Mysore
20
broken clouds

Social Media

ಗುರುವಾರ, 27 ಆಗಸ್ಟ್ 2026
Light
Dark

ನಾಳೆ ಸಿಎಂ-ಡಿಸಿಎಂ ಉಪಹಾರ ಸಭೆ

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡುವೆ ನಡೆಯಲಿರುವ ಉಪಾಹಾರ (ಬ್ರೇಕ್ ಫಾಸ್ಟ್) ಸಭೆ ಕುತೂಹಲ ಕೆರಳಿಸಿದೆ.

ಗುರುವಾರ ಬೆಳಗ್ಗೆ 9 ಗಂಟೆಗೆ ಸಿಎಂ ಸಿದ್ದರಾಮಯ್ಯ ಅವರು ಡಿಸಿಎಂ ಡಿಕೆಶಿಗೆ ಉಪಹಾರ ಕೂಟ ಆತಿಥ್ಯ ವಹಿಸಲಿದ್ದಾರೆ. ಈ ಸಭೆ ಕೇವಲ ಸೌಜನ್ಯದ ಭೇಟಿಯೇ ಅಥವಾ ಮುಂದಿನ ರಾಜ್ಯ ರಾಜಕಾರಣದ ಬಗ್ಗೆ ಚರ್ಚೆಯೋ ಎಂಬ ಲೆಕ್ಕಾಚಾರಗಳು ರಾಜಕೀಯ ಪಡಸಾಲೆಯಲ್ಲಿ ಶುರುವಾಗಿವೆ. ಇದು ಸುಗಮ ನಾಯಕತ್ವ ಬದಲಾವಣೆಯ ಹೈಕಮಾಂಡ್ ಸೂತ್ರ ಎಂದು ವ್ಯಾಖ್ಯಾನಿಸಲಾಗುತ್ತಿದೆ.

ಮಂಗಳವಾರ ದಿಲ್ಲಿಯಲ್ಲಿ ಹೈಕಮಾಂಡ್ ಜೊತೆ ಸುದೀರ್ಘ ಸಭೆ ನಡೆಸಿದ ಬಳಿಕ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಜೋರಾಗಿಯೇ ಚರ್ಚೆಯಾಗುತ್ತಿದೆ. ಇನ್ನು ಎರಡು ದಿನಗಳಲ್ಲಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

 

Tags:
error: Content is protected !!