ರಾಜ್ಯ

ಚಿತ್ರದುರ್ಗ: ಪಾಳು ಬಿದ್ದ ಮನೆಯೊಳಗೆ 5 ಅಸ್ಥಿಪಂಜರ ಪತ್ತೆ!

ಚಿತ್ರದುರ್ಗ: ಚಿತ್ರದುರ್ಗದ ಚಳ್ಳಕೆರೆ ಗೇಟ್​ ಸಮೀಪವಿರುವ ಜೈಲ್ ರಸ್ತೆಯಲ್ಲಿರುವ ಪಾಳುಬಿದ್ದ ಮನೆಯೊಂದರಲ್ಲಿ ಐದು ಅಸ್ಥಿಪಂಜರಗಳು ಪತ್ತೆಯಾಗಿವೆ. ಚಿತ್ರದುರ್ಗದ ದೊಡ್ಡ ಸಿದ್ದವ್ವನಹಳ್ಳಿಯ ಜಗನ್ನಾಥ್ ರೆಡ್ಡಿ ಎಂಬವರಿಗೆ ಸೇರಿದ ಮನೆ ಇದಾಗಿದೆ. ಇವರು ಪಿಡಬ್ಲ್ಯುಡಿ ಎಕ್ಸಿಕ್ಯೂಟಿವ್ ಇಂಜಿನಿಯರ್ ಆಗಿದ್ದು ನಿವೃತ್ತರಾಗಿದ್ದರು. ಮನೆಯ ಮುಂದೆ ನಿವೃತ್ತ ಇಂಜಿನಿಯರ್ ಎಂಬ ಬೋರ್ಡ್ ಇದೆ.

ಸ್ಥಳೀಯ  ಪವನ್ ಕುಮಾರ್ ಎಂಬುವರು ಚಿತ್ರದುರ್ಗ ಬಡಾವಣೆ ಪೊಲೀಸ್​​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇವೆಲ್ಲವೂ ಒಂದೇ ಕುಟುಂಬಸ್ಥರ ಶವಗಳು ಎಂದು ಹೇಳಲಾಗುತ್ತಿದ್ದು, ಸುಮಾರು 4 ವರ್ಷಗಳ ಹಿಂದೆಯೇ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಜಗನ್ನಾಥ ರೆಡ್ಡಿಗೆ 3 ಜನ ಗಂಡು ಮಕ್ಕಳು ಹಾಗೂ ಒಬ್ಬರು ಹೆಣ್ಣು ಮಗಳು ಎಂದು ಹೇಳಲಾಗಿದೆ. ಕುಟುಂಬಸ್ಥರಿಗೆ ಗಂಭೀರ ಆರೋಗ್ಯ ಸಮಸ್ಯೆ ಇತ್ತು ಎಂದು ಹೇಳಲಾಗುತ್ತಿದೆ.

2022ರ ಬಳಿಕ ಈ ಮನೆಯವರು ಯಾರಿಗೂ ಕಾಣಿಸಿಕೊಂಡಿಲ್ಲ. ಈಗ ಅವರ ಮನೆಯಲ್ಲಿ ಅಸ್ತಿಪಂಜರಗಳು ತೊರೆತಿದ್ದು, ಈ ಪ್ರಕರಣ ಹೆಚ್ಚಿನ ಕುತೂಹಲಕ್ಕೆ ದಾರಿಮಾಡಿ ಕೊಟ್ಟಿದೆ. ಸಿಕ್ಕ ಐದು ಅಸ್ಥಿಪಂಜರಗಳು ಯಾರು, ಯಾರದು? ಎಲ್ಲರ ಸಾವಿಗೆ ಕಾರಣವೇನು? ನಾಲ್ಕಾರು ವರ್ಷಗಳಾದರೂ ಈ ಸಾವುಗಳು ಯಾರ ಗಮನಕ್ಕೂ ಬರದೇ ಇದ್ದುದು ಹೇಗೆ? ಎಂಬೆಲ್ಲಾ ಪ್ರಶ್ನೆಗಳು ಮೂಡತೊಡಗಿದ್ದು, ಸ್ಥಳೀಯರು ಆತಂಕಕ್ಕೀಡಾಗಿದ್ದಾರೆ.

ಈ ಸಂಬಂಧ ಚಿತ್ರದುರ್ಗಾ ಬಡಾವಣೆ ಪೊಲೀಸರು ಪ್ರಕರಣ ದಾಖಲಿಸಿದ್ದು, ತನಿಖೆ ಕೈಗೊಂಡಿದ್ದಾರೆ. ಜೊತೆಗೆ ಬೆರಳಚ್ಚು ತಂಡ ಮತ್ತು ವಿಧಿ ವಿಜ್ಞಾನ ತಂಡ ಕೂಡಾ ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

andolanait

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

5 hours ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

7 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

9 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

9 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

10 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

11 hours ago