ರಾಜ್ಯ

ಮಕ್ಕಳಿಗೆ ನೀರು ಕುಡಿಯುವಂತೆ ನೆನಪಿಸಲು ಎಲ್ಲಾ ಶಾಲೆಗಳಲ್ಲಿ ವಾಟರ್‌ ಬೆಲ್‌ ಬಾರಿಸಲು ಸುತ್ತೋಲೆ

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಲ್ಲಿ ಮಕ್ಕಳಿಗೆ ನೀರು ಕುಡಿಯುವುದನ್ನು ನೆನಪಿಸಲು ವಾಟರ್‌ ಬೆಲ್‌ ಬಾರಿಸಬೇಕು. ಈ ಕುರಿತಾಗಿ ಶಿಕ್ಷಣ ಇಲಾಖೆ ವತಿಯಿಂದ ಸುತ್ತೋಲೆ ಹೊರಡಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೆ ತಿಳಿಸಿದ್ದಾರೆ.

ಇದನ್ನು ಓದಿ: ಶುದ್ಧ ಕುಡಿಯುವ ನೀರಿನ ಯೋಜನೆ ಉದ್ಘಾಟಿಸಿದ ಸಿಎಂ

ಶಾಲಾ ಶಿಕ್ಷಣ ಇಲಾಖೆ ಆಯುಕ್ತರಿಗೆ ಈ ಕುರಿತಾಗಿ ಅವರು ಪತ್ರ ಬರೆದಿದ್ದಾರೆ. ಮಕ್ಕಳಲ್ಲಿ ಆಗಾಗ ನೀರು ಕುಡಿಯಬೇಕೆಂಬ ಅರಿವು ಇರುವುದಿಲ್ಲ. ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಶಾಲೆಗಳಲ್ಲಿ ನೀರು ಕುಡಿಯುವುದನ್ನು ನೆನಪಿಸಲು ವಾಟರ್‌ ಬೆಲ್‌ ಬಾರಿಸಬೇಕು.

ಇದು ಮಕ್ಕಳ ದೇಹದ ಉಷ್ಣತೆ ನಿಯಂತ್ರಿಸುವ ಜೊತೆಗೆ ಆಹಾರ ಜೀರ್ಣಿಸಿಕೊಳ್ಳಲು ಸಹಾಯಕವಾಗಲಿದೆ. ಹೀಗಾಗಿ ಎಲ್ಲಾ ಶಾಲೆಗಳಲ್ಲಿ ವಾಟರ್‌ ಬೆಲ್‌ ಬಾರಿಸುವ ನಿಯಮ ಅನುಷ್ಠಾನಕ್ಕೆ ಸುತ್ತೋಲೆ ಹೊರಡಿಸಬೇಕೆಂದು ಪತ್ರದಲ್ಲಿ ಕೋರಿದ್ದಾರೆ.

ಆಂದೋಲನ ಡೆಸ್ಕ್

Recent Posts

ನಮ್ಮ ಸರ್ಕಾರ ರೈತರ ಪರ ಸರ್ಕಾರ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಸಿಎಂ ಸಿದ್ದರಾಮಯ್ಯ ರೈತರ ಬಗ್ಗೆ ಹಾಗೂ ಸಾಮಾನ್ಯರ ಬಗ್ಗೆ ಅತೀ ಹೆಚ್ಚಿನ ಕಾಳಜಿ ಇಟ್ಟುಕೊಂಡಿದ್ದಾರೆ ಎಂದು ಕೃಷಿ ಹಾಗೂ…

11 mins ago

ಮಂಡ್ಯದಲ್ಲಿ ಕೃಷಿ ಮೇಳ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಮಂಡ್ಯ: ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ ಕೃಷಿ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಕೃಷಿ…

27 mins ago

ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ: ಆರ್.‌ಅಶೋಕ್‌

ಬೆಂಗಳೂರು: ಸೋಮವಾರದಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಆರಂಭವಾಗುವ ಚಳಿಗಾಲದ ಅಧಿವೇಶನದ ವೇಳೆ ಆಡಳಿತರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ…

58 mins ago

ಸಿಎಂ ಬದಲಾವಣೆ ಚರ್ಚೆಗೆ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ

ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ…

2 hours ago

ಮಂಡ್ಯ| ಬೋನಿಗೆ ಬಿದ್ದ ಚಿರತೆ: ಗ್ರಾಮಸ್ಥರು ನಿರಾಳ

ಮಂಡ್ಯ: ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ದೊಡ್ಡಹೊಸಗಾವಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೆನ್ನಮ್ಮ…

2 hours ago

ರಾಜ್‌ಘಾಟ್‌ಗೆ ಭೇಟಿ ನೀಡಿ ರಾಷ್ಟ್ರಪತಿ ಮಹಾತ್ಮ ಗಾಂಧೀಜಿ ಸಮಾಧಿಗೆ ನಮನ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್‌

ರಾಜ್‌ಘಾಟ್‌ಗೆ ಭೇಟಿ ನೀಡಿದ ವ್ಲಾಡಿಮಿರ್‌ ಪುಟಿನ್‌, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ದೆಹಲಿಯಲ್ಲಿ ರಾಷ್ಟ್ರಪತಿ…

3 hours ago