ರಾಜ್ಯ

ನಿರ್ದಾಕ್ಷಿಣ್ಯವಾಗಿ ಅಕ್ರಮ ಬಡಾವಣೆಗಳ ತೆರವು : ನಗರಾಭಿವೃದ್ಧಿ ಸಚಿವ ಬಿ.ಎಸ್.ಸುರೇಶ್ ಎಚ್ಚರಿಕೆ

ಬೆಂಗಳೂರು : ರಾಜ್ಯದ ನಗರ ಪ್ರದೇಶಗಳಲ್ಲಿ ನಿರ್ಮಾಣವಾಗಿರುವ ಅಕ್ರಮ ಬಡಾವಣೆಗಳನ್ನು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಲಾಗುತ್ತದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ಎಚ್ಚರಿಕೆ ನೀಡಿದ್ದಾರೆ.

ಅಲ್ಲದೇ, ಅಕ್ರಮ ಬಡಾವಣೆಗಳನ್ನು ತೆರವುಗೊಳಿಸಲು ವಿಫಲರಾಗುವ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಶಿಸ್ತಿನ ಕ್ರಮ ಜರುಗಿಸಲಾಗುತ್ತದೆ ಎಂದೂ ಅವರು ಹೇಳಿದ್ದಾರೆ. ಸೋಮವಾರ ವಿಧಾನಪರಿಷತ್ತಿನಲ್ಲಿ ಸದಸ್ಯ ಸಿ.ಎನ್.ಮಂಜೇಗೌಡ ಅವರು ನಿಯಮ 330 ರಡಿ ಅಕ್ರಮ ಬಡಾವಣೆಗಳ ವಿಚಾರವನ್ನು ಪ್ರಸ್ತಾಪಿಸಿದರು.

ಇದಕ್ಕೆ ಉತ್ತರ ನೀಡಿದ ಸಚಿವರು, ರಾಜ್ಯದಲ್ಲಿ ಬಡಾವಣೆ ನಿರ್ಮಾಣ ಮಾಡುವವರು ವಿನ್ಯಾಸ ಅನುಮೋದನೆಯನ್ನು ಪಡೆಯದೇ ಬಡಾವಣೆ ನಿರ್ಮಾಣ ಮಾಡಿದರೆ ಅದು ಅಕ್ರಮವಾಗುತ್ತದೆ. ಇಂತಹ ಬಡಾವಣೆಗಳಲ್ಲಿನ ನಿವೇಶನಗಳಿಗೆ ಖಾತೆ ಮಾಡದಂತೆ ನಿರ್ಬಂಧ ಹೇರಲಾಗಿದೆ. ಅಲ್ಲದೇ, ಅಂತಹ ಬಡಾವಣೆಗಳ ನಿವೇಶನಗಳಿಗೆ ಕಟ್ಟಡ ನಿರ್ಮಾಣಕ್ಕೆ ಅನುಮತಿಯನ್ನೂ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಅನಧಿಕೃತ ಬಡಾವಣೆಗಳ ನಿರ್ಮಾಣವನ್ನು ತಡೆಗಟ್ಟಲು ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1960 ರ ಕಲಂ 17(4) ರ ಅಡಿಯಲ್ಲಿ ಅಧಿಕಾರಿಗಳಿಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ. ಬಡಾವಣೆ ಮಾಲೀಕರಿಗೆ ನೋಟಿಸ್ ನೀಡಿ ಅಕ್ರಮ ನಿರ್ಮಾಣವನ್ನು ತಡೆಗಟ್ಟಲು ವಿಫಲರಾಗುವ ಅಧಿಕಾರಿಗಳಿಗೆ ದಂಡ ವಿಧಿಸುವ ಅಥವಾ ಅಮಾನತು ಮಾಡುವ ಅಥವಾ ಕೆಲಸದಿಂದಲೇ ವಜಾ ಮಾಡುವ ಅಧಿಕಾರ ಸರ್ಕಾರಕ್ಕಿದೆ ಎಂದರು.

ಬಡವರಿಗೆ ನಿವೇಶನ
ರಾಜ್ಯದ ಹಲವು ನಗರ ಪ್ರದೇಶಗಳಲ್ಲಿ ಬಡವರಿಗೆ ನಿವೇಶನ ನೀಡುವ ಕುರಿತು ಯೋಜನೆ ರೂಪಿಸಲಾಗುತ್ತಿದೆ. ಭೂಮಾಲೀಕರಿಗೆ ಶೇ.50 ಮತ್ತು ನಿವೇಶನಗಳಿಗೆ ಶೇ.50 ರಷ್ಟು ಪ್ರದೇಶವನ್ನು ಮೀಸಲಿಟ್ಟು ನಿವೇಶನಗಳನ್ನು ಹಂಚಿಕೆ ಮಾಡಲಾಗುತ್ತದೆ ಎಂದು ಸಚಿವರು ತಿಳಿಸಿದರು.

ಬೆಂಗಳೂರು ಮಾದರಿಯಲ್ಲಿ ಆಸ್ತಿಗಳಿಗೆ ಇ-ಖಾತೆಯನ್ನು ನೀಡುವ ಕುರಿತು ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಈ ಸಂಬಂಧ ಕಾನೂನು ಇಲಾಖೆಯೊಂದಿಗೆ ಸಮಾಲೋಚನೆ ನಡೆಸಲಾಗುತ್ತಿದ್ದು, ಅಭಿಪ್ರಾಯ ಪಡೆದ ನಂತರ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಅವರು ಹೇಳಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

20 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

20 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

20 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

20 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

20 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

20 hours ago