ಬೆಂಗಳೂರು: ನಾನು ಯಾವುದೇ ಸ್ಥಾನ ಹುಡುಕಿಕೊಂಡು ಹೋಗಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ರಾಜ್ಯ ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆ ಮುಂದಿನ ಸಿಎಂ ವಿಚಾರ ಬಗ್ಗೆ ಚರ್ಚೆ ಮುನ್ನೆಲೆಗೆ ಬರುತ್ತಲೇ ಇದೆ. ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಪಟ್ಟ ನೀಡುವಂತೆ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಆಗ್ರಹಿಸುತ್ತಲೇ ಬಂದಿದ್ದಾರೆ. ಇದೀಗ ಬಿಜೆಪಿ ಎಂಎಲ್ಸಿ ಎಚ್.ವಿಶ್ವನಾಥ್ ಅವರೂ ಸಹ ಡಿಕೆಶಿ ಪರ ಬ್ಯಾಟ್ ಬೀಸಿದ್ದು, ಭಾರೀ ಸಂಚಲನ ಸೃಷ್ಟಿಯಾಗಿದೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗ ಅರ್ಜೆಂಟ್ ಯಾವುದೂ ಇಲ್ಲ. ಏನೇ ಇದ್ದರೂ ಸಹ ನಮ್ಮ ಪಕ್ಷ ತೀರ್ಮಾನಿಸುತ್ತದೆ. ನಾನು ಯಾವುದೇ ಸ್ಥಾನವನ್ನು ಹುಡುಕಿಕೊಂಡು ಹೋಗಲ್ಲ ನನಗೆ ಯಾವುದೇ ಸ್ಥಾನ ಹುಡುಕಿ ಹೋಗುವ ಅಗತ್ಯವಿಲ್ಲ. ಪಕ್ಷಕ್ಕೆ ಏನು ಮಾಡಬೇಕೋ ಅದನ್ನು ಮಾಡುತ್ತೇನೆ. ಮಿಕ್ಕಿದ್ದನ್ನೆಲ್ಲಾ ಪಕ್ಷವೇ ತೀರ್ಮಾನ ಮಾಡುತ್ತದೆ ಎಂದು ತಿಳಿಸಿದ್ದಾರೆ.
ಆದರೆ ಡಿ.ಕೆ.ಶಿವಕುಮಾರ್ ಅವರ ಅಭಿಮಾನಿಗಳು ಸಿಎಂ ಪಟ್ಟವನ್ನು ಡಿಕೆಶಿಗೆ ಬಿಟ್ಟುಕೊಡುವಂತೆ ದಿನದಿಂದ ದಿನಕ್ಕೆ ಆಗ್ರಹಿಸುತ್ತಲೇ ಇದ್ದು, ಇದು ಮುಂದಿನ ದಿನಗಳಲ್ಲಿ ಯಾವ ಮಟ್ಟಕ್ಕೆ ತಲುಪುತ್ತದೆ ಎಂಬುದನ್ನು ಕಾದುನೋಡಬೇಕಿದೆ.
ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…
ನವದೆಹಲಿ: ದೇಶದ ಗಮನ ಸೆಳೆದಿರುವ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ನಾಳೆ ಹೊರಬೀಳಲಿದ್ದು, ಘಟಾನುಘಟಿ ರಾಜಕೀಯ ನಾಯಕರ ಭವಿಷ್ಯ…
ಹಾಸನ: ಹಳಿ ಮೇಲೆ ಕೆಲಸ ಮಾಡುತ್ತಿದ್ದ ನೌಕರನಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ನೌಕರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಕಲೇಶಪುರ…
ಕೆ.ಆರ್.ನಗರ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲ್ಲೂಕಿನ ಚೀನರಹಳ್ಳಿ ಗ್ರಾಮದಲ್ಲಿ ನಡೆದಿದೆ.…
ಚುನಾವಣೋತ್ತರ.. ! ಪಂಚರಾಜ್ಯಗಳ ಚುನಾವಣೆ ಮುಗಿಯುತ್ತಿದ್ದಂತೆಯೇ.. ಪ್ರಕಟವಾದವು ಫಲಿತಾಂಶದ ಸಮೀಕ್ಷೆ ಆದರೆ ಯಾರೂ ಮಾಡಿರಲಿಲ್ಲ ಹೀಗೆ ವಾಣಿಜ್ಯ ಸಿಲಿಂಡರ್ ದರ…
ಬೇಸಿಗೆ ತೀವ್ರಗೊಳ್ಳುತ್ತಿದ್ದಂತೆ ರಾಜ್ಯದ ಹಲವೆಡೆ ನೀರಿನ ಕೊರತೆ ಗಂಭೀರವಾಗುತ್ತಿದೆ. ಕೆರೆಗಳು, ಹಳ್ಳಗಳು ಒಣಗುತ್ತಿದ್ದು, ಅಂತರ್ಜಲ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ.…