ರಾಜ್ಯ

ಶುದ್ಧ ಇಂಧನಕ್ಕೆ ಒತ್ತು: ಆಸ್ಟ್ರೇಲಿಯಾದ ಸ್ಮಾರ್ಟ್ ಎನರ್ಜಿ ಕೌನ್ಸಿಲ್‌ ಜತೆ ಇಂಧನ ಇಲಾಖೆ ಒಪ್ಪಂದ

ಕ್ಯಾನ್‌ಬೆರಾ (ಆಸ್ಟ್ರೇಲಿಯಾ): ಶುದ್ಧ ಇಂಧನಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತವು (ಕ್ರೆಡಲ್) ಆಸ್ಟ್ರೇಲಿಯಾದ ಸ್ಮಾರ್ಟ್ ಎನರ್ಜಿ ಕೌನ್ಸಿಲ್‌ ಜತೆಗಿನ ಒಪ್ಪಂದಕ್ಕೆ ಶುಕ್ರವಾರ ಸಹಿ ಹಾಕಿದೆ.

ಈ ಒಪ್ಪಂದವು ಶುದ್ಧ ಇಂಧನ, ನವೀಕರಿಸಬಹುದಾದ ಇಂಧನ, ಗ್ರೀನ್‌ ಹೈಡ್ರೋಜನ್‌, ಬ್ಯಾಟರಿ ಪವರ್‌ ಸ್ಟೋರೇಜ್‌ ವ್ಯವಸ್ಥೆಗಳು ಮತ್ತು ಸಂಬಂಧಿತ ವಲಯಗಳಲ್ಲಿ ಸಹಕಾರ ಹೆಚ್ಚಿಸುವ ಗುರಿ ಹೊಂದಿದೆ. ಮುಂದಿನ ಮೂರು ವರ್ಷಗಳವರೆಗೆ ಜಾರಿಯಲ್ಲಿರುವ ಒಪ್ಪಂದವನ್ನು ಪರಸ್ಪರ ಒಪ್ಪಿಗೆ ಮೇರೆಗೆ ವಿಸ್ತರಿಸಲು ಅವಕಾಶವಿದೆ.

ರಾಜ್ಯ ಇಂಧನ ಇಲಾಖೆಯ ಪ್ರತಿನಿಧಿಯಾಗಿ ಕ್ರೆಡಲ್‌ನ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಪ್ಪಯ್ಯ ಹಾಗೂ ಸ್ಮಾರ್ಟ್ ಎನರ್ಜಿ ಕೌನ್ಸಿಲ್ ಪರವಾಗಿ ಅದರ ಮುಖ್ಯ ಕಾರ್ಯನಿರ್ವಾಹಕ ಜಾನ್ ಗ್ರಿಮ್ಸ್ ಮತ್ತು ಒಪ್ಪಂದಕ್ಕೆ ಸಹಿ ಹಾಕಿದರು.

“ಶುದ್ಧ ಇಂಧನ, ಗ್ರೀನ್ ಹೈಡ್ರೋಜನ್, ಬ್ಯಾಟರಿ ಪವರ್‌ ಸ್ಟೋರೇಜ್‌ ಮತ್ತು ಸಂಬಂಧಿತ ವಲಯಗಳಲ್ಲಿ ಪರಸ್ಪರ ಸಹಕಾರವನ್ನು ಬಲಪಡಿಸಲು ಆಸ್ಟ್ರೇಲಿಯಾದ ಸ್ಮಾರ್ಟ್ ಎನರ್ಜಿ ಕೌನ್ಸಿಲ್‌ ಜತೆಗಿನ ಒಪ್ಪಂದಕ್ಕೆ ಸಹಿ ಹಾಕಿದ್ದೇವೆ. ನೂತನ ತಂತ್ರಜ್ಞಾನಗಳನ್ನು ಸದುಪಯೋಗಪಡಿಸಿಕೊಳ್ಳುವುದು, ಪಾಲುದಾರಿಕೆಯನ್ನು ಸುಲಲಿತಗೊಳಿಸುವ ಜತೆಗೆ ಹೂಡಿಕೆ ಅವಕಾಶಗಳನ್ನು ಅನ್ವೇಷಿಸುವುದು ಈ ಒಪ್ಪಂದದ ಗುರಿಯಾಗಿದೆ,” ಎಂದು ಕೆ.ಪಿ. ರುದ್ರಪ್ಪಯ್ಯ ಹೇಳಿದರು.

ಒಪ್ಪಂದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಇಂಧನ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, “ಶುದ್ಧ ಇಂಧನಕ್ಕೆ ಒತ್ತು ನೀಡುವ ಈ ಒಪ್ಪಂದ ಗಮನಾರ್ಹವಾದುದು. ನವೀಕರಿಸಬಹುದಾದ ಇಂಧನ ಮತ್ತು ಗ್ರೀನ್‌ ಹೈಡ್ರೋಜನ್‌ಗೆ ಸಂಬಂಧಿಸಿದ ಆಸ್ಟ್ರೇಲಿಯದ ತಂತ್ರಜ್ಞಾನಗಳ ಬಳಕೆ ಕುರಿತು ಸ್ಮಾರ್ಟ್ ಎನರ್ಜಿ ಕೌನ್ಸಿಲ್‌ ಜತೆಗೆ ಕ್ರೆಡಲ್‌ ಸಮಾಲೋಚನೆ ನಡೆಸಲಿದೆ. ಈ ಪಾಲುದಾರಿಕೆಯು ತಂತ್ರಜ್ಞಾನ ವಿನಿಮಯವನ್ನು ಸುಗಮಗೊಳಿಸುವುದಲ್ಲದೇ, ಈ ವಲಯಗಳಲ್ಲಿ ಪರಸ್ಪರ ಹಿತಾಸಕ್ತಿಯನ್ನು ಬೆಂಬಲಿಸುವ ದ್ವಿಪಕ್ಷೀಯ ಹೂಡಿಕೆ ಅವಕಾಶಗಳನ್ನು ಅನ್ವೇಷಿಸಲಿದೆ,” ಎಂದು ತಿಳಿಸಿದರು.

ಸಭೆಯಲ್ಲಿ ಇಂಧನ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಗೌರವ್‌ ಗುಪ್ತಾ, ಶಾಸಕರೂ ಆದ ಕ್ರೆಡಲ್‌ ಅಧ್ಯಕ್ಷ ಟಿ.ಡಿ. ರಾಜೇಗೌಡ, ಕ್ರೆಡಲ್‌ ಅಧ್ಯಕ್ಷ ಕೆ.ಪಿ. ರುದ್ರಪ್ಪಯ್ಯ, ಇಂಧನ ಸಚಿವರ ಆಪ್ತ ಕಾರ್ಯದರ್ಶಿ ಸತೀಶ್‌, ಸ್ಮಾರ್ಟ್ ಎನರ್ಜಿ ಕೌನ್ಸಿಲ್‌ನ ಮುಖ್ಯ ಕಾರ್ಯನಿರ್ವಾಹಕ ಜಾನ್ ಗ್ರಿಮ್ಸ್ ಉಪಸ್ಥಿತರಿದ್ದರು.

ಕೋಟ್‌:
“ಶುದ್ಧ ಇಂಧನ ಮತ್ತು ಹಸಿರು ಹೈಡ್ರೋಜನ್ ಉಪಕ್ರಮಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಮತ್ತು ಆಸ್ಟ್ರೇಲಿಯಾ ಒಟ್ಟಾಗಿ ಕೆಲಸ ಮಾಡಲು ಬದ್ಧವಾಗಿ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಈ ಮೂಲಕ ಆಸ್ಟ್ರೇಲಿಯಾದ ಕಂಪನಿಗಳ ಜತೆಗಿನ ಕರ್ನಾಟಕದ ಸಂಪರ್ಕ ಸಲಭವಾಗುವ ಜತೆಗೆ ಹೂಡಿಕೆ ಅವಕಾಶಗಳು ಹೆಚ್ಚಲಿವೆ. ನವೀಕರಿಸಬಹುದಾದ ಇಂಧನ ಉತ್ಪಾದನೆ ಮತ್ತು ಉತ್ತೇಜನದಲ್ಲಿ ರಾಜ್ಯ ಮುಂಚೂಣಿಯಲ್ಲಿದ್ದು, ರಾಜ್ಯದ ಕೈಗಾರಿಕಾ ನೀತಿಗೆ ಅನುಗುಣವಾಗಿ ಯೋಜನೆಗಳಿಗೆ ಪ್ರೋತ್ಸಾಹಕಗಳನ್ನು ಒದಗಿಸಿದ್ದೇವೆ. ಈ ಕ್ರಮಗಳಿಂದಾಗಿ ಕರ್ನಾಟಕವು ಹೂಡಿಕೆಗೆ ಆದ್ಯತೆಯ ತಾಣವಾಗಿದೆ,”
ಕೆ.ಜೆ.ಜಾರ್ಜ್‌, ಇಂಧನ ಸಚಿವರು

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

2 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

2 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

2 hours ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

2 hours ago

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಪ್ರತಿಭಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…

2 hours ago

ಚಾ.ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಜೆ.ಯೋಗೇಶ್ ನೇಮಕ

ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ  ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…

2 hours ago