ರಾಜ್ಯ

ಸಿಎಂ ಬದಲಾವಣೆ ಕಾಂಗ್ರೆಸ್‌ನ ಆಂತರಿಕ ವಿಚಾರ ಎಂದ ಮಾಜಿ ಸಚಿವ ಎಚ್.ಡಿ.ರೇವಣ್ಣ

ಬೆಂಗಳೂರು: ಸಿಎಂ ಬದಲಾವಣೆ ಕಾಂಗ್ರೆಸ್‌ನ ಆಂತರಿಕ ವಿಚಾರಕ್ಕೆ ಅದಕ್ಕೆ ನಾನು ತಲೆಹಾಕಲ್ಲ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಹೇಳಿದ್ದಾರೆ.

ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಕುರಿತಂತೆ ಸ್ವಾಮೀಜಿಗಳು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಇಳಿದು ಆ ಸ್ಥಾನವನ್ನು ಡಿಕೆಶಿಗೆ ನೀಡಲಿ ಎಂಬ ಆಗ್ರಹಗಳು ಆಗಾಗ್ಗೆ ಕೇಳಿ ಬರುತ್ತಲೇ ಇವರ. ಹೀಗಿರುವಾಗಲೇ ಒಕ್ಕಲಿಗ ಸ್ವಾಮೀಜಿಯೊಬ್ಬರು ಡಿ.ಕೆ.ಶಿವಕುಮಾರ್‌ ಅವರು ಸಿಎಂ ಸ್ಥಾನದಲ್ಲಿ ಕೂರಬೇಕು ಎಂದು ಆಗ್ರಹಿಸಿದ್ದಾರೆ.

ಸ್ವಾಮೀಜಿ ಹೇಳಿಕೆ ಬೆನ್ನಲ್ಲೇ ರಾಜ್ಯ ಸರ್ಕಾರದಲ್ಲಿ ಭಾರೀ ಸಂಚಲನ ಸೃಷ್ಟಿಯಾಗಿದ್ದು, ಡಿಕೆಶಿ ಅಭಿಮಾನಿಗಳೆಲ್ಲಾ ಈ ಆಗ್ರಹಕ್ಕೆ ಧ್ವನಿಗೂಡಿಸಿದ್ದಾರೆ.

ಈ ಬೆಳವಣಿಗೆ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು, ದೊಡ್ಡವರ ವಿಷಯ ನನಗೆ ಗೊತ್ತಿಲ್ಲ. ಕಳೆದ ಒಂದು ತಿಂಗಳಿಂದ ಎಚ್‌ಡಿಡಿ ವಿರುದ್ಧ ಏನೇನೋ ನಡೆಯಿತು. ಆದ್ರೂ ಯಾರೊಬ್ಬರೂ ಕೂಡ ನಮ್ಮ ವಿರುದ್ಧದ ಷಡ್ಯಂತ್ರದ ಬಗ್ಗೆ ಮಾತನಾಡಲಿಲ್ಲ. ಯಾರನ್ನಾದ್ರೂ ಸಿಎಂ ಮಾಡಲಿ ಆ ವಿಷಯ ನಮಗೆ ಬೇಕಿಲ್ಲ. ಸಿಎಂ ಬದಲಾವಣೆ ಕಾಂಗ್ರೆಸ್‌ನ ಆಂತರಿಕ ವಿಚಾರ. ಸಿಎಂ ಹುದ್ದೆ ನಮ್ಮ ಹತ್ತಿರ ಇಲ್ಲ. ಅದಕ್ಕೆ ನಾವು ಆ ಬಗ್ಗೆ ಹೆಚ್ಚಿಗೆ ಮಾತನಾಡಲು ಹೋಗಲ್ಲ ಎಂದರು.

ಇಬ್ಬರು ಮಕ್ಕಳು ಜೈಲಿನಲ್ಲಿರುವ ಬಗ್ಗೆ ಮಾತನಾಡಲು ನಿರಾಕರಿಸಿದ ಅವರು, ದೇವರಿದ್ದಾನೆ ಎಲ್ಲವನ್ನೂ ಅವನೇ ನೋಡಿಕೊಳ್ತಾನೆ. ಅವನ ಮೇಲೆಯೇ ನಾವು ನಂಬಿಕೆ ಇಟ್ಟಿದ್ದೇವೆ ಎಂದು ಹೇಳಿ ತೆರಳಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

2 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

3 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

3 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

4 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

5 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

9 hours ago