ರಾಜ್ಯ

ಚಿತ್ರದುರ್ಗ ಬಸ್‌ ದುರಂತ | ಬಸ್‌ ಚಾಲಕ ಮೊಹಮ್ಮದ್‌ ರಫೀಕ್‌ ಸಾವು ; ಸಾವಿನ ಸಂಖ್ಯೆ 7ಕ್ಕೆ ಏರಿಕೆ

ಚಿತ್ರದುರ್ಗಾ : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಲಾರಿ ಡಿಕ್ಕಿಯಾಗಿ ಖಾಸಗಿ ಬಸ್ ಹೊತ್ತಿ ಉರಿದ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡು ಸಾವು – ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಸೀ ಬರ್ಡ್ ಬಸ್ ಚಾಲಕ ಚಿಕಿತ್ಸೆ ಫಲಕಾರಿಯಾದೇ ಮೃತಪಟ್ಟಿದ್ದಾರೆ. ಈ ಮೂಲಕ ಆಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 7 ಕ್ಕೆ ಏರಿಕೆಯಾಗಿದೆ.

ಜೊತೆಗೆ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುಗಳ ಚಿಕಿತ್ಸೆ ಮುಂದುವರಿದಿದೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳುಗಳಲ್ಲಿ ಸದ್ಯ ಒಬ್ಬರು ಡಿಸ್ಚಾರ್ಜ್ ಆಗಿದ್ದಾರೆ. ಉಳಿದ ಮೂವರಿಗೆ ಬರ್ನ್ ವಾರ್ಡ್‍ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೊಂದೆಡೆ, ಮೃತದೇಹಗಳು ಸಂಪೂರ್ಣ ಸುಟ್ಟು ಕರಕಲಾಗಿರುವುದರಿಂದ ಗುರುತು ಪತ್ತೆಗೆ ಸಾಧ್ಯವಾಗದ ಹಿನ್ನೆಲೆಯಲ್ಲಿ ಡಿಎನ್ ಎ ಪರೀಕ್ಷೆಗೆ ಮುಂದಾಗಿದ್ದಾರೆ.

ಘಟನೆಯಲ್ಲಿ ಮಹಮದ್ ರಫೀಕ್ ತೀವ್ರವಾಗಿ ಗಾಯಗೊಂಡಿದ್ದರು. ಅಪಘಾತದ ರಭಸಕ್ಕೆ ಅವರ ಎರಡು ಕಾಲುಗಳು ಮತ್ತು ಒಂದು ಕೈ ಮುರಿದಿದ್ದು, ಇದೀಗ ಸಾವನಪ್ಪಿದ್ದಾರೆ.

ಬಸ್ ದುರಂತದಲ್ಲಿ ಚಾಲಕ ಮೊಹಮ್ಮದ್ ರಫೀಕ್ ಗಂಭೀರವಾಗಿ ಗಾಯಗೊಂಡಿದ್ದರು. ಅಪಘಾತದ ರಭಸಕ್ಕೆ ಅವರ ಎರಡು ಕಾಲುಗಳು ಮತ್ತು ಒಂದು ಕೈ ಮುರಿದಿತ್ತು.ಅಪಘಾತದ ನಂತರ ತ್ವರಿತವಾಗಿ ಅವರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಾತ್ರಿ ತುರ್ತು ಆಪರೇಷನ್ ನಡೆಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ.

ಹಾವೇರಿ ಜಿಲ್ಲೆ ಶಿಗ್ಗಾಂವಿ ನಿವಾಸಿಯಾಗಿದ್ದ ರಫೀಕ್ ಅಪಘಾತದ ಬಳಿಕ ಗಂಭೀರವಾಗಿ ಗಾಯಗೊಂಡಿದ್ದರು.

ಇದನ್ನು ಓದಿ: ಅರಮನೆ ಬಳಿ ಹೀಲಿಯಂ ಸಿಲಿಂಡರ್ ಸ್ಫೋಟ : ಮಹತ್ವದ ಮಾಹಿತಿ ಕೊಟ್ಟ ಗೃಹ ಸಚಿವ ಪರಮೇಶ್ವರ

ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಸೀಬರ್ಡ್ ಎಕ್ಸಿಕ್ಯೂಟಿವ್ ಸ್ಲೀಪರ್ ಬಸ್‍ಗೆ ಎದುರಿನಿಂದ ಬಂದ ಕಂಟೈನರ್ ಲಾರಿ ಡಿವೈಡರ್ ದಾಟಿ ಡಿಕ್ಕಿ ಹೊಡೆದಿತ್ತು. ಡಿಕ್ಕಿಯ ರಭಸಕ್ಕೆ ಬಸ್ ಬೆಂಕಿಗೆ ಆಹುತಿಯಾಗಿ ಸಂಪೂರ್ಣ ಕರಕಲಾಗಿತ್ತು.ಬಸ್‍ನಲ್ಲಿ ಒಟ್ಟು 33 ಪ್ರಯಾಣಿಕರು ಇದ್ದರು. ಇವರಲ್ಲಿ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಕಂಟೈನರ್ ಚಾಲಕ ಸೇರಿದಂತೆ ಮೃತರ ಸಂಖ್ಯೆ 6 ಎಂದು ಪೊಲೀಸರು ದೃಢಪಡಿಸಿದ್ದರು.

ಮೃತರಲ್ಲಿ ಬಿಂಧು ಮತ್ತು ಅವರ ನಾಲ್ಕೂವರೆ ವರ್ಷದ ಮಗಳು ಗ್ರೇಯಾ, ಮಾನಸ, ನವ್ಯ, ರಶ್ಮಿ ಮತ್ತು ಕಂಟೈನರ್ ಚಾಲಕ ಇದ್ದಾರೆ. ಮೃತದೇಹಗಳ ಗುರುತು ಪತ್ತೆಯಾಗಿ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ.

ಡಿಎನ್ ಎ ಪರೀಕ್ಷೆ
ಚಿತ್ರದುರ್ಗದ ಹಿರಿಯೂರು ಬಳಿ ಗುರುವಾರ ಸಂಭವಿಸಿದ ಬಸ್ ಬಸ್ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದ್ದು, ಈ ನಡುವೆ ಮೃತದೇಹಗಳ ಅಸ್ಥಿಪಂಜರಗಳ ಸ್ಯಾಂಪಲ್ ಪಡೆದಿರುವ ವೈದ್ಯರು ಡಿಎನ್ ಎ ಪರೀಕ್ಷೆಗೆ ರವಾನಿಸಿದ್ದಾರೆಂದು ತಿಳಿದುಬಂದಿದೆ.

ಮೃತದೇಹಗಳ ಡಿಎ ಪರೀಕ್ಷೆಗಾಗಿ ಮೃತರ ಸಂಬಂಧಿಕರ ರಕ್ತದ ಮಾದರಿಗಳನ್ನು ವೈದ್ಯರು ಸಂಗ್ರಹಿಸಿದ್ದು, ಇದೀಗ ಬೋನ್ ಸ್ಯಾಂಪಲ್ ಸಂಗ್ರಹಿಸಿ, ಪರೀಕ್ಷೆಗೆ ಹುಬ್ಬಳ್ಳಿ ಲ್ಯಾಬ್’ಗೆ ರವಾನಿಸಿದ್ದಾರೆ.ಒಂದೆರಡು ದಿನದಲ್ಲಿ ಡಿಎನ್‍ಎ ವರದಿ ಪಡೆಯಲು ಅಧಿಕಾರಿಗಳು ಪ್ರಯತ್ನಿಸುತ್ತಿದ್ದು, ತ್ವರಿತವಾಗಿ ವರದಿ ನೀಡುವಂತೆ ಮನವಿ ಮಾಡುವ ಭರವಸೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮೈಸೂರು | ಭಾರತ್ ಜೋಡೋ ನೋಂದಣಿಗೆ ಚಾಲನೆ

ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…

4 mins ago

ಎಂಡಿಎ ಬದಲಿ ನಿವೇಶನ ಹಂಚಿಕೆ ರದ್ದುಪಡಿಸಿ ಸರ್ಕಾರ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…

16 mins ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

3 hours ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

5 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

6 hours ago

ಕೊಡಗಿನಲ್ಲಿ ಮುಂದುವರೆದ ಕಾಡಾನೆ ಸೆರೆ ಕಾರ್ಯಾಚರಣೆ

ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…

9 hours ago