ರಾಜ್ಯ

ಕಾಂಗ್ರೆಸ್‌ನಲ್ಲಿ ನಿಲ್ಲದ ಸಿಎಂ ಬದಲಾವಣೆ ಚರ್ಚೆ

ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ಬಗ್ಗೆ ಹೈಕಮಾಂಡ್‌ ಹಲವು ಬಾರಿ ಕಟ್ಟುನಿಟ್ಟಿನ ಸೂಚನೆ ನೀಡಿದರೂ ಕಾಂಗ್ರೆಸ್‌ ಪಕ್ಷದ ವಲಯದಲ್ಲಿ ಅದೇ ಮುಂದುವರೆದಿದೆ.

ಗೃಹ ಸಚಿವ ಜಿ. ಪರಮೇಶ್ವರ್‌ ಮಾತನಾಡಿ, ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಶಾಸಕರ ಅಭಿಪ್ರಾಯ ಮುಖ್ಯ. ಅವರ ಅಭಿಪ್ರಾಯದ ಮೇರೆಗೆ ಹೈಕಮಾಂಡ್‌ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ ಎಂದರು.

ಕಾಂಗ್ರೆಸ್‌ ಶಾಸಕ ಇಕ್ಬಾಲ್‌ ಹುಸೇನ್‌ ಅವರು ಡಿಕೆ ಶಿವಕುಮಾರ್‌ ಸಿಎಂ ಆಗಲು ಶಾಸಕರ ಬೆಂಬಲಬೇಕು ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಸಿಎಂ ಡಿಕೆ ಶಿವಕಮಾರ್‌, ಸಚಿವರೇ ಆಗಲಿ, ಶಾಸಕರೇ ಅಗಲಿ ಯಾವುದೇ ವಿಚಾರವನ್ನು ಸರ್ಕಾರ ಹಾಗೂ ಪಕ್ಷದ ವೇದಿಕೆಯಲ್ಲಿ ಚರ್ಚಿಸಬೇಕು. ಹಾದಿಬೀದಿಯಲಿ ಈ ರೀತಿಯ ಹೇಳಿಕೆ ನೀಡುವುದು ತಪ್ಪು ಎಂದು ಹೇಳಿದರು.

ಮಂಗಳವಾರ ಮಾತನಾಡಿದ್ದ ಸಹಕಾರ ಸಚಿವ ಕೆ.ಎನ್‌. ರಾಜಣ್ಣ, ಮುಖ್ಯಮಂತ್ರಿ ಆಯ್ಕೆ ವಿಚಾರದಲ್ಲಿ ಶಾಸಕಾಂಗ ಪಕ್ಷದ ಅಭಿಪ್ರಾಯ ಸಂಗ್ರಹಿಸಿದ ನಂತರವೇ ಹೈಕಮಾಂಡ್‌ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ. ಎಲ್ಲ ಶಾಸಕರದ್ದು ಒಂದೇ ಅಭಿಪ್ರಾಯವಿರುವುದಿಲ್ಲ. ಕಾಂಗ್ರೆಸ್‌ ಪಕ್ಷದಲ್ಲಿ ಮುಖ್ಯಮಂತ್ರಿಯಾಗುವವರು ಬಹಳಷ್ಟು ಜನ ಇದ್ದಾರೆ. ಹೈಕಮಾಂಡ್‌ ಎಲ್ಲರ ಅಭಿಪ್ರಾಯ ಕೇಳುತ್ತದೆ. ಅವರ ನಿರ್ಣಯಕ್ಕೆ ನಾವು ಬದ್ದರಾಗಿರುತ್ತೇವೆ ಎಂದು ಹೇಳಿದ್ದರು.

ಆಂದೋಲನ ಡೆಸ್ಕ್

Recent Posts

ಮತ್ತೆ ಬರಲಿರುವ ರಾಮಾಚಾರಿ ಇದು ‘ನಾಗರಹಾವು’ ಚಿತ್ರದ ಮುಂದಿನ ಭಾಗ

‘ಶ್ರೀ ಕ್ಷೇತ್ರ ಕೈವಾರ ತಾತಯ್ಯ’ ಮತ್ತು ‘ದೇವನಹಳ್ಳಿ’ ಚಿತ್ರಗಳನ್ನು ನಿರ್ದೇಶಿಸಿರುವ ಪಲ್ಲಕ್ಕಿ ರಾಧಾಕೃಷ್ಣ, ಆನಂತರ ಒಂದೆರಡು ಚಿತ್ರಗಳನ್ನು ನಿರ್ದೇಶಿಸುವುದಾಗಿ ಸುದ್ದಿಯಾದರೂ,…

2 hours ago

ಕಿಡಿ ಹೊತ್ತಿಸಲು ಬಂದ ನಿರಂಜನ್ ಹೊಸ ಚಿತ್ರ ‘ಸ್ಪಾರ್ಕ್’ ಪ್ರಾರಂಭ

ವ್ಯವಸ್ಥೆಯ ವಿರುದ್ಧ ಹೋರಾಡುವ ಪತ್ರಕರ್ತರ ಕುರಿತಾಗಿ ಹಲವು ಸಿನಿಮಾಗಳು ಬಂದಿವೆ. ಇದೀಗ ಉಪೇಂದ್ರ ಅವರ ಅಣ್ಣನ ಮಗ ನಿರಂಜನ್ ಸುಧೀಂದ್ರ…

2 hours ago

ಪುನೀತ್‌ 50 ʼಅಪ್ಪುʼ ಮರು ಬಿಡುಗಡೆ

ಪುನೀತ್ ರಾಜ್‌ಕುಮಾರ್ ಇದ್ದಿದ್ದರೆ, ದೊಡ್ಡ ಸಂಭ್ರಮ ಮನೆ ಮಾಡಿರುತ್ತಿತ್ತು. ಮಾರ್ಚ್ ೧೭ಕ್ಕೆ ಅವರು ೫೦ ಮುಗಿಸಿ,೫೧ನೇ ವರ್ಷಕ್ಕೆಕಾಲಿಡುತ್ತಿದ್ದರು. ಪುನೀತ್‌ ಇಲ್ಲದ…

3 hours ago

ನಮಗೆ ಏಕೆ ಕಡಿಮೆ ಸಂಭಾವನೆ: ರಮ್ಯಾ ದಿಟ್ಟ ಪ್ರಶ್ನೆ

ಮನದ ಕಡಲು ಶೀರ್ಷಿಕೆ ಗೀತೆ ಬಿಡುಗಡೆ ಮಾಡಿದ ರಮ್ಯಾ  ಕನ್ನಡ ಚಿತ್ರರಂಗದಲ್ಲಿ ನಾಯಕಿಯರಿಗೆ ಕಡಿಮೆ ಸಂಭಾವನೆ ನೀಡಲಾಗುತ್ತದೆ. ಜೊತೆಗೆ ಒಳ್ಳೆಯ…

3 hours ago

ಓದುಗರ ಪತ್ರ: ವಾಹನ ದಟ್ಟಣೆ ನಿಯಂತ್ರಿಸಿ

ಮೈಸೂರಿನ ಕುಂಬಾರ ಕೊಪ್ಪಲು, ಹೆಬ್ಬಾಳು, ವಿಜಯನಗರ ಎರಡನೇ ಹಂತ ಮತ್ತು ಮಂಚೇಗೌಡನ ಕೊಪ್ಪಲಿಗೆ ಸಂಪರ್ಕ ಕಲ್ಪಿಸುವ ಸೂರ್ಯ ಬೇಕರಿ ವೃತ್ತದ…

3 hours ago

ಓದುಗರ ಪತ್ರ: ಪೊಲೀಸ್ ಇಲಾಖೆಗೆ ಅಭಿನಂದನೆಗಳು

ಮೈಸೂರಿನಲ್ಲಿ ಇತ್ತೀಚೆಗೆ ನಡೆದ ಕೋಮುಗಲಭೆ ಜನರು ಹಬ್ಬಗಳನ್ನು ಆತಂಕದಲ್ಲೇ ಆಚರಿಸುವಂತೆ ಮಾಡಿತ್ತು. ಇಂತಹ ಆತಂಕದ ಸಂದರ್ಭದಲ್ಲಿಯೂ ಸೂಕ್ಷ್ಮ ಪ್ರದೇಶವಾದ ನಗರದ…

3 hours ago