ರಾಜ್ಯ

ನಾಗರಿಕತೆ ಬೆಳೆದದ್ದು-ಉಳಿದಿರುವುದು ನೀರಿನಿಂದಲೇ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕೆರೆಗಳಿಗೆ ನೀರು ತುಂಬಿಸುವುದರಲ್ಲಿ ಏಷ್ಯಾದಲ್ಲೇ ಉತ್ತಮ‌ ಕಾರ್ಯ ನಮ್ಮ ರಾಜ್ಯದಲ್ಲಿ ಆಗುತ್ತಿದೆ ಎಂದು ಮುಖ್ಯಮಂತ್ರಿ ಸಿ.ಎಂ.ಸಿದ್ದರಾಮಯ್ಯ ಅವರು ಮೆಚ್ಚುಗೆ ಸೂಚಿಸಿದರು.

ಸಣ್ಣ ನೀರಾವರಿ ಇಲಾಖೆ ಬ್ಯಾಂಕ್ವೆಂಟ್ ಹಾಲ್ ನಲ್ಲಿ ಆಯೋಜಿಸಿದ್ದ “ನೀರಿದ್ದರೆ ನಾಳೆ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಾಗರಿಕತೆ ಬೆಳೆದದ್ದು-ಉಳಿದಿರುವುದು ನೀರಿನಿಂದಲೇ. ಜನರಲ್ಲಿ ನೀರಿನ ಬಳಕೆ, ನೀರಿನ ಮೌಲ್ಯ ಮತ್ತು ಅಂತರ್ಜಲ ವೃದ್ಧಿ ಬಗ್ಗೆ ಸಚಿವ ಬೋಸರಾಜು ಅವರು ಇಲಾಖಾ ವತಿಯಿಂದ ಉತ್ತಮ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದಾರೆ. ಇದು ಆರೋಗ್ಯಕರ ಸಂಗತಿ. ಜನರಿಗೆ ನೀರಿನ ಅಗತ್ಯ ಮತ್ತು ನೀರಿನ ಸ್ಥಿತಿ ಗತಿ ಬಗ್ಗೆ ಸಾರ್ವಜನಿಕರಿಗೆ ಮನವರಿಕೆ ಮಾಡಿಸಬೇಕು ಎಂದು ಕರೆ ನೀಡಿದರು.

ರಾಜ್ಯದಲ್ಲಿ 37 ಲಕ್ಷ ಬೋರ್ ವೆಲ್ ಗಳ ಮೂಲಕ ಅಂತರ್ಜಲ ಬಳಕೆ ಆಗುತ್ತಿದೆ. ದಾಖಲೆಗಳಲ್ಲಿ ಇಲ್ಲದ ಲಕ್ಷಾಂತರ ಅನಧಿಕೃತ ಬೋರ್ ವೆಲ್ ಗಳೂ ಇವೆ. ರಾಷ್ಟ್ರೀಯ ಸರಾಸರಿಗಿಂತ ಶೇ8 ರಷ್ಟು ಹೆಚ್ಚಿನ‌ ಬಳಕೆ ಆಗುತ್ತಿದೆ ಎನ್ನುವ ವರದಿಗಳಿವೆ ಎಂದು ವಿವರಿಸಿದರು.

ಇದನ್ನೂ ಓದಿ:-ಪಚ್ಚೆದೊಡ್ಡಿ ಹುಲಿ ಹತ್ಯೆ ಪ್ರಕರಣ : ಆರೋಪಿ ಅರಣ್ಯ ಇಲಾಖೆ ಕಸ್ಟಡಿಗೆ

144 ತಾಲ್ಲೂಕುಗಳನ್ನು ಹೊರತು ಪಡಿಸಿ ಉಳಿದ ತಾಲ್ಲೂಕುಗಳಲ್ಲಿ ನೀರಿನ , ಅಂತರ್ಜಲದ ಪ್ರಮಾಣ ಕೊರತೆ ಇದೆ. ಈ ಕಾರಣಕ್ಕೇ ಕೋಲಾರ ಮತ್ತು ಚಿಕ್ಕಬಳ್ಳಾಪುರದ ಕೆರೆಗಳನ್ನು ತುಂಬಿಸುವ ಕೆ.ಸಿ.ವ್ಯಾಲ್ಯೂ ಯೋಜನೆ ಜಾರಿ ಮಾಡಲಾಯ್ತು. ಇದರಿಂದ ಈಗ ಅಂತರ್ಜಲ ವೃದ್ಧಿಯಾಗಿದೆ. ಆದರೆ ಇದನ್ನೂ ವಿರೋಧಿಸುವವರು ಇದ್ದಾರೆ ಎಂದು ವಿವರಿಸಿದರು.

ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಅಂತರ್ಜಲ ವೃದ್ಧಿಗೆ ಸಾವಿರಾರು ಕೋಟಿ ಖರ್ಚು ಮಾಡಿದ್ದೇವೆ. ಇದರಿಂದ ಅಂತರ್ಜಲ ಉತ್ತಮವಾಗಿ ವೃದ್ಧಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಕಾನೂನು ಸಚಿವರಾದ ಹೆಚ್.ಕೆ.ಪಾಟೀಲ್, ಸಣ್ಣ ನೀರಾವರಿ ಸಚಿವರಾದ ಎನ್.ಎಸ್.ಬೋಸರಾಜು, ಅರಣ್ಯ ಮತ್ತು ಪರಿಸರ ಖಾತೆ ಸಚಿವರಾದ ಈಶ್ವರ್ ಖಂಡ್ರೆ, ಕೆಕೆಆರ್ ಡಿಬಿ ಅಧ್ಯಕ್ಷರಾದ ಅಜಯ್ ಸಿಂಗ್, ಮ್ಯಾಗ್ಸೆಸ್ಸೇ ಪ್ರಶಸ್ತಿ ಪುರಸ್ಕೃತ ಪರಿಸರವಾದಿ ರಾಜೇದ್ರ ಸಿಂಗ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ವಿಧಾನಸಭೆಯಲ್ಲಿ ಹನೂರು ಎನ್‌ಕೌಂಟರ್‌ ಸದ್ದು: ಗದ್ದಲ ಕೋಲಾಹಲ

ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್‌ಕೌಂಟರ್‌ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್‌,…

1 hour ago

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

4 hours ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

4 hours ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

5 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

8 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

8 hours ago