ಬೆಂಗಳೂರು: ರಾಜ್ಯದ 9 ವಿಶ್ವವಿದ್ಯಾನಿಲಯಗಳನ್ನು ಮುಚ್ಚುವ ಸರ್ಕಾರದ ನಿರ್ಧಾರ ಅಷ್ಟು ಸುಲಭವಲ್ಲ ಎಂದು ಮಾಜಿ ಸಚಿವ ಅಶ್ವಥ್ ನಾರಾಯಣ್ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾಸಗಿ ಸಂಯೋಜಿತ ಕಾಲೇಜುಗಳನ್ನು ಮುಚ್ಚುವುದೇ ದೊಡ್ಡ ಪ್ರಕ್ರಿಯೆಯಾಗಿದ್ದು, ಸರ್ಕಾರ ಅಂದುಕೊಂಡಂತೆ ಸ್ಥಾಪಿಸಿರುವ ವಿಶ್ವವಿದ್ಯಾನಿಲಯಗಳನ್ನು ಮುಚ್ಚುವುದು ಅಷ್ಟು ಸುಲಭವಲ್ಲ ಎಂದರು.
ಇನ್ನು ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಪ್ರತಿ ಜಿಲ್ಲೆಯಲ್ಲಿ ವಿವಿಗಳನ್ನು ಸ್ಥಾಪಿಸುವುದಾಗಿ ಹೇಳಿದರು. ಉನ್ನತ ಶಿಕ್ಷಣವನ್ನು ಉದಾರೀಕರಣಗೊಳಿಸಬೇಕು ಹಾಗೂ ಪ್ರತಿ ಅರ್ಹ ಜಿಲ್ಲೆಗಳು ವಿಶ್ವವಿದ್ಯಾಲಯ ಪಡೆಯಬೇಕು ಎಂದರು.
ವಿವಿಗಳನ್ನು ಮುಚ್ಚುವ ಕುರಿತು ತಜ್ಞರ ಸಮಿತಿಯ ವರದಿಯನ್ನು ಬಹಿರಂಗಗೊಳಿಸಲಿ ಎಂದು ಸವಾಲು ಹಾಕಿದರು.
ನನ್ನ ಜ್ಞಾನದ ಪ್ರಕಾರ ಹೊಸ ವಿಶ್ವವಿದ್ಯಾಲಯಗಳು ಹಳೆಯ ವಿದ್ಯಾಲಯಗಳಿಗಿಂತ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ಈ ವಿಷಯದ ಬಗ್ಗೆ ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಅವರೊಂದಿಗೆ ಬಹಿರಂಗ ಚರ್ಚೆ ಮಾಡಲು ಸಿದ್ಧ ಎಂದು ಸವಾಲು ಹಾಕಿದರು.
ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…
ನವದೆಹಲಿ: ಇರಾನ್ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್ ದರವನ್ನು 2 ರೂಗೆ ಏರಿಕೆ ಮಾಡಿದೆ.…
ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…
ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…
ಟೆಹರಾನ್: ಇರಾನ್ ಮೇಲೆ ಅಮೇರಿಕಾ ಹಾಗೂ ಇಸ್ರೇಲ್ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…
ಕಲಬುರ್ಗಿ: ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್ಗೆ ಆಡಳಿತ ಪಕ್ಷದಲ್ಲೇ ವಿರೋಧ ವ್ಯಕ್ತವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ಮಾಡಿದ್ದಾರೆ.…