ರಾಜ್ಯ

ಫಾಕ್ಸ್‌ಕಾನ್‌ ಸಂಸ್ಥೆ ಅಧ್ಯಕ್ಷರ ಜೊತೆ ಸಿಎಂ ಚರ್ಚೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ತೈವಾನ್‌ ಮೂಲದ ಆಪಲ್‌ ಫೋನ್‌ ಕಂಪೆನಿ ಫಾಕ್ಸ್‌ಕಾನ್‌ ಸಂಸ್ಥೆಯ ಚೇರ್‌ಮನ್‌ ಹಾಗೂ ಅಧ್ಯಕ್ಷ ಯಂಗ್‌ ಲಿಯು ಅವರೊಂದಿಗಿನ ಚರ್ಚೆ ನಡೆಸಿದರು.

ಶುಕ್ರವಾರ ನಗರಕ್ಕೆ ಬಂದಿಳಿದ ಅವರನ್ನು ರಾಜ್ಯ ಸರರ್ಕಾರದ ವತಿಯಿಂದ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.

ಬಳಿಕ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಿದ್ದ ಭೋಜನ ಕೂಟದ ವೇಳೆ ಫಾಕ್ಸ್‌ಕಾನ್‌ ಕಂಪೆನಿಗೆ ರಾಜ್ಯದಲ್ಲಿ ಕಾರ್ಯನಿರ್ವಹಿಸಲು ಅಗತ್ಯವಾದ ಎಲ್ಲ ರೀತಿಯ ಸಹಕಾರ ಹಾಗೂ ನೆರವು ಒದಗಿಸಲಾಗುವುದು ಎಂದು ಸಿಎಂ ಭರವಸೆ ನೀಡಿದರು.

ಸಾಂಸ್ಕೃತಿಕವಾಗಿ ಉನ್ನತ ಮೌಲ್ಯಗಳನ್ನು ಆಚರಿಸುತ್ತಿರುವ ರಾಜ್ಯದಲ್ಲಿ ಕೈಗಾರಿಕೆಗಳಿಗೆ ಅತ್ಯಗತ್ಯವಾದ ಕಾನೂನು ಮತ್ತು ಸುವ್ಯವಸ್ಥೆಯೂ ಉತ್ತಮವಾಗಿದೆ ಎಂದು ಸಿಎಂ ಮನವರಿಕೆ ಮಾಡಿಕೊಟ್ಟರು.

ರಾಜ್ಯದಲ್ಲಿ ಅನುಷ್ಠಾನಗೊಳ್ಳುತ್ತಿರುವ ತಮ್ಮ ಯೋಜನೆಯಿಂದ ಇಲ್ಲಿ ಉದ್ಯೋಗದ ಉತ್ತಮ ಅವಕಾಶಗಳು ಸೃಷ್ಟಿಯಾಗಲಿದೆ. ಇದು ಸ್ಥಳೀಯ ಆರ್ಥಿಕತೆಗೆ ಚೇತರಿಕೆ ನೀಡಲಿದೆ ಮಾತ್ರವಲ್ಲದೆ, ಸ್ಥಳೀಯ ಕೆಲಸಗಾರರನ್ನು ಇನ್ನಷ್ಟು ಸಬಲಗೊಳಿಸಿ, ಈ ವಲಯದ ಸಮಗ್ರ ಅಭಿವೃದ್ಧಿಗೆ ಕಾರಣವಾಗಲಿದೆ ಎಂದು ಹೇಳಲು ಸಂತಸವೆನಿಸುತ್ತದೆ. ಈ ನಿಟ್ಟಿನಲ್ಲಿ ಫಾಕ್ಸ್‌ಕಾನ್‌ಗೆ ಅಗತ್ಯವಾದ ಎಲ್ಲಾ ನೆರವು ಒದಗಿಸುವುದನ್ನು ನಾನು ಖಾತ್ರಿಪಡಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು.

ಈ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ , ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್, ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ಎಲ್.ಕೆ.ಅತೀಕ್, ಮಾಹಿತಿ ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಏಕ್ ರೂಪ್ ಕೌರ್ ಸೇರಿದಂತೆ ಕೈಗಾರಿಕೆ ಮತ್ತು ಐಟಿ ಬಿಟಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶಾಸಕ ಗಾಲಿ ಜನಾರ್ಧನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ

ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಸ್ಥಾನದಿಂದಲೇ ಅನರ್ಹಗೊಂಡು ನ್ಯಾಯಾಲಯದ ತಡೆಯಾಜ್ಞೆಯಿಂದ ಬಚಾವ್ ಆಗಿದ್ದ ಮಾಜಿ ಸಚಿವ ಹಾಗೂ ಶಾಸಕ…

50 mins ago

ಉನ್ನಾವೋ ಅತ್ಯಾಚಾರ ಕೇಸ್:‌ ಆರೋಪಿ ಕುಲದೀಪ್‌ ಸಿಂಗ್‌ ಸೆಂಗರ್‌ ಜಾಮೀನಿಗೆ ಸುಪ್ರೀಂಕೋರ್ಟ್‌ ತಡೆ

ನವದೆಹಲಿ: ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ ದೆಹಲಿ…

1 hour ago

ರಾಜ್ಯದಲ್ಲಿ ಡ್ರಗ್ಸ್‌ ದಂಧೆ: ಸರ್ಕಾರದ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ಮಹಾರಾಷ್ಟ್ರ ಪೊಲೀಸರಿಂದ ಬೆಂಗಳೂರಿನಲ್ಲಿ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್‌ ಸೀಜ್‌ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ…

1 hour ago

ರಾಜ್ಯದ ಶ್ರೀಮಂತ ದೇವಾಲಯಗಳ ಪಟ್ಟಿ ಬಿಡುಗಡೆ : ಯಾವುದು ನಂಬರ್‌ ಒನ್‌ ಗೊತ್ತಾ?

ಬೆಂಗಳೂರು: ರಾಜ್ಯ ಸರ್ಕಾರದ ಮುಜರಾಯಿ ಇಲಾಖೆಯು ಕರ್ನಾಟಕ ರಾಜ್ಯದ ಅತ್ಯಂತ ಶ್ರೀಮಂತ ದೇವಸ್ಥಾನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪ್ರಮುಖವಾಗಿ ಪ್ರಸಿದ್ಧ…

2 hours ago

ತಲಕಾಡಿನತ್ತ ಹರಿದುಬರುತ್ತಿರುವ ಪ್ರವಾಸಿಗರು: ಕಾವೇರಿ ನದಿಯಲ್ಲಿ ಮಿಂದೆದ್ದು ಸಂಭ್ರಮ

ಟಿ.ನರಸೀಪುರ: ಹೊಸ ವರ್ಷದ ಸಂಭ್ರಮಾಚರಣೆ ಆಚರಿಸಲು ಐತಿಹಾಸಿಕ ಪಂಚಲಿಂಗಗಳ ಪುಣ್ಯಕ್ಷೇತ್ರ ತಲಕಾಡಿಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಕಳೆದ ಮೂರು…

2 hours ago

ಕೇರಳ ಸಿಎಂ ಪಿಣರಾಯಿ ವಿಜಯನ್‌ ವಿರುದ್ಧ ಸಚಿವ ಎಚ್.ಸಿ.ಮಹದೇವಪ್ಪ ಕಿಡಿ

ಬೆಂಗಳೂರು: ಬೆಂಗಳೂರಿನಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಶೆಡ್‌ಗಳ ತೆರವು ಪ್ರಕರಣವನ್ನು ಖಂಡಿಸಿ ಟ್ವೀಟ್‌ ಮಾಡಿದ್ದ ಕೇರಳ ಸಿಎಂ ಪಿಣರಾಯಿ ವಿಜಯನ್‌ ವಿರುದ್ಧ…

2 hours ago