ರಾಜ್ಯ

ಪರೀಕ್ಷಾ ಅಕ್ರಮ ಕುರಿತು ಅಗತ್ಯಬಿದ್ದರೆ ಸಿಐಡಿ ತನಿಖೆ ನಡೆಸಲು ಸಿದ್ದ: ಜಿ.ಪರಮೇಶ್ವರ್

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ನಡೆಸಲಾದ ಪರೀಕ್ಷಾ ಅಕ್ರಮ ಕುರಿತು ಅಗತ್ಯಬಿದ್ದರೆ ಸಿಐಡಿ ತನಿಖೆ ನಡೆಸಲು ಸಿದ್ದ ಇರುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮದ ಪ್ರಮುಖ ಆರೋಪಿ ಆರ್.ಡಿ.ಪಾಟೀಲ್ ಗೋಡೆ ಹಾರಿ ತಪ್ಪಿಸಿಕೊಂಡು ಹೋಗಲು ಅಧಿಕಾರಿಗಳೇ ಸಹಕರಿಸಿದ್ದಾರೆ. ಆತ ಇರುವ ಬಗ್ಗೆ ಐಪಿಎಸ್ ಅಧಿಕಾರಿಯೇ ಮಾಹಿತಿ ನೀಡಿದರೂ ಬಂಧಿಸದೆ ನಾಪತ್ತೆಯಾಗಲು ನೆರವು ನೀಡಲಾಗಿದೆ ಎಂಬ ಕುರಿತು ತನಿಖೆ ನಡೆಸುತ್ತೇವೆ. ಯಾವುದೇ ಅಧಿಕಾರಿ ಶಾಮೀಲಾಗಿದ್ದರೆ ಕಠಿಣ ಕ್ರಮ ಜರುಗಿಸುತ್ತೇವೆ ಎಂದು ಎಚ್ಚರಿಸಿದರು.

ಈಗಾಗಲೇ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಆರ್.ಡಿ.ಪಾಟೀಲ್ ಹೆಸರು ಪದೇ ಪದೇ ಇಂಥ ಪ್ರಕರಣಗಳಲ್ಲಿ ಕೇಳಿಬರುತ್ತಿದೆ. ಇನ್ನು ಮುಂದೆ ಕಠಿಣ ಕ್ರಮ ಕೈಗೊಂಡು ಆರೋಪಿಗಳಿಗೆ ಭಯ ಹುಟ್ಟುವಂತೆ ಮಾಡಲಾಗುವುದು. ನಮ್ಮ ಸರ್ಕಾರದಲ್ಲಿ ಇಂಥದ್ದಕ್ಕೆಲ್ಲ ಅವಕಾಶ ನೀಡುವುದಿಲ್ಲ ಎಂದು ಹೇಳಿದರು.

ಅಕ್ರಮದ ಹಿನ್ನಲೆಯಲ್ಲಿ ಮರುಪರೀಕ್ಷೆ ನಡೆಸುವ ಬಗ್ಗೆ ಗೃಹ ಇಲಾಖೆ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಅದು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸಂಬಂಧಿಸಿದ ವಿಷಯ ಎಂದು ಸ್ಪಷ್ಟಪಡಿಸಿದರು.

ತನಿಖೆ ಉತ್ತಮ ಹಾದಿಯಲ್ಲಿದೆ ಎಲ್ಲ ರೀತಿಯ ಮಾಹಿತಿಗಳನ್ನು ಕಲೆ ಹಾಕಲಾಗುತ್ತಿದೆ. ಒಂದು ವೇಳೆ ಸಿಐಡಿ ತನಿಖೆ ಅಗತ್ಯವಾದರೆ ಅದಕ್ಕೂ ಸರ್ಕಾರ ಕ್ರಮ ಕೈಗೊಳ್ಳಲಿದೆ. ನಮಗೆ ಪ್ರಕರಣದಲ್ಲಿ ಸತ್ಯಾಂಶ ಗೊತ್ತಾಗಬೇಕು. ಮುಂದಿನ ದಿನಗಳಲ್ಲಿ ಇಂತಹ ಕೃತ್ಯಗಳು ಮರುಕಳಿಸಬಾರದು ಎಂಬ ನಿಟ್ಟಿನಲ್ಲಿ ಎಚ್ಚರಿಕೆ ವಹಿಸುತ್ತಿದ್ದೇವೆ ಎಂದು ಹೇಳಿದರು.

andolanait

Recent Posts

ಜಮೀನಿನಲ್ಲಿ ಅಕ್ರಮ ಗಾಂಜಾ ಬೆಳೆ : ಓರ್ವ ಬಂಧನ

ಹನೂರು : ಜಮೀನಿನಲ್ಲಿ ಅಕ್ರಮ ಗಾಂಜಾ ಗಿಡ ಬೆಳೆದಿದ್ದ ಆರೋಪಿ ಹಾಗೂ 5 ಲಕ್ಷ ಮೌಲ್ಯದ ಗಾಂಜಾ ಗಿಡಗಳನ್ನು ವಶಕ್ಕೆ…

26 mins ago

ಯುವ ರೈತರ ಮದುವೆಯಾಗುವ ಯುವತಿಯರಿಗೆ 5 ಲಕ್ಷ ನೀಡಲಿ ; ಮನನೊಂದ ರೈತ ಮಕ್ಕಳು ಮುಖ್ಯಮಂತ್ರಿಗೆ ಮನವಿ

ಮಂಡ್ಯ : ಯುವ ರೈತರನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹವಾಗಿ ೫ ಲಕ್ಷ ರೂ.ಗಳನ್ನು ನೀಡುವಂತೆ ಮನನೊಂದ ರೈತ ಮಕ್ಕಳು ಮುಖ್ಯಮಂತ್ರಿಗಳಿಗೆ…

40 mins ago

ಕಾಲುಜಾರಿ ನೀರಿನಲ್ಲಿ ಮುಳುಗಿ ಯುವಕ ಸಾವು

ಸರಗೂರು : ನಾಲೆಯಲ್ಲಿ ಹಸುವಿಗೆ ನೀರು ಕುಡಿಸಲು ಹೋದಾಗ ಯುವಕನೊಬ್ಬ ಕಾಲುಜಾರಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮೇಗೌಡರ…

49 mins ago

ನಗರಾಭಿವೃದ್ಧಿ ಇಲಾಖೆಯಿಂದ ಯುಜಿಡಿ ನಿರ್ವಹಣೆ ಅಸಾಧ್ಯ : ಸಚಿವ ಬೈರತಿ ಸುರೇಶ್

ವಿಧಾನಸಭೆ : ನಗರಾಭಿವೃದ್ಧಿ ಇಲಾಖೆಯಿಂದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಒಳಚರಂಡಿ ಮತ್ತು ಅದಕ್ಕೆ ಸಂಬಂಧಿಸಿದ ಸೇವೆಗಳ ನಿರ್ವಹಣೆ ಅಸಾಧ್ಯ ಎಂದು…

54 mins ago

ಹುಣಸೂರು | ಹೆಚ್ಚಿದ ಹುಲಿ ಉಪಟಳ : ರೈತರಿಂದ ಅಂತರರಾಜ್ಯ ಹೆದ್ದಾರಿ ಬಂದ್‌ ; ರೈತರ ಆಕ್ರೋಶ

ಹುಣಸೂರು : ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಹಲವು ಗ್ರಾಮಗಳಲ್ಲಿ ನಡೆಯುತ್ತಿರುವ ನಿರಂತರ ಹುಲಿ ದಾಳಿಗಳ ಹಿನ್ನೆಲೆಯಲ್ಲಿ ರೈತರು ಅಂತರರಾಜ್ಯ…

1 hour ago

ಭಾಷೆ ಬೇರೆಯಾದರೂ, ದೇಶವೊಂದೇ ಭಾರತ

ಮೈಸೂರು : ಪ್ರಾಚೀನ ಕಾಲದಲ್ಲಿ ವ್ಯಾಸ, ವಾಲ್ಮೀಕಿ, ಕಾಳಿದಾಸರಂತಹ ಮಹಾನ್ ಕವಿಗಳು ರಚಿಸಿದ ಮಹಾನ್ ಗ್ರಂಥಗಳ ಫಲವಾಗಿ ಭಾರತೀಯ ಸಾಹಿತ್ಯ…

1 hour ago