ಬೆಂಗಳೂರು: ರಾಜ್ಯದ 9 ವಿಶ್ವವಿದ್ಯಾನಿಲಯಗಳನ್ನು ಮುಚ್ಚುವ ಸರ್ಕಾರದ ನಿರ್ಧಾರ ಅಷ್ಟು ಸುಲಭವಲ್ಲ ಎಂದು ಮಾಜಿ ಸಚಿವ ಅಶ್ವಥ್ ನಾರಾಯಣ್ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾಸಗಿ ಸಂಯೋಜಿತ ಕಾಲೇಜುಗಳನ್ನು ಮುಚ್ಚುವುದೇ ದೊಡ್ಡ ಪ್ರಕ್ರಿಯೆಯಾಗಿದ್ದು, ಸರ್ಕಾರ ಅಂದುಕೊಂಡಂತೆ ಸ್ಥಾಪಿಸಿರುವ ವಿಶ್ವವಿದ್ಯಾನಿಲಯಗಳನ್ನು ಮುಚ್ಚುವುದು ಅಷ್ಟು ಸುಲಭವಲ್ಲ ಎಂದರು.
ಇನ್ನು ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಪ್ರತಿ ಜಿಲ್ಲೆಯಲ್ಲಿ ವಿವಿಗಳನ್ನು ಸ್ಥಾಪಿಸುವುದಾಗಿ ಹೇಳಿದರು. ಉನ್ನತ ಶಿಕ್ಷಣವನ್ನು ಉದಾರೀಕರಣಗೊಳಿಸಬೇಕು ಹಾಗೂ ಪ್ರತಿ ಅರ್ಹ ಜಿಲ್ಲೆಗಳು ವಿಶ್ವವಿದ್ಯಾಲಯ ಪಡೆಯಬೇಕು ಎಂದರು.
ವಿವಿಗಳನ್ನು ಮುಚ್ಚುವ ಕುರಿತು ತಜ್ಞರ ಸಮಿತಿಯ ವರದಿಯನ್ನು ಬಹಿರಂಗಗೊಳಿಸಲಿ ಎಂದು ಸವಾಲು ಹಾಕಿದರು.
ನನ್ನ ಜ್ಞಾನದ ಪ್ರಕಾರ ಹೊಸ ವಿಶ್ವವಿದ್ಯಾಲಯಗಳು ಹಳೆಯ ವಿದ್ಯಾಲಯಗಳಿಗಿಂತ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ಈ ವಿಷಯದ ಬಗ್ಗೆ ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಅವರೊಂದಿಗೆ ಬಹಿರಂಗ ಚರ್ಚೆ ಮಾಡಲು ಸಿದ್ಧ ಎಂದು ಸವಾಲು ಹಾಕಿದರು.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…