ರಾಜ್ಯ

ನಾಳೆ ದಿಲ್ಲಿಗೆ ಸಿಎಂ, ಡಿಸಿಎಂ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಾಳೆ(ಏ.16) ದೆಹಲಿ ಪ್ರವಾಸ ಕೈಗೊಳ್ಳಲಿದ್ದು, ಕಾಂಗ್ರೆಸ್‍ನಲ್ಲಿ ಚಟುವಟಿಕೆಗಳು ಮತ್ತಷ್ಟು ಗರಿಗೆದರಿವೆ.

ಸಚಿವ ಸಂಪುಟ ಪುನರ್ ರಚನೆ, ರಾಜ್ಯಸಭೆ, ವಿಧಾನಪರಿಷತ್ ಸ್ಥಾನಗಳಿಗೆ ಅಭ್ಯರ್ಥಿಗಳ ಆಯ್ಕೆ, ನಿಗಮ ಮಂಡಳಿಗಳ ನೇಮಕಾತಿ ಕುರಿತಂತೆ ಹೈಕಮಾಂಡ್ ನಾಯಕರ ಜೊತೆ ನಾಳೆಯ ಭೇಟಿಯ ವೇಳೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚರ್ಚೆ ನಡೆಸುವ ಸಾಧ್ಯತೆ ಇದೆ.

ಪೂರ್ವ ನಿಗದಿತ ಕಾರ್ಯಕ್ರಮಗಳ ಪ್ರಕಾರ ಸಿದ್ದರಾಮಯ್ಯ ಅವರು, ದೆಹಲಿಗೆ ಭೇಟಿ ನೀಡುವುದು ಬಹುತೇಕ ಖಚಿತವಾಗಿದೆ. ಡಿ.ಕೆ.ಶಿವಕುಮಾರ್ ಅವರ ಭೇಟಿ ಇನ್ನೂ ಖಚಿತವಾಗಿಲ್ಲ. ಆದರೆ  ಡಿಕೆಶಿ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ಹೇಳಿವೆ.

ಈಗಾಗಲೇ 20ಕ್ಕೂ ಹೆಚ್ಚು ಶಾಸಕರು ದೆಹಲಿಯಲ್ಲಿ ಬೀಡುಬಿಟ್ಟಿದ್ದು, ಹೈಕಮಾಂಡ್ ನಾಯಕರನ್ನು ಭೇಟಿ ಮಾಡುತ್ತಿದ್ದಾರೆ. ಈ ಮಧ್ಯೆ ಸಿಎಂ ಹಾಗೂ ಡಿಸಿಎಂ ದೆಹಲಿಗೆ ಭೇಟಿ ನೀಡುತ್ತಿರುವುದು ಭಾರೀ ಕುತೂಹಲಕ್ಕೆ ಮನೆಮಾಡಿದೆ.

ಆಂದೋಲನ ಡೆಸ್ಕ್

Recent Posts

ಮಹಿಳಾ ಮೀಸಲಾತಿ ಕಾನೂನು : ಶುಕ್ರವಾರ ಸಂಜೆ 4 ಗಂಟೆಗೆ ಮತದಾನ

ನವದೆಹಲಿ : ಮಹಿಳೆಯರಿಗೆ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಶೇ.33ರಷ್ಟು ಮೀಸಲಾತಿ ನೀಡುವ ʼನಾರಿ ಶಕ್ತಿ ವಂದನ್ ಅಧಿನಿಯಮʼ ಮಸೂದೆ…

11 mins ago

ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ : ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು : ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ. ಸಂಪುಟ ಪುನರ್‌ ರಚನೆ ಆಗಲಿ ಎಂದು ಸಚಿವ ದಿನೇಶ್‌ ಗುಂಡೂರಾವ್‌…

59 mins ago

ಶಾಸಕ ವಿನಯ್‌ ಕುಲಕರ್ಣಿ ಸೇರಿ 17 ಅಪರಾಧಿಗಳಿಗೆ ನಾಳೆ ಶಿಕ್ಷೆ ಪ್ರಮಾಣ ಪ್ರಕಟ: ಆದೇಶ ಕಾಯ್ದಿರಿಸಿದ ಕೋರ್ಟ್‌

ಬೆಂಗಳೂರು: ಧಾರವಾಡದ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದ ಅಪರಾಧಿಗಳಿಗೆ ವಿಶೇಷ ನ್ಯಾಯಾಲಯ ನಾಳೆ ಶಿಕ್ಷೆಯ…

2 hours ago

ಎಚ್.ಡಿ.ಕೋಟೆ| ಕಾಡಾನೆ ದಾಳಿ: ಮಹಿಳೆ ಸ್ಥಿತಿ ಗಂಭೀರ

ಮಂಜು ಕೋಟೆ: ಎಚ್.ಡಿ.ಕೋಟೆ ತಾಲ್ಲೂಕು ವರದಿಗಾರರು  ಎಚ್.ಡಿ.ಕೋಟೆ: ಜಮೀನಿಗೆ ಸೌದೆ ತರಲು ಹೋದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ…

2 hours ago

ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ಎಫ್‌ಐಆರ್‌ ದಾಖಲು

ಮಂಗಳೂರು: ಯಕ್ಷಗಾನ ಕಲಾವಿದರಿಗೆ ಬೆದರಿಕೆ ಹಾಕಿದ ಆರೋಪದಡಿ ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಠಾಣೆಯಲ್ಲಿ…

3 hours ago

ಬೆಂಗಳೂರಿನಲ್ಲಿ 11.86 ಕೋಟಿ ರೂ ಮೌಲ್ಯದ ಮಾದಕ ವಸ್ತು ಜಪ್ತಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೊಲೀಸರು 11.86 ಕೋಟಿ ರೂ ಮೌಲ್ಯದ ಮಾದಕವಸ್ತು ಜಪ್ತಿ ಮಾಡಿ ಇಬ್ಬರು ವಿದೇಶಿ ಮಹಿಳೆಯರು…

4 hours ago