ಬೆಂಗಳೂರು: ನಾನು ಯಾವುದೇ ಸ್ಥಾನ ಹುಡುಕಿಕೊಂಡು ಹೋಗಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ರಾಜ್ಯ ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆ ಮುಂದಿನ ಸಿಎಂ ವಿಚಾರ ಬಗ್ಗೆ ಚರ್ಚೆ ಮುನ್ನೆಲೆಗೆ ಬರುತ್ತಲೇ ಇದೆ. ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಪಟ್ಟ ನೀಡುವಂತೆ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಆಗ್ರಹಿಸುತ್ತಲೇ ಬಂದಿದ್ದಾರೆ. ಇದೀಗ ಬಿಜೆಪಿ ಎಂಎಲ್ಸಿ ಎಚ್.ವಿಶ್ವನಾಥ್ ಅವರೂ ಸಹ ಡಿಕೆಶಿ ಪರ ಬ್ಯಾಟ್ ಬೀಸಿದ್ದು, ಭಾರೀ ಸಂಚಲನ ಸೃಷ್ಟಿಯಾಗಿದೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗ ಅರ್ಜೆಂಟ್ ಯಾವುದೂ ಇಲ್ಲ. ಏನೇ ಇದ್ದರೂ ಸಹ ನಮ್ಮ ಪಕ್ಷ ತೀರ್ಮಾನಿಸುತ್ತದೆ. ನಾನು ಯಾವುದೇ ಸ್ಥಾನವನ್ನು ಹುಡುಕಿಕೊಂಡು ಹೋಗಲ್ಲ ನನಗೆ ಯಾವುದೇ ಸ್ಥಾನ ಹುಡುಕಿ ಹೋಗುವ ಅಗತ್ಯವಿಲ್ಲ. ಪಕ್ಷಕ್ಕೆ ಏನು ಮಾಡಬೇಕೋ ಅದನ್ನು ಮಾಡುತ್ತೇನೆ. ಮಿಕ್ಕಿದ್ದನ್ನೆಲ್ಲಾ ಪಕ್ಷವೇ ತೀರ್ಮಾನ ಮಾಡುತ್ತದೆ ಎಂದು ತಿಳಿಸಿದ್ದಾರೆ.
ಆದರೆ ಡಿ.ಕೆ.ಶಿವಕುಮಾರ್ ಅವರ ಅಭಿಮಾನಿಗಳು ಸಿಎಂ ಪಟ್ಟವನ್ನು ಡಿಕೆಶಿಗೆ ಬಿಟ್ಟುಕೊಡುವಂತೆ ದಿನದಿಂದ ದಿನಕ್ಕೆ ಆಗ್ರಹಿಸುತ್ತಲೇ ಇದ್ದು, ಇದು ಮುಂದಿನ ದಿನಗಳಲ್ಲಿ ಯಾವ ಮಟ್ಟಕ್ಕೆ ತಲುಪುತ್ತದೆ ಎಂಬುದನ್ನು ಕಾದುನೋಡಬೇಕಿದೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…