ಚಿತ್ರದುರ್ಗ: ಚಿತ್ರದುರ್ಗದ ಚಳ್ಳಕೆರೆ ಗೇಟ್ ಸಮೀಪವಿರುವ ಜೈಲ್ ರಸ್ತೆಯಲ್ಲಿರುವ ಪಾಳುಬಿದ್ದ ಮನೆಯೊಂದರಲ್ಲಿ ಐದು ಅಸ್ಥಿಪಂಜರಗಳು ಪತ್ತೆಯಾಗಿವೆ. ಚಿತ್ರದುರ್ಗದ ದೊಡ್ಡ ಸಿದ್ದವ್ವನಹಳ್ಳಿಯ ಜಗನ್ನಾಥ್ ರೆಡ್ಡಿ ಎಂಬವರಿಗೆ ಸೇರಿದ ಮನೆ ಇದಾಗಿದೆ. ಇವರು ಪಿಡಬ್ಲ್ಯುಡಿ ಎಕ್ಸಿಕ್ಯೂಟಿವ್ ಇಂಜಿನಿಯರ್ ಆಗಿದ್ದು ನಿವೃತ್ತರಾಗಿದ್ದರು. ಮನೆಯ ಮುಂದೆ ನಿವೃತ್ತ ಇಂಜಿನಿಯರ್ ಎಂಬ ಬೋರ್ಡ್ ಇದೆ.
ಸ್ಥಳೀಯ ಪವನ್ ಕುಮಾರ್ ಎಂಬುವರು ಚಿತ್ರದುರ್ಗ ಬಡಾವಣೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಇವೆಲ್ಲವೂ ಒಂದೇ ಕುಟುಂಬಸ್ಥರ ಶವಗಳು ಎಂದು ಹೇಳಲಾಗುತ್ತಿದ್ದು, ಸುಮಾರು 4 ವರ್ಷಗಳ ಹಿಂದೆಯೇ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಜಗನ್ನಾಥ ರೆಡ್ಡಿಗೆ 3 ಜನ ಗಂಡು ಮಕ್ಕಳು ಹಾಗೂ ಒಬ್ಬರು ಹೆಣ್ಣು ಮಗಳು ಎಂದು ಹೇಳಲಾಗಿದೆ. ಕುಟುಂಬಸ್ಥರಿಗೆ ಗಂಭೀರ ಆರೋಗ್ಯ ಸಮಸ್ಯೆ ಇತ್ತು ಎಂದು ಹೇಳಲಾಗುತ್ತಿದೆ.
2022ರ ಬಳಿಕ ಈ ಮನೆಯವರು ಯಾರಿಗೂ ಕಾಣಿಸಿಕೊಂಡಿಲ್ಲ. ಈಗ ಅವರ ಮನೆಯಲ್ಲಿ ಅಸ್ತಿಪಂಜರಗಳು ತೊರೆತಿದ್ದು, ಈ ಪ್ರಕರಣ ಹೆಚ್ಚಿನ ಕುತೂಹಲಕ್ಕೆ ದಾರಿಮಾಡಿ ಕೊಟ್ಟಿದೆ. ಸಿಕ್ಕ ಐದು ಅಸ್ಥಿಪಂಜರಗಳು ಯಾರು, ಯಾರದು? ಎಲ್ಲರ ಸಾವಿಗೆ ಕಾರಣವೇನು? ನಾಲ್ಕಾರು ವರ್ಷಗಳಾದರೂ ಈ ಸಾವುಗಳು ಯಾರ ಗಮನಕ್ಕೂ ಬರದೇ ಇದ್ದುದು ಹೇಗೆ? ಎಂಬೆಲ್ಲಾ ಪ್ರಶ್ನೆಗಳು ಮೂಡತೊಡಗಿದ್ದು, ಸ್ಥಳೀಯರು ಆತಂಕಕ್ಕೀಡಾಗಿದ್ದಾರೆ.
ಈ ಸಂಬಂಧ ಚಿತ್ರದುರ್ಗಾ ಬಡಾವಣೆ ಪೊಲೀಸರು ಪ್ರಕರಣ ದಾಖಲಿಸಿದ್ದು, ತನಿಖೆ ಕೈಗೊಂಡಿದ್ದಾರೆ. ಜೊತೆಗೆ ಬೆರಳಚ್ಚು ತಂಡ ಮತ್ತು ವಿಧಿ ವಿಜ್ಞಾನ ತಂಡ ಕೂಡಾ ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…