ರಾಜ್ಯ

ಗಂಡು ಮಗುವಿಗೆ ಜನ್ಮ ನೀಡಿದ ೧೦ನೇ ತರಗತಿಯ ವಿದ್ಯಾರ್ಥಿನಿ!

ಕಲಬುರ್ಗಿ:   10 ನೇ ತರಗತಿ ವಿದ್ಯಾರ್ಥಿನಿ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ.

ಜಿಲ್ಲೆಯ ಆಳಂದ ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಯ ದೊಡ್ಡಪ್ಪನ ಮಗನೇ ಕೃತ್ಯ ಎಸಗಿರುವುದಾಗಿ ಬಯಲಾಗಿದೆ. ಅಲ್ಲದೇ ಪ್ರಕರಣ ಸಂಬಂಧ ಆರೋಪಿ ಅಣ್ಣನನ್ನು ಕೂಡ ಆಳಂದ ಪೊಲೀಸರು ಬಂಧಿಸಿದ್ದಾರೆ.

ವಿದ್ಯಾರ್ಥಿನಿ ಕಲಬುರಗಿ ಜಿಲ್ಲೆಯಲ್ಲಿರುವ ವಸತಿ ಶಾಲೆಯೊಂದರಲ್ಲಿ ಓದುತ್ತಿದ್ದಳು. ಶಾಲೆಗೆ ರಜೆ ಇದ್ದಾಗೆಲ್ಲ ಆಕೆ ಮನೆಗೆ ಬರುತ್ತಿದ್ದಳು. ಹೀಗೆ ಬಂದಾಗ ಸಹೋದರ ಆಕೆಯನ್ನು ಬಳಸಿಕೊಳ್ಳುತ್ತಿದ್ದನು.

ರಾತ್ರಿ ಹೊತ್ತು ಮನೆಯಲ್ಲಿ ಎಲ್ಲರೂ ಮಲಗಿದ್ದಾಗ ಆತ ತಂಗಿ ಎನ್ನುವುದನ್ನೂ ನೋಡದೇ ರೇಪ್‌ ಮಾಡುತ್ತಿದ್ದ. ಹೀಗೆ ಕಳೆದ ಮಾರ್ಚ್ ನಿಂದ ವಿದ್ಯಾರ್ಥಿನಿ ಹಲವು ಬಾರಿ ತನ್ನ ಅಣ್ಣನಿಂದ ಅತ್ಯಾಚಾರಕ್ಕೆ ಒಳಗಾಗಿದ್ದಳು.

ಅಲ್ಲದೇ ಈ ವಿಚಾರವನ್ನು ಬಾಯಿಬಿಟ್ಟರೆ ಕೊಲೆ ಮಾಡುವ ಬೆದರಿಕೆಯನ್ನು ಕೂಡ ಹಾಕಿದ್ದನು. ಹೀಗಾಗಿ ಆಕೆ ಅತ್ಯಾಚಾರ ವಿಚಾರವನ್ನು ಮುಚ್ಚಿಟ್ಟಿದ್ದಳು.

ಇತ್ತ ವಿದ್ಯಾರ್ಥಿನಿ ದಪ್ಪ ಇರೋದ್ರಿಂದ ಕುಟುಂಬಸ್ಥರು ಕೂಡ ಆಕೆಯ ದೇಹದಲ್ಲಿ ಆಗುತ್ತಿರುವ ಬದಲಾವಣೆ ಕಂಡು ಹಿಡಿಯುವ ಪ್ರಯತ್ನ ಮಾಡಿಲ್ಲ. ಆದರೆ ಡಿಸೆಂಬರ್‌ 24 ರಂದು ಶಾಲೆಯಲ್ಲಿ ಇದ್ದಾಗ ಆಕೆಗೆ ಜೋರಾಗಿ ಹೊಟ್ಟೆ ನೋವು ಕಾಣಿಸಿಕೊಂಡಿದೆ.

ಹೀಗಾಗಿ ಶಿಕ್ಷಕರಿಗೆ ಹೇಳಿ ಆಕೆ ಸಂಬಂಧಿಕರ ಮನೆಗೆ ತೆರಳಿದ್ದಾಳೆ. ನಂತರ ಸಂಬಂಧಿಕರು‌ ವಿದ್ಯಾರ್ಥಿನಿ ಕುಟಂಬದವರಿಗೆ ಮಾಹಿತಿ ನೀಡಿದ್ದಾರೆ. ಬಳಿಕ‌ ಆಕೆಯನ್ನು ಮಹಾರಾಷ್ಟ್ರದ ಸೊಲ್ಲಾಪುರದ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಲಾಯಿತು.

ಚಿಕತ್ಸೆಗೆ ದಾಖಲು ಮಾಡುತ್ತಿದ್ದಂತೆಯೇ ಆಕೆ ಗಂಡು ಮಗುವಿಗೆ ಜನ್ಮ ಕೊಟ್ಟಿದ್ದಾಳೆ. ವಿದ್ಯಾರ್ಥಿನಿ ಗಂಡು ಮಗುವಿಗೆ ಜನ್ಮ ಕೊಟ್ಟಿರುವ ವಿಚಾರ ಗೊತ್ತಾಗ್ತಿದ್ದಂತೆ ಕುಟುಂಬಸ್ಥರು ಕೂಡ ಶಾಕ್‌ ಆಗಿದ್ದಾರೆ.

ಈಕೆಗೆ ಮದುವೆಯೇ ಆಗಿಲ್ಲ ಮಗುವಿಗೆ ಜನ್ಮ ಅಂದ್ರೆ ಹೇಗೆ ಅಂತಾ ಮಾತಾಡಿಕೊಳ್ಳಲು ಆರಂಭಿಸಿದರು. ಬಳಿಕ ಆಸ್ಪತ್ರೆಯವರು ಮಹಾರಾಷ್ಟ್ರದ ಪೊಲೀಸರಿಗೆ ಮಾಹಿತಿ ರವಾನೆ ಮಾಡಿದರು.

ಮಹಾರಾಷ್ಟ್ರ ಪೊಲೀಸರು ನಿಂಬರ್ಗಾ ಪೊಲೀಸರನ್ನು ಸಂಪರ್ಕ ಮಾಡಿ ನಿಂಬರ್ಗಾ ಪೊಲೀಸರು ವಿದ್ಯಾರ್ಥಿನಿಯ ವಿಚಾರಣೆ ನಡೆಸಿದರು. ಈ ವೇಳೆ ಅಣ್ಣನಿಂದ ಕೃತ್ಯ ಆಗಿರುವುದು ಬಯಲಾಗಿದೆ.

andolanait

Recent Posts

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಜೆಡಿಎಸ್‌ ಎಂಎಲ್‌ಸಿ ಸೂರಜ್‌ ರೇವಣ್ಣಗೆ ಬಿಗ್‌ ಶಾಕ್‌

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…

8 hours ago

ಟಿ.ನರಸೀಪುರ| ಆನೆ ದಾಳಿಗೆ ರೈತ ಬಲಿ

ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್‌ ಠಾಣೆ ವ್ಯಾಪ್ತಿಯ…

11 hours ago

ಮೈಸೂರು ನಗರ ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಪೂರೈಸುತ್ತಿದ್ದ ಇಬ್ಬರ ಬಂಧನ

ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…

12 hours ago

ಮಕ್ಕಳು ಪಠ್ಯೇತರ ಚಟುವಟಿಕೆಯಲ್ಲೂ ಆಸಕ್ತಿ ಬೆಳೆಸಿಕೊಳ್ಳಿ: ದಿನೇಶ್‌ ಗೂಳಿಗೌಡ

ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್‌ ಸದಸ್ಯ ಹಾಗೂ ಕರ್ನಾಟಕ ರಾಜ್ಯ…

12 hours ago

ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…

12 hours ago

ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣ: ಅಂತಿಮ ಹಂತಕ್ಕೆ ತಲುಪಿದ ಎಸ್‌ಐಟಿ ತನಿಖೆ

ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…

12 hours ago