ರಾಜ್ಯ

ಚಿತ್ರದುರ್ಗ ಬಸ್‌ ದುರಂತ | ಬಸ್‌ ಚಾಲಕ ಮೊಹಮ್ಮದ್‌ ರಫೀಕ್‌ ಸಾವು ; ಸಾವಿನ ಸಂಖ್ಯೆ 7ಕ್ಕೆ ಏರಿಕೆ

ಚಿತ್ರದುರ್ಗಾ : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಲಾರಿ ಡಿಕ್ಕಿಯಾಗಿ ಖಾಸಗಿ ಬಸ್ ಹೊತ್ತಿ ಉರಿದ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡು ಸಾವು – ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಸೀ ಬರ್ಡ್ ಬಸ್ ಚಾಲಕ ಚಿಕಿತ್ಸೆ ಫಲಕಾರಿಯಾದೇ ಮೃತಪಟ್ಟಿದ್ದಾರೆ. ಈ ಮೂಲಕ ಆಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 7 ಕ್ಕೆ ಏರಿಕೆಯಾಗಿದೆ.

ಜೊತೆಗೆ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುಗಳ ಚಿಕಿತ್ಸೆ ಮುಂದುವರಿದಿದೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳುಗಳಲ್ಲಿ ಸದ್ಯ ಒಬ್ಬರು ಡಿಸ್ಚಾರ್ಜ್ ಆಗಿದ್ದಾರೆ. ಉಳಿದ ಮೂವರಿಗೆ ಬರ್ನ್ ವಾರ್ಡ್‍ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೊಂದೆಡೆ, ಮೃತದೇಹಗಳು ಸಂಪೂರ್ಣ ಸುಟ್ಟು ಕರಕಲಾಗಿರುವುದರಿಂದ ಗುರುತು ಪತ್ತೆಗೆ ಸಾಧ್ಯವಾಗದ ಹಿನ್ನೆಲೆಯಲ್ಲಿ ಡಿಎನ್ ಎ ಪರೀಕ್ಷೆಗೆ ಮುಂದಾಗಿದ್ದಾರೆ.

ಘಟನೆಯಲ್ಲಿ ಮಹಮದ್ ರಫೀಕ್ ತೀವ್ರವಾಗಿ ಗಾಯಗೊಂಡಿದ್ದರು. ಅಪಘಾತದ ರಭಸಕ್ಕೆ ಅವರ ಎರಡು ಕಾಲುಗಳು ಮತ್ತು ಒಂದು ಕೈ ಮುರಿದಿದ್ದು, ಇದೀಗ ಸಾವನಪ್ಪಿದ್ದಾರೆ.

ಬಸ್ ದುರಂತದಲ್ಲಿ ಚಾಲಕ ಮೊಹಮ್ಮದ್ ರಫೀಕ್ ಗಂಭೀರವಾಗಿ ಗಾಯಗೊಂಡಿದ್ದರು. ಅಪಘಾತದ ರಭಸಕ್ಕೆ ಅವರ ಎರಡು ಕಾಲುಗಳು ಮತ್ತು ಒಂದು ಕೈ ಮುರಿದಿತ್ತು.ಅಪಘಾತದ ನಂತರ ತ್ವರಿತವಾಗಿ ಅವರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಾತ್ರಿ ತುರ್ತು ಆಪರೇಷನ್ ನಡೆಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ.

ಹಾವೇರಿ ಜಿಲ್ಲೆ ಶಿಗ್ಗಾಂವಿ ನಿವಾಸಿಯಾಗಿದ್ದ ರಫೀಕ್ ಅಪಘಾತದ ಬಳಿಕ ಗಂಭೀರವಾಗಿ ಗಾಯಗೊಂಡಿದ್ದರು.

ಇದನ್ನು ಓದಿ: ಅರಮನೆ ಬಳಿ ಹೀಲಿಯಂ ಸಿಲಿಂಡರ್ ಸ್ಫೋಟ : ಮಹತ್ವದ ಮಾಹಿತಿ ಕೊಟ್ಟ ಗೃಹ ಸಚಿವ ಪರಮೇಶ್ವರ

ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಸೀಬರ್ಡ್ ಎಕ್ಸಿಕ್ಯೂಟಿವ್ ಸ್ಲೀಪರ್ ಬಸ್‍ಗೆ ಎದುರಿನಿಂದ ಬಂದ ಕಂಟೈನರ್ ಲಾರಿ ಡಿವೈಡರ್ ದಾಟಿ ಡಿಕ್ಕಿ ಹೊಡೆದಿತ್ತು. ಡಿಕ್ಕಿಯ ರಭಸಕ್ಕೆ ಬಸ್ ಬೆಂಕಿಗೆ ಆಹುತಿಯಾಗಿ ಸಂಪೂರ್ಣ ಕರಕಲಾಗಿತ್ತು.ಬಸ್‍ನಲ್ಲಿ ಒಟ್ಟು 33 ಪ್ರಯಾಣಿಕರು ಇದ್ದರು. ಇವರಲ್ಲಿ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಕಂಟೈನರ್ ಚಾಲಕ ಸೇರಿದಂತೆ ಮೃತರ ಸಂಖ್ಯೆ 6 ಎಂದು ಪೊಲೀಸರು ದೃಢಪಡಿಸಿದ್ದರು.

ಮೃತರಲ್ಲಿ ಬಿಂಧು ಮತ್ತು ಅವರ ನಾಲ್ಕೂವರೆ ವರ್ಷದ ಮಗಳು ಗ್ರೇಯಾ, ಮಾನಸ, ನವ್ಯ, ರಶ್ಮಿ ಮತ್ತು ಕಂಟೈನರ್ ಚಾಲಕ ಇದ್ದಾರೆ. ಮೃತದೇಹಗಳ ಗುರುತು ಪತ್ತೆಯಾಗಿ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ.

ಡಿಎನ್ ಎ ಪರೀಕ್ಷೆ
ಚಿತ್ರದುರ್ಗದ ಹಿರಿಯೂರು ಬಳಿ ಗುರುವಾರ ಸಂಭವಿಸಿದ ಬಸ್ ಬಸ್ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದ್ದು, ಈ ನಡುವೆ ಮೃತದೇಹಗಳ ಅಸ್ಥಿಪಂಜರಗಳ ಸ್ಯಾಂಪಲ್ ಪಡೆದಿರುವ ವೈದ್ಯರು ಡಿಎನ್ ಎ ಪರೀಕ್ಷೆಗೆ ರವಾನಿಸಿದ್ದಾರೆಂದು ತಿಳಿದುಬಂದಿದೆ.

ಮೃತದೇಹಗಳ ಡಿಎ ಪರೀಕ್ಷೆಗಾಗಿ ಮೃತರ ಸಂಬಂಧಿಕರ ರಕ್ತದ ಮಾದರಿಗಳನ್ನು ವೈದ್ಯರು ಸಂಗ್ರಹಿಸಿದ್ದು, ಇದೀಗ ಬೋನ್ ಸ್ಯಾಂಪಲ್ ಸಂಗ್ರಹಿಸಿ, ಪರೀಕ್ಷೆಗೆ ಹುಬ್ಬಳ್ಳಿ ಲ್ಯಾಬ್’ಗೆ ರವಾನಿಸಿದ್ದಾರೆ.ಒಂದೆರಡು ದಿನದಲ್ಲಿ ಡಿಎನ್‍ಎ ವರದಿ ಪಡೆಯಲು ಅಧಿಕಾರಿಗಳು ಪ್ರಯತ್ನಿಸುತ್ತಿದ್ದು, ತ್ವರಿತವಾಗಿ ವರದಿ ನೀಡುವಂತೆ ಮನವಿ ಮಾಡುವ ಭರವಸೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ವಾಹನ ಸವಾರರ ಗಮನಕ್ಕೆ ; ಏಪ್ರಿಲ್‌ 1 ರಿಂದ ಟೋಲ್‌ಗಳಲ್ಲಿ ಇಲ್ಲ ನಗದು ಪಾವತಿ

ಹೊಸದಿಲ್ಲಿ : ಮುಂಬರುವ ಏಪ್ರಿಲ್‌ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…

1 hour ago

ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಗಂಭೀರ ; ಅರಣ್ಯ ಇಲಾಖೆ ಸಿಬ್ಬಂದಿಗೂ ಗಾಯ

ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…

3 hours ago

ಫೆ.28ರಿಂದ ಪಿಯುಸಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿ

ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…

3 hours ago

ಚಿರತೆ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ

ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…

3 hours ago

ಸ್ನೇಹಮಯಿ ಕೃಷ್ಣ ಮನೆಯಲ್ಲಿ ಸಿಸಿಬಿ ಪೊಲೀಸರಿಂದ ತಲಾಶ್‌ ; ಮಹತ್ವದ ದಾಖಲೆ ಲಭ್ಯ

ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…

3 hours ago

ಹುಲಿ ಕಳೇಬರ ಪತ್ತೆ ಪ್ರಕರಣ : ಓರ್ವ ಬಂಧನ

ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…

4 hours ago