಾ ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಹನೂರು : ತಾಲೂಕಿನ ಪೊನ್ನಾಚಿ ಗ್ರಾಮದಲ್ಲಿ ಇಬ್ಬರು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಹನೂರು…
ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ…
ಬೆಂಗಳೂರು: ಎಲ್ಲಾ ರಾಜ್ಯದಲ್ಲೂ ದ್ವಿಭಾಷಾ ಶಿಕ್ಷಣದ ವ್ಯವಸ್ಥೆ ಜಾರಿಯಲ್ಲಿದೆ ಎಂದು ಶಾಲಾ ಶಿಕ್ಷಣ ಸಾಕ್ಷರತಾ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು,…
ಬೆಂಗಳೂರು: ಬೇಸಿಗೆಯ ಉಷ್ಣತೆ ಹೆಚ್ಚಾದಂತೆ ರಾಜ್ಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಯಿದೆ ಎಂದು ರಾಜ್ಯ ಮಟ್ಟದ ಹವಾಮಾನ ವೀಕ್ಷಣಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಂತರರಾಜ್ಯ ಪಾಲಾರ್ ಚೆಕ್ಪೋಸ್ಟ್ನಲ್ಲಿ ಒಂಟಿ ಸಲಗದ ದಾಂಧಲೆಗೆ ಅರಣ್ಯ…
ಬೆಂಗಳೂರು: ಸೈಬರ್ ಅಪರಾಧಗಳು ಸೇರಿದಂತೆ ನಾನಾ ಅಪರಾಧಗಳಲ್ಲಿ ನಮ್ಮ ರಾಜ್ಯ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದ್ದು ಇದನ್ನು ಕಟ್ಟುನಿಟ್ಟಾಗಿ ತಡೆಗಟ್ಟಿ ಎಂದು…