ಮಂಡ್ಯ: ನಾನು ಜ್ಯೋತಿಷಿ ಅಲ್ಲ. ಆದರೆ ನವೆಂಬರ್ನಲ್ಲಿ ಸಿಎಂ ಬದಲಾವಣೆ ಆಗೋದು ಫಿಕ್ಸ್ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಮತ್ತೊಮ್ಮೆ ಭವಿಷ್ಯ ನುಡಿದಿದ್ದಾರೆ.
ಈ ಕುರಿತು ಮಂಡ್ಯದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದ ಅಸಮಾಧಾನ ಹಾಗೂ ಸಿಎಂ ಬದಲಾವಣೆ ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಾನು ಭವಿಷ್ಯ ಹೇಳೋಕೆ ಜ್ಯೋತಿಷಿ ಅಲ್ಲ. ಆದರೆ ನವೆಂಬರ್ ತಿಂಗಳಿನಲ್ಲಿ ಸಿಎಂ ಬದಲಾವಣೆ ಆಗೋದು ಫಿಕ್ಸ್ ಎಂದು ಮತ್ತೊಮ್ಮೆ ಪುನರುಚ್ಛರಿಸಿದ್ದಾರೆ.
ಇನ್ನು ಬಿಜೆಪಿ ಪಕ್ಷದ ಅಸಮಾಧಾನದ ಬಗ್ಗೆ ಮಾತನಾಡಿದ ಅವರು, ಪಕ್ಷದಲ್ಲಿ ನಡೆಯುತ್ತಿರುವ ಘಟನೆ ತುಂಬಾ ಬೇಸರ ತಂದಿದೆ. ಗುಂಪುಗಾರಿಕೆ, ಎರಡು ಬಣ ಮಾಡಿರೋದು ಒಳ್ಳೆಯದಲ್ಲ. ಇದರಿಂದ ಪಕ್ಷಕ್ಕೂ ಒಳ್ಳೆಯದಲ್ಲ. ನಾನು ಬಿಜೆಪಿ ಪಕ್ಷಕ್ಕೆ ಬಂದು 50 ವರ್ಷ ಆಗಿದೆ. ಕೇವಲ 18 ವರ್ಷ ವಯಸ್ಸಿನಲ್ಲೇ ನಾನು ಪಕ್ಷಕ್ಕೆ ಎಂಟ್ರಿ ಕೊಟ್ಟಿದ್ದೆ. ಆದ್ರೆ ಎಮರ್ಜೆನ್ಸಿಯಲ್ಲಿ ಜೈಲಿನಲ್ಲಿದ್ದೆ. ನಾನು, ನನ್ನ ಚಿಕ್ಕಪ್ಪ, ತಮ್ಮ ಎಲ್ಲರೂ ಜೈಲಿನಲ್ಲಿದ್ದೆವು. ಆದ್ದರಿಂದ ನಾವು ಆಗಿನಿಂದಲೂ ಹೋರಾಟ ಮಾಡಿಕೊಂಡೇ ಬಂದವರು. ಒಂದೇ ಬಾರಿ ಲೀಡರ್ ಆಗಿಲ್ಲ. ಹಂತ ಹಂತವಾಗಿ ಮೇಲೆ ಬಂದಿದ್ದೇನೆ ಎಂದರು.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…