mallikarjun kharge
ಬೆಂಗಳೂರು : ರಾಜ್ಯ ಕಾಂಗ್ರೆಸ್ನಲ್ಲಿ ಈಗ ಸಿಎಂ ಕುರ್ಚಿ ಫೈಟ್ ಜೋರಾಗಿದೆ. ಸರ್ಕಾರಕ್ಕೆ ಎರಡುವರೆ ವರ್ಷ ತುಂಬಿಂದ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಸಿಡಿದೆದ್ದಿದ್ದು, ಸಿಎಂ ಕುರ್ಚಿಗಾಗಿ ಪಟ್ಟು ಹಿಡಿದ್ದಾರೆ. ಅಲ್ಲದೇ ಡಿಕೆಶಿ ಬಣದ ಶಾಸಕರು ದೆಹಲಿಗೆ ಹೋಗಿ ಬೆಂಗಳೂರಿಗೆ ವಾಪಸಾಗಿದ್ದಾರೆ.
ಡಿಕೆ ಶಿವಕುಮಾರ್ ಅವರನ್ನು ಸಿಎಂ ಮಾಡಲೇಬೇಕೆಂದು ಬಹಿರಂಗವಾಗಿ ಕೆಲವರು ಹೇಳಿದ್ದಾರೆ. ಇನ್ನೊಂದೆಡೆ ಬೆಂಗಳೂರಿನಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ಕಾಂಗ್ರೆಸ್ ಶಾಸಕರು ಹಾಗೂ ಸಚಿವರು ಪರೇಡ್ ನಡೆಸಿದ್ದು, ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಕದನ ತೀವ್ರ ಸ್ವರೂಪ ಪಡೆದುಕೊಂಡಿದೆ. ಇನ್ನು ಈ ಎಲ್ಲಾ ಬೆಳವಣಿಗೆ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದ್ದು, ಹೇಳುವುದಕ್ಕೆ ನನ್ನ ಹತ್ತಿರ ಏನೂ ಇಲ್ಲ ಎಂದು ತಮ್ಮ ಬೇಸರ ವ್ಯಕ್ತಪಡಿಸಿದ್ದಾರೆ.
ಇದನ್ನು ಓದಿ: SIR | ಮೇಲ್ವಿಚಾರಣೆಗೆ ತಂಡ ರಚಸಿದ ಕಾಂಗ್ರೆಸ್
ಸದ್ಯ ಕರ್ನಾಟಕ ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಬೆಂಗಳೂರಿನಲ್ಲಿಂದು ಮೊದಲ ಬಾರಿಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಏನೇ ಇದ್ದರೂ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ. ಹೇಳುವುದಕ್ಕೆ ನನ್ನ ಹತ್ತಿರ ಏನೂ ಇಲ್ಲ ರಾಜ್ಯದಲ್ಲಿನ ಸದ್ಯದ ಬೆಳವಣಿಗೆ ಬಗ್ಗೆ ನಾನು ಏನೂ ಹೇಳಲ್ಲ. ಈಗ ನಡೆದ ವಿದ್ಯಮಾನದ ಬಗ್ಗೆ ಹೇಳಲು ನನ್ನ ಬಳಿ ಏನೂ ಇಲ್ಲ. ಯಾವುದೇ ವಿಚಾರದ ಬಗ್ಗೆಯೂ ಹೇಳುವುದಕ್ಕೆ ಏನೂ ಇಲ್ಲ. ಏನೇ ಇದ್ದರೂ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಅಸಹಾಯಕತೆ ಹೊರಹಾಕಿದ್ದಾರೆ.
ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…
ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…
ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…
ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.28ರವರೆಗೂ ಕರ್ನಾಟಕದಲ್ಲಿ ಮಳೆ…
ನವದೆಹಲಿ: ನೀಟ್ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್ ಹಾಗೂ…
ಹೆಗ್ಗಡದೇವನಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಫಿಜಿಯೋಥೆರಪಿ ಸೌಲಭ್ಯವಿಲ್ಲದೇ ತಾಲ್ಲೂಕಿನ ಗ್ರಾಮಸ್ಥರು ಫಿಜಿಯೋ ಥೆರಪಿಗಾಗಿ ಖಾಸಗಿ ಆಸ್ಪತ್ರೆಗೆ ತೆರಳುವುದು ಅನಿವಾರ್ಯವಾಗಿದೆ. ಹಣವಿದ್ದವರು ಖಾಸಗಿ…