ರಾಜ್ಯ

ಶುದ್ಧ ಇಂಧನಕ್ಕೆ ಒತ್ತು: ಆಸ್ಟ್ರೇಲಿಯಾದ ಸ್ಮಾರ್ಟ್ ಎನರ್ಜಿ ಕೌನ್ಸಿಲ್‌ ಜತೆ ಇಂಧನ ಇಲಾಖೆ ಒಪ್ಪಂದ

ಕ್ಯಾನ್‌ಬೆರಾ (ಆಸ್ಟ್ರೇಲಿಯಾ): ಶುದ್ಧ ಇಂಧನಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತವು (ಕ್ರೆಡಲ್) ಆಸ್ಟ್ರೇಲಿಯಾದ ಸ್ಮಾರ್ಟ್ ಎನರ್ಜಿ ಕೌನ್ಸಿಲ್‌ ಜತೆಗಿನ ಒಪ್ಪಂದಕ್ಕೆ ಶುಕ್ರವಾರ ಸಹಿ ಹಾಕಿದೆ.

ಈ ಒಪ್ಪಂದವು ಶುದ್ಧ ಇಂಧನ, ನವೀಕರಿಸಬಹುದಾದ ಇಂಧನ, ಗ್ರೀನ್‌ ಹೈಡ್ರೋಜನ್‌, ಬ್ಯಾಟರಿ ಪವರ್‌ ಸ್ಟೋರೇಜ್‌ ವ್ಯವಸ್ಥೆಗಳು ಮತ್ತು ಸಂಬಂಧಿತ ವಲಯಗಳಲ್ಲಿ ಸಹಕಾರ ಹೆಚ್ಚಿಸುವ ಗುರಿ ಹೊಂದಿದೆ. ಮುಂದಿನ ಮೂರು ವರ್ಷಗಳವರೆಗೆ ಜಾರಿಯಲ್ಲಿರುವ ಒಪ್ಪಂದವನ್ನು ಪರಸ್ಪರ ಒಪ್ಪಿಗೆ ಮೇರೆಗೆ ವಿಸ್ತರಿಸಲು ಅವಕಾಶವಿದೆ.

ರಾಜ್ಯ ಇಂಧನ ಇಲಾಖೆಯ ಪ್ರತಿನಿಧಿಯಾಗಿ ಕ್ರೆಡಲ್‌ನ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಪ್ಪಯ್ಯ ಹಾಗೂ ಸ್ಮಾರ್ಟ್ ಎನರ್ಜಿ ಕೌನ್ಸಿಲ್ ಪರವಾಗಿ ಅದರ ಮುಖ್ಯ ಕಾರ್ಯನಿರ್ವಾಹಕ ಜಾನ್ ಗ್ರಿಮ್ಸ್ ಮತ್ತು ಒಪ್ಪಂದಕ್ಕೆ ಸಹಿ ಹಾಕಿದರು.

“ಶುದ್ಧ ಇಂಧನ, ಗ್ರೀನ್ ಹೈಡ್ರೋಜನ್, ಬ್ಯಾಟರಿ ಪವರ್‌ ಸ್ಟೋರೇಜ್‌ ಮತ್ತು ಸಂಬಂಧಿತ ವಲಯಗಳಲ್ಲಿ ಪರಸ್ಪರ ಸಹಕಾರವನ್ನು ಬಲಪಡಿಸಲು ಆಸ್ಟ್ರೇಲಿಯಾದ ಸ್ಮಾರ್ಟ್ ಎನರ್ಜಿ ಕೌನ್ಸಿಲ್‌ ಜತೆಗಿನ ಒಪ್ಪಂದಕ್ಕೆ ಸಹಿ ಹಾಕಿದ್ದೇವೆ. ನೂತನ ತಂತ್ರಜ್ಞಾನಗಳನ್ನು ಸದುಪಯೋಗಪಡಿಸಿಕೊಳ್ಳುವುದು, ಪಾಲುದಾರಿಕೆಯನ್ನು ಸುಲಲಿತಗೊಳಿಸುವ ಜತೆಗೆ ಹೂಡಿಕೆ ಅವಕಾಶಗಳನ್ನು ಅನ್ವೇಷಿಸುವುದು ಈ ಒಪ್ಪಂದದ ಗುರಿಯಾಗಿದೆ,” ಎಂದು ಕೆ.ಪಿ. ರುದ್ರಪ್ಪಯ್ಯ ಹೇಳಿದರು.

ಒಪ್ಪಂದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಇಂಧನ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, “ಶುದ್ಧ ಇಂಧನಕ್ಕೆ ಒತ್ತು ನೀಡುವ ಈ ಒಪ್ಪಂದ ಗಮನಾರ್ಹವಾದುದು. ನವೀಕರಿಸಬಹುದಾದ ಇಂಧನ ಮತ್ತು ಗ್ರೀನ್‌ ಹೈಡ್ರೋಜನ್‌ಗೆ ಸಂಬಂಧಿಸಿದ ಆಸ್ಟ್ರೇಲಿಯದ ತಂತ್ರಜ್ಞಾನಗಳ ಬಳಕೆ ಕುರಿತು ಸ್ಮಾರ್ಟ್ ಎನರ್ಜಿ ಕೌನ್ಸಿಲ್‌ ಜತೆಗೆ ಕ್ರೆಡಲ್‌ ಸಮಾಲೋಚನೆ ನಡೆಸಲಿದೆ. ಈ ಪಾಲುದಾರಿಕೆಯು ತಂತ್ರಜ್ಞಾನ ವಿನಿಮಯವನ್ನು ಸುಗಮಗೊಳಿಸುವುದಲ್ಲದೇ, ಈ ವಲಯಗಳಲ್ಲಿ ಪರಸ್ಪರ ಹಿತಾಸಕ್ತಿಯನ್ನು ಬೆಂಬಲಿಸುವ ದ್ವಿಪಕ್ಷೀಯ ಹೂಡಿಕೆ ಅವಕಾಶಗಳನ್ನು ಅನ್ವೇಷಿಸಲಿದೆ,” ಎಂದು ತಿಳಿಸಿದರು.

ಸಭೆಯಲ್ಲಿ ಇಂಧನ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಗೌರವ್‌ ಗುಪ್ತಾ, ಶಾಸಕರೂ ಆದ ಕ್ರೆಡಲ್‌ ಅಧ್ಯಕ್ಷ ಟಿ.ಡಿ. ರಾಜೇಗೌಡ, ಕ್ರೆಡಲ್‌ ಅಧ್ಯಕ್ಷ ಕೆ.ಪಿ. ರುದ್ರಪ್ಪಯ್ಯ, ಇಂಧನ ಸಚಿವರ ಆಪ್ತ ಕಾರ್ಯದರ್ಶಿ ಸತೀಶ್‌, ಸ್ಮಾರ್ಟ್ ಎನರ್ಜಿ ಕೌನ್ಸಿಲ್‌ನ ಮುಖ್ಯ ಕಾರ್ಯನಿರ್ವಾಹಕ ಜಾನ್ ಗ್ರಿಮ್ಸ್ ಉಪಸ್ಥಿತರಿದ್ದರು.

ಕೋಟ್‌:
“ಶುದ್ಧ ಇಂಧನ ಮತ್ತು ಹಸಿರು ಹೈಡ್ರೋಜನ್ ಉಪಕ್ರಮಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಮತ್ತು ಆಸ್ಟ್ರೇಲಿಯಾ ಒಟ್ಟಾಗಿ ಕೆಲಸ ಮಾಡಲು ಬದ್ಧವಾಗಿ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಈ ಮೂಲಕ ಆಸ್ಟ್ರೇಲಿಯಾದ ಕಂಪನಿಗಳ ಜತೆಗಿನ ಕರ್ನಾಟಕದ ಸಂಪರ್ಕ ಸಲಭವಾಗುವ ಜತೆಗೆ ಹೂಡಿಕೆ ಅವಕಾಶಗಳು ಹೆಚ್ಚಲಿವೆ. ನವೀಕರಿಸಬಹುದಾದ ಇಂಧನ ಉತ್ಪಾದನೆ ಮತ್ತು ಉತ್ತೇಜನದಲ್ಲಿ ರಾಜ್ಯ ಮುಂಚೂಣಿಯಲ್ಲಿದ್ದು, ರಾಜ್ಯದ ಕೈಗಾರಿಕಾ ನೀತಿಗೆ ಅನುಗುಣವಾಗಿ ಯೋಜನೆಗಳಿಗೆ ಪ್ರೋತ್ಸಾಹಕಗಳನ್ನು ಒದಗಿಸಿದ್ದೇವೆ. ಈ ಕ್ರಮಗಳಿಂದಾಗಿ ಕರ್ನಾಟಕವು ಹೂಡಿಕೆಗೆ ಆದ್ಯತೆಯ ತಾಣವಾಗಿದೆ,”
ಕೆ.ಜೆ.ಜಾರ್ಜ್‌, ಇಂಧನ ಸಚಿವರು

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಉಡುಪಿ ಮಲ್ಪೆ ಬಳಿ ದೋಣಿ ಪಲ್ಟಿ: ಮೈಸೂರಿನ ಇಬ್ಬರು ಸಾವು

ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್‌ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…

5 hours ago

ಜೆಡಿಎಸ್‌ ಬಿಟ್ಟಿದ್ದು ದ್ರೋಹ ಹೇಗಾಗುತ್ತೆ: ಶಾಸಕ ಶಿವಲಿಂಗೇಗೌಡ

ಹಾಸನ: ನಾನು ಜೆಡಿಎಸ್‌ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್‌ ಜಾಸ್ತಿ ಆಗೋದು ಅಷ್ಟೇ. ಏನು…

5 hours ago

ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲರಿಗೆ ಅಡ್ಡಿಪಡಿಸಿದ ವಿಚಾರ: ರಾಷ್ಟ್ರಪತಿಗೆ ವರದಿ ರವಾನಿಸಿದ ಲೋಕಭವನ

ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಕಾಂಗ್ರೆಸ್‌ ಸದಸ್ಯರು…

6 hours ago

ಮಳವಳ್ಳಿ: ಈಜಲು ಹೋಗಿದ್ದ ಯುವಕ ಸಾವು

ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…

6 hours ago

ಮಂಡ್ಯದಲ್ಲಿ 3 ಕೋಟಿ ವೆಚ್ಚದಲ್ಲಿ ಗಾಂಧಿಭವನ ನಿರ್ಮಾಣ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…

6 hours ago

ಗ್ರಾಮ ಪಂಚಾಯತ್‌ಗಳ 590 ಸಿಬ್ಬಂದಿಗಳಿಗೆ ಅನುಮೋದನೆ: ಆದೇಶ ಪ್ರತಿ ವಿತರಿಸಿದ ಸಚಿವ ಎನ್‌.ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…

6 hours ago