ಹುಬ್ಬಳ್ಳಿ: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ಕ್ಲೀನ್ಚಿಟ್ ಸಿಕ್ಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದು, ಇದು ನಿರೀಕ್ಷಿತ ತೀರ್ಪು ಎಂದು ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತ ತನಿಖೆಯಲ್ಲಿ ಕ್ಲೀನ್ ಚಿಟ್ ಸಿಗುತ್ತೆ ಎಂದು ಮೊದಲೇ ಗೊತ್ತಿತ್ತು. ಅದಕ್ಕಾಗಿಯೇ ನಾವು ಸಿಬಿಐ ತನಿಖೆಗೆ ಆಗ್ರಹಿಸಿದ್ದೆವು ಎಂದರು.
ಮೈಸೂರು ಮುಡಾ ಪ್ರಕರಣದಲ್ಲಿ ನಿರೀಕ್ಷೆಯಂತೆ ಸಿಎಂಗೆ ಕ್ಲೀನ್ಚಿಟ್ ಸಿಕ್ಕಿದೆ. ಲೋಕಾಯುಕ್ತದಲ್ಲಿ ಅಧಿಕಾರಿಗಳ ಪೋಸ್ಟಿಂಗ್ ಮಾಡುವುದು ಸಿಎಂ ಕೈಯಲ್ಲೇ ಇರುತ್ತದೆ. ಇದನ್ನು ಲೋಕಾಯುಕ್ತ ಪೊಲೀಸರಿಂದ ತನಿಖೆ ಮಾಡಿದ್ರೆ ಇದನ್ನು ಮುಚ್ಚಿ ಹಾಕುತ್ತಾರೆ ಎಂದು ಈ ಮೊದಲೇ ಹೇಳಿದ್ದೇ, ಈಗ ಅದೇ ಪರಿಸ್ಥಿತಿ ಆಗಿದೆ ಎಂದು ಕಿಡಿಕಾರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ರಾತ್ರೋರಾತ್ರಿ ಅಧಿಕಾರಿಗಳನ್ನು ಯಾರೆಲ್ಲಾ ಭೇಟಿಯಾಗಿ ಬಂದಿದ್ದಾರೆ ಅನ್ನೋದು ಎಲ್ಲವೂ ಗೊತ್ತಿದೆ. ಇದೇನೂ ಆಶ್ಚರ್ಯಕರ ಸಂಗತಿ ಏನೂ ಅಲ್ಲ. ನಿಷ್ಪಕ್ಷಪಾತ ತನಿಖೆಯಾಗಬೇಕಾದರೆ ನೇರವಾಗಿ ಸಿಬಿಐ ತನಿಖೆ ಮಾಡಿಸಬೇಕು. ಆವಾಗ ಸತ್ಯಾಸತ್ಯತೆ ಗೊತ್ತಾಗಲಿದೆ ಎಂದರು.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…