ರಾಜ್ಯ

ನವೆಂಬರ್‌ನಲ್ಲಿ ಸಿಎಂ ಬದಲಾವಣೆ ಆಗೋದು ಫಿಕ್ಸ್‌: ಆರ್.‌ಅಶೋಕ್‌ ಪುನರುಚ್ಛಾರ

ಮಂಡ್ಯ: ನಾನು ಜ್ಯೋತಿಷಿ ಅಲ್ಲ. ಆದರೆ ನವೆಂಬರ್‌ನಲ್ಲಿ ಸಿಎಂ ಬದಲಾವಣೆ ಆಗೋದು ಫಿಕ್ಸ್‌ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ಮತ್ತೊಮ್ಮೆ ಭವಿಷ್ಯ ನುಡಿದಿದ್ದಾರೆ.

ಈ ಕುರಿತು ಮಂಡ್ಯದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದ ಅಸಮಾಧಾನ ಹಾಗೂ ಸಿಎಂ ಬದಲಾವಣೆ ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಾನು ಭವಿಷ್ಯ ಹೇಳೋಕೆ ಜ್ಯೋತಿಷಿ ಅಲ್ಲ. ಆದರೆ ನವೆಂಬರ್‌ ತಿಂಗಳಿನಲ್ಲಿ ಸಿಎಂ ಬದಲಾವಣೆ ಆಗೋದು ಫಿಕ್ಸ್‌ ಎಂದು ಮತ್ತೊಮ್ಮೆ ಪುನರುಚ್ಛರಿಸಿದ್ದಾರೆ.

ಇನ್ನು ಬಿಜೆಪಿ ಪಕ್ಷದ ಅಸಮಾಧಾನದ ಬಗ್ಗೆ ಮಾತನಾಡಿದ ಅವರು, ಪಕ್ಷದಲ್ಲಿ ನಡೆಯುತ್ತಿರುವ ಘಟನೆ ತುಂಬಾ ಬೇಸರ ತಂದಿದೆ. ಗುಂಪುಗಾರಿಕೆ, ಎರಡು ಬಣ ಮಾಡಿರೋದು ಒಳ್ಳೆಯದಲ್ಲ. ಇದರಿಂದ ಪಕ್ಷಕ್ಕೂ ಒಳ್ಳೆಯದಲ್ಲ. ನಾನು ಬಿಜೆಪಿ ಪಕ್ಷಕ್ಕೆ ಬಂದು 50 ವರ್ಷ ಆಗಿದೆ. ಕೇವಲ 18 ವರ್ಷ ವಯಸ್ಸಿನಲ್ಲೇ ನಾನು ಪಕ್ಷಕ್ಕೆ ಎಂಟ್ರಿ ಕೊಟ್ಟಿದ್ದೆ. ಆದ್ರೆ ಎಮರ್ಜೆನ್ಸಿಯಲ್ಲಿ ಜೈಲಿನಲ್ಲಿದ್ದೆ. ನಾನು, ನನ್ನ ಚಿಕ್ಕಪ್ಪ, ತಮ್ಮ ಎಲ್ಲರೂ ಜೈಲಿನಲ್ಲಿದ್ದೆವು. ಆದ್ದರಿಂದ ನಾವು ಆಗಿನಿಂದಲೂ ಹೋರಾಟ ಮಾಡಿಕೊಂಡೇ ಬಂದವರು. ಒಂದೇ ಬಾರಿ ಲೀಡರ್‌ ಆಗಿಲ್ಲ. ಹಂತ ಹಂತವಾಗಿ ಮೇಲೆ ಬಂದಿದ್ದೇನೆ ಎಂದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಗಾಂಧಿಯ ಸರಳತೆಯತ್ತ ನಡೆಯುತ್ತಿರುವ ಯುವಜನತೆ

ಮಹಾತ್ಮ ಗಾಂಧೀಜಿ ಅವರ ಆತ್ಮಕತೆಗೆ ನೂರು ವರ್ಷ ಸಂದಿರುವುದು ಸಂತಸದ ವಿಷಯ. ಇವತ್ತು ಗಾಂಧಿಜಿ ಅವರ ವಿಚಾರಕ್ಕೆ ಏನಾಗುತ್ತಿದೆ? ಆಚಾರಕ್ಕೆ…

2 hours ago

ಮಾರ್ಟಿನ್ ಲೂಥರ್ ಕಿಂಗ್ ಕಣ್ಣಲ್ಲಿ ಮಹಾತ್ಮ ಗಾಂಧಿ…

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಭಗವಂತ ಯೇಸು ನಮಗೆ ದಾರಿ ಅಂದರೆ, ಶಾಂತಿ…

2 hours ago

ಮಾಂಸಾಹಾರ ಬಿಟ್ಟರೂ ಮಿತ್ರನ ಗೆಳೆತನ ಬಿಡಲಾಗಲಿಲ್ಲ

ಗಾಂಧಿ ಅಭಿಯಾನ ಅರಿವಿನ ಯಾನ ಗೊತ್ತಾಗಿದ್ದ ದಿನ ಬಂತು. ನನ್ನ ಆಗಿನ ಸ್ಥಿತಿಯನ್ನು ವರ್ಣಿಸುವುದು ಕಷ್ಟ. ಒಂದು ಕಡೆ ಸುಧಾರಣೆಯ ಮಾರ್ಗದ…

2 hours ago

ಡಿಕೆಶಿ ಸಂಪುಟದಲ್ಲಿ ಯಾರ‍್ಯಾರಿಗೆ ಒಲಿಯಲಿದೆ ಮಂತ್ರಿ ಸ್ಥಾನ?

ಕೆ.ಬಿ.ರಮೇಶನಾಯಕ ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್‌ಗೆ ಮಂತ್ರಿ ಸ್ಥಾನ ಸಾಧ್ಯತೆ ಎಚ್‌ಸಿಎಂಗೆ ಪ್ರಬಲ ಖಾತೆ ಕೊಡಿಸಲು ಹೈಕಮಾಂಡ್ ಮಟ್ಟದಲ್ಲಿ…

2 hours ago

ಈ ಬಾರಿ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ಸಿಗುವುದೇ?

ಮಂಜು ಕೋಟೆ ಕೋಟೆ: ಮೈಸೂರು ಪ್ರಾಂತ್ಯದ ನಾಯಕ ಸಮುದಾಯದ ಏಕೈಕ ಶಾಸಕರಾಗಿರುವುದು ಪ್ಲಸ್ ಪಾಯಿಂಟ್ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

2 hours ago

ಕಂದಾಯ ದಾಖಲೆಯಲ್ಲಿ ೪ ವಾರ್ಡ್‌ಗಳೇ ನಾಪತ್ತೆ!

ಎಸ್.ಎಸ್.ಭಟ್ ನಂಜನಗೂಡು ನಗರಸಭೆಯಲ್ಲಿ ೩೧ ವಾರ್ಡ್‌ಗಳು, ಕಂದಾಯ ಇಲಾಖೆಯಲ್ಲಿ ೨೭ ವಾರ್ಡ್‌ಗಳು ನಂಜನಗೂಡು: ಪುರಸಭೆ ನಗರಸಭೆಯಾಗಿ ಬಡ್ತಿ ಹೊಂದಿ ೨೭…

2 hours ago