ಬೆಂಗಳೂರು: ಮೈಸೂರು ಮುಡಾ ಕೇಸ್ನಲ್ಲಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್ ಚಿಟ್ ಸಿಕ್ಕಿರುವುದು ನಮಗಿಂತ ಹೆಚ್ಚು ಕಾಂಗ್ರೆಸ್ನವರಿಗೆ ನೋವಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಸೈಟ್ ವಾಪಸ್ ಕೊಟ್ಟಿರುವುದು ನಮ್ಮ ಹೋರಾಟದಿಂದ. ಆದರೂ ಲೋಕಾಯುಕ್ತ ಕ್ಲೀನ್ಚಿಟ್ ನೀಡಿರುವುದಕ್ಕೆ ನಮಗೆ ಬೇಸರ ಇದೆ. ನಮಗಿಂತಲೂ ಹೆಚ್ಚು ಕಾಂಗ್ರೆಸ್ನ ಕೆಲವು ನಾಯಕರಿಗೆ ಬೇಸರ ತರಿಸಿದೆ ಎಂದು ವ್ಯಂಗ್ಯವಾಡಿದರು.
ಇನ್ನು ಬಿಜೆಪಿ ಮತ್ತು ಜೆಡಿಎಸ್ ಮುಡಾ ವಿಚಾರದಲ್ಲಿ ಅಧಿವೇಶನದಲ್ಲಿ ಚರ್ಚೆ ಮಾಡಿದ್ದೇವೆ. ಪಾದಯಾತ್ರೆ ಸಹ ನಡೆಸಿದ್ದೇವೆ. ದೇಶದ ದೊಡ್ಡ ವಕೀಲರು ಬಂದು ವಾದ ಮಾಡಿ ಹೋಗಿರುವ ಕೇಸ್ ಇದು. ಮುಡಾದಲ್ಲಿ ಸಿದ್ದರಾಮಯ್ಯ ತಪ್ಪು ಮಾಡಿಲ್ಲ ಅಂದಮೇಲೆ 14 ಸೈಟು ಯಾಕೆ ವಾಪಸ್ ಕೊಟ್ರು? ಎಂದು ಪ್ರಶ್ನೆ ಮಾಡಿದರು. ನಾಳೆ ಪೊಲೀಸರು ಕ್ಲೀನ್ಚಿಟ್ ಕೊಡುತ್ತಾರೆ. ಮುಡಾ ಲೇಔಟ್ ಮಾಡಿರೋದು ಸಿದ್ದರಾಮಯ್ಯ ಕುಟುಂಬಕ್ಕೆ ಗೊತ್ತೇ ಇಲ್ಲ. ಆಕರೆ ನೋಡೇ ಇಲ್ಲ ಅವ್ರು. ಸಿಎಂ ಕುಟುಂಬದ ಸದಸ್ಯರು ಅಮಾಯಕರು, ಮುಗ್ಧರು, ಮುಡಾ ಕಡೆ ತಲೆ ಹಾಕಿಯೂ ಮಲಗಿಲ್ಲ ಎಂದು ವ್ಯಂಗ್ಯವಾಡಿದರು.
ಇನ್ನು ಮುಡಾ ಹೋರಾಟಕ್ಕೆ ಗೆಲುವಾಗಿದೆ. ನಮಗೆ ಹಿನ್ನಡೆ ಆಗಿಲ್ಲ. ನಮ್ಮ ಹೋರಾಟದ ಫಲವಾಗಿಯೇ ಇಡಿ ಮುಡಾ ಆಸ್ತಿ ಸೀಜ್ ಮಾಡಿದ್ದು, ಆದ್ರೆ ಲೋಕಾಯುಕ್ತ ಪೊಲೀಸರು ಪ್ರಭಾವಕ್ಕೊಳಗಾಗಿ ಕ್ಲೀನ್ಚಿಟ್ ಕೊಡುತ್ತಿದ್ದಾರೆ ಎಂದು ಕಿಡಿಕಾರಿದರು.
ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…
ಮುಂಬೈ : ಆದಿತ್ಯ ಧರ್ ನಿರ್ದೇಶನದ, ರಣವೀರ್ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.19) ಬಿಡುಗಡೆಯಾಗಲಿದೆ. ಕಳೆದ ವರ್ಷ…
ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳಿರುವಾಗ, ನಟ-ರಾಜಕಾರಣಿ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ…
ವಾಷಿಂಗ್ಟನ್ : ಅಮೆರಿಕದ ಬೆಂಬಲಕ್ಕೆ ನಿಲ್ಲಬೇಕಿದ್ದ ನ್ಯಾಟೋ ದೇಶಗಳು ಈಗ ಹಿಂದೆ ಸರಿದಿರುವುದು ಟ್ರಂಪ್ ಆಡಳಿತಕ್ಕೆ ದೊಡ್ಡ ಹಿನ್ನಡೆಯಾಗಿದೆ. ಪಶ್ಚಿಮ…
ಬೆಂಗಳೂರು : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳನ್ನು ಪೆನ್ಡ್ರೈವ್ ಮೂಲಕ ಹಂಚಿಕೆ ಮಾಡಿದ ಪ್ರಕರಣದಲ್ಲಿ…
ಬೆಂಗಳೂರು : ಏನೋ ಮಾಡಲು ಹೋಗಿ ಇನ್ನೆನೋ ಆಗಿ ಪೇಚಿಗೆ ಸಿಲುಕಿರುವ ಘಟನೆಗಳೂ ಮೇಲಿಂದ ಮೇಲೆ ನಡೆಯುತ್ತಲೇ ಇವೆ. ಇದೀಗ…