ಬೆಂಗಳೂರು: ಮೈಸೂರು ಮುಡಾ ಕೇಸ್ನಲ್ಲಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್ ಚಿಟ್ ಸಿಕ್ಕಿರುವುದು ನಮಗಿಂತ ಹೆಚ್ಚು ಕಾಂಗ್ರೆಸ್ನವರಿಗೆ ನೋವಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಸೈಟ್ ವಾಪಸ್ ಕೊಟ್ಟಿರುವುದು ನಮ್ಮ ಹೋರಾಟದಿಂದ. ಆದರೂ ಲೋಕಾಯುಕ್ತ ಕ್ಲೀನ್ಚಿಟ್ ನೀಡಿರುವುದಕ್ಕೆ ನಮಗೆ ಬೇಸರ ಇದೆ. ನಮಗಿಂತಲೂ ಹೆಚ್ಚು ಕಾಂಗ್ರೆಸ್ನ ಕೆಲವು ನಾಯಕರಿಗೆ ಬೇಸರ ತರಿಸಿದೆ ಎಂದು ವ್ಯಂಗ್ಯವಾಡಿದರು.
ಇನ್ನು ಬಿಜೆಪಿ ಮತ್ತು ಜೆಡಿಎಸ್ ಮುಡಾ ವಿಚಾರದಲ್ಲಿ ಅಧಿವೇಶನದಲ್ಲಿ ಚರ್ಚೆ ಮಾಡಿದ್ದೇವೆ. ಪಾದಯಾತ್ರೆ ಸಹ ನಡೆಸಿದ್ದೇವೆ. ದೇಶದ ದೊಡ್ಡ ವಕೀಲರು ಬಂದು ವಾದ ಮಾಡಿ ಹೋಗಿರುವ ಕೇಸ್ ಇದು. ಮುಡಾದಲ್ಲಿ ಸಿದ್ದರಾಮಯ್ಯ ತಪ್ಪು ಮಾಡಿಲ್ಲ ಅಂದಮೇಲೆ 14 ಸೈಟು ಯಾಕೆ ವಾಪಸ್ ಕೊಟ್ರು? ಎಂದು ಪ್ರಶ್ನೆ ಮಾಡಿದರು. ನಾಳೆ ಪೊಲೀಸರು ಕ್ಲೀನ್ಚಿಟ್ ಕೊಡುತ್ತಾರೆ. ಮುಡಾ ಲೇಔಟ್ ಮಾಡಿರೋದು ಸಿದ್ದರಾಮಯ್ಯ ಕುಟುಂಬಕ್ಕೆ ಗೊತ್ತೇ ಇಲ್ಲ. ಆಕರೆ ನೋಡೇ ಇಲ್ಲ ಅವ್ರು. ಸಿಎಂ ಕುಟುಂಬದ ಸದಸ್ಯರು ಅಮಾಯಕರು, ಮುಗ್ಧರು, ಮುಡಾ ಕಡೆ ತಲೆ ಹಾಕಿಯೂ ಮಲಗಿಲ್ಲ ಎಂದು ವ್ಯಂಗ್ಯವಾಡಿದರು.
ಇನ್ನು ಮುಡಾ ಹೋರಾಟಕ್ಕೆ ಗೆಲುವಾಗಿದೆ. ನಮಗೆ ಹಿನ್ನಡೆ ಆಗಿಲ್ಲ. ನಮ್ಮ ಹೋರಾಟದ ಫಲವಾಗಿಯೇ ಇಡಿ ಮುಡಾ ಆಸ್ತಿ ಸೀಜ್ ಮಾಡಿದ್ದು, ಆದ್ರೆ ಲೋಕಾಯುಕ್ತ ಪೊಲೀಸರು ಪ್ರಭಾವಕ್ಕೊಳಗಾಗಿ ಕ್ಲೀನ್ಚಿಟ್ ಕೊಡುತ್ತಿದ್ದಾರೆ ಎಂದು ಕಿಡಿಕಾರಿದರು.
ಬಿ.ಟಿ.ಮೋಹನ್ ಕುಮಾರ್ ಮಂಡ್ಯ: ಮಂಡ್ಯ ವಿವಿ ಆರಂಭವಾದಾಗಿನಿಂದ ಒಂದಲ್ಲಾ ಒಂದು ಸಮಸ್ಯೆ ಎದುರಾಗುತ್ತಿದ್ದು, ವಿವಿಗೆ ೧೨ಬಿ ಮಾನ್ಯತೆ ಸಿಕ್ಕಿಲ್ಲದಿರುವುದು ಹಲವು…
ನವೀನ್ ಡಿಸೋಜ ಮಂಗಳೂರು ವಿವಿ ಅಧೀನದಲ್ಲಿದ್ದ ಕೊಡಗು ಈಗ ಪ್ರತ್ಯೇಕ ವಿವಿಯಾಗಿ ರೂಪುಗೊಂಡಿದೆ. ಆದರೆ, ಆಡಳಿತಾತ್ಮಕ ಹುದ್ದೆ ಭರ್ತಿಯಾಗದಿರುವುದು ಮತ್ತು…
ಚಾಮರಾಜನಗರ ವಿವಿ ಪ್ರಾರಂಭವಾಗಿ ೩ ವರ್ಷಗಳನ್ನು ಪೂರೈಸಿದೆ. ಈ ಬಾರಿ ಪ್ರಪ್ರಥಮ ಘಟಿಕೋತ್ಸವದ ಸಂಭ್ರಮದಲ್ಲಿದೆ. ಆದರೆ ಇನ್ನೂ ಅತಿಥಿ ಅಧ್ಯಾಪಕರು,…
ಗಿರೀಶ್ ಹುಣಸೂರು ರಾಜ್ಯದ ಮೊತ್ತ ಮೊದಲ ವಿವಿ ಎಂಬ ಹೆಗ್ಗಳಿಕೆಯ ಮೈಸೂರು ವಿವಿಗೆ ೧೧೦ ವರ್ಷಗಳಷ್ಟು ಹಿರಿತನವಿದೆ. ಆದರೆ, ಕೆಲವು…
ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ…
ದಕ್ಷಿಣ ಭಾರತದ ಕೋಗಿಲೆ ಎಂದೇ ಜನಪ್ರಿಯರಾಗಿದ್ದ, ಎಸ್. ಜಾನಕಿಯವರು ತಮ್ಮ ಅಂತಿಮ ಇಚ್ಛೆಯಂತೆ ಕನ್ನಡದ ನೆಲದಲ್ಲಿ ಅದರಲ್ಲೂ ಸಾಂಸ್ಕೃತಿಕ ನಗರಿ…