ಧಾರವಾಡ: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದಿಂದ ಅರಾಜಕತೆ ಸೃಷ್ಟಿಯಾಗಿದೆ. ಒಬ್ಬರ ವಿರುದ್ಧ ಮತ್ತೊಬ್ಬರು ಹೇಳಿಕೆ ಕೊಡಿಸುತ್ತಿದ್ದಾರೆ. ಹೆಚ್ಚು ಡಿಸಿಎಂ ಸೃಷ್ಟಿ ಅಂತಾ ಒತ್ತಾಯ ಎಬ್ಬಿಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಈ ಎಲ್ಲಾ ಹೇಳಿಕೆಗಳನ್ನು ತಮ್ಮ ಬಾಲಂಗೋಚಿಗಳಿಂದ ಹೇಳಿಸ್ತಾ ಇದ್ದಾರೆ. ಇತ್ತ ಸಿಎಂ ಅನ್ನೇ ಬದಲಾವಣೆ ಮಾಡಬೇಕು ಎಂದು ತಮ್ಮ ಹಿಂಬಾಲಕರಿಂದ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಸುತ್ತಿದ್ದಾರೆ. ರಾಜ್ಯ ಸರ್ಕಾರ ದಿಕ್ಕು-ದಾರಿ ತಪ್ಪಿದೆ. ದಾರಿ ತಪ್ಪಿದ ಮಗನಂತೆ ಸರ್ಕಾರ ಆಗಿದೆ. ಒಬ್ಬೊಬ್ಬರಿಗೊಬ್ಬರು ತಮ್ಮ ಹಿಂಬಾಲಕರನ್ನು ಬಿಡುತ್ತಿದ್ದಾರೆ ಎಂದು ಕಿಡಿಕಾರಿದರು.
ತಮ್ಮದೇ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಹೇಳಿಕೆಗಳನ್ನು ಕೊಡಿಸುತ್ತಾ ಇದ್ದಾರೆ. ಪಕ್ಷದ ಹೈಕಮಾಂಡ್ ಕ್ರಮ ಅಂತಾ ಹೇಳ್ತಾರೆ. ಏನೇ ಹೇಳಿದರೂ ಕ್ರಮ ಆಗುತ್ತಿಲ್ಲ. ಇಷ್ಟು ದಯನೀಯ ಸ್ಥಿತಿಗೆ ಕಾಂಗ್ರೆಸ್ ಸರ್ಕಾರ ಬಂದಿದೆ. ಒಂದು ವರ್ಷದಲ್ಲಿ ಕಾಂಗ್ರೆಸ್ ಸರ್ಕಾರ ಹೀಗಾಗಿದೆ. ಕಾಂಗ್ರೆಸ್ ಬಗ್ಗೆ ಜನ ಬೇಸತ್ತಿದ್ದಾರೆ. ಇದರ ಪರಿಣಾಮ ರಾಜ್ಯದ ಆಡಳಿತದ ಮೇಲಾಗಿದೆ ಎಂದು ವಾಗ್ದಾಳಿ ನಡೆಸಿದರು.
ಇನ್ನೂ ಮುಂದುವರಿದು ಮಾತನಾಡಿದ ಅವರು, ಐದು ವರ್ಷ ಚೆನ್ನಾಗಿ ಆಡಳಿತ ನಡೆಸಿ ಅಂತಾನೇ ನಾವು ಹೇಳೋದು. ಅವರ ಆಂತರಿಕ ಕಾರಣದಿಂದ ಸರ್ಕಾರ ಬಿದ್ದರೆ ನಾವು ಜವಾಬ್ದಾರರಲ್ಲ. ಆಮೇಲೆ ಅದಕ್ಕೆ ಆಪರೇಷನ್ ಕಮಲ ಅಂತಾ ಅವರೇ ಹೇಳ್ತಾರೆ. ಆದರೆ ಆ ವಿಚಾರ ನಮ್ಮ ತಲೆಯಲ್ಲಿಲ್ಲ ಎಂದು ಸ್ಪಷ್ಟಪಡಿಸಿದರು.
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…
ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್ಟಿಎಫ್ ಸಿಬ್ಬಂದಿಯ ಮೇಲೆಯೇ…
ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…
ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…
ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…
ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…