ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರೀ ಬಿರುಗಾಳಿಯನ್ನೇ ಎಬ್ಬಿಸಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಆಕ್ರಮ ನಿವೇಶನ ಪಡೆದ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅವರ ಕುಟುಂಬಸ್ಥರಿಗೆ ಲೋಕಾಯುಕ್ತ ಕ್ಲೀನ್ ಚಿಟ್ ನೀಡಿದೆ.
ಈ ಮೂಲಕ ತಮ್ಮ ನಾಲ್ಕು ದಶಕಗಳ ಸಾರ್ವಜನಿಕ ಜೀವನದಲ್ಲಿ ಮೊದಲ ಬಾರಿಗೆ ಬಹುದೊಡ್ಡ ಅಗ್ನಿಪರೀಕ್ಷೆಗೆ ಗುರಿಯಾಗಿದ್ದ ಸಿದ್ದರಾಮಯ್ಯ ಕಾನೂನು ಸಮರದಲ್ಲಿ ಗೆಲುವು ಸಾಧಿಸಿದ್ದು, ವಿರೋಧಿಗಳು ಸೇರಿದಂತೆ ಸ್ವಪಕ್ಷೀಯರಿಗೂ ಸಂದೇಶವನ್ನು ರವಾನಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪ್ರಕರಣದ ತನಿಖೆ ನಡೆಸಿದ್ದ ಮೈಸೂರು ಲೋಕಾಯುಕ್ತ ಎಸ್.ಪಿ ಉದೇಶ್ ಅವರು, ಇಂದು ಮುಚ್ಚಿದ ಲಕೋಟೆಯಲ್ಲಿ ಸುಮಾರು 11,200 ಪುಟಗಳ ವರಿದಿಯನ್ನು ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರಿದ್ದ ಪೀಠಕ್ಕೆ ಸಲ್ಲಿಸಿದ್ದಾರೆ.
ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಫೆಬ್ರವರಿ.24 ಅಂದರೆ ಮುಂದಿನ ಸೋಮವಾರಕ್ಕೆ ಮುಂದೂಡಿದೆ. 50 ಜನರ ಹೇಳಿಕೆಗಳನ್ನು ದಾಖಲು ಮಾಡಿದ ಪೊಲೀಸರು 27 ಸಂಪುಟ, 11,200 ಪುಟಗಳ ತನಿಖಾ ವರದಿಯನ್ನು ಬಿ ರಿಪೋರ್ಟ್ ಎಂದೇ ಉಲ್ಲೇಖಿಸಿದ್ದಾರೆ.
ನಿವೇಶನ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರವಿಲ್ಲ ಎಂಬುದು ತನಿಖೆಯಲ್ಲಿ ಕಂಡುಬಂದಿದೆ. ಅಲ್ಲದೆ, ಆರೋಪಕ್ಕೆ ಪೂರಕವಾಗಿ ಸಾಕ್ಷ್ಯಾಧಾರ ಕೊರತೆ ಹಿನ್ನೆಲೆಯಲ್ಲಿ ಬಿ-ರಿಪೋರ್ಟ್ ಸಲ್ಲಿಕೆ ಮಾಡಿದ್ದಾರೆ.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…