ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂತ್ರಿಗಳ ಮನೆ ಮನೆಗೆ ಓಡಾಡಿ ಆಂತರಿಕ ಬಿಕ್ಕಟ್ಟನ್ನು ಶಮನ ಮಾಡುವ ಪರಿಸ್ಥಿತಿ ಬಂದಿದೆ. ಅಧಿಕಾರಕ್ಕೆ ಬಂದು ಮೂರು ತಿಂಗಳಲ್ಲೇ ಜನರ ವಿಶ್ವಾಸವನ್ನು ಕಾಂಗ್ರೆಸ್ ಕಳೆದುಕೊಂಡಿದೆ ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಸ್ಯೆ ಬಗೆಹರಿಸಲು ನಿನ್ನೆ ಪರಮೇಶ್ವರ್ ಮನೆಗೆ ಸಿಎಂ ಹೋಗಿದ್ದಾರೆ. ಬೆಳಗಾವಿ ಜಿಲ್ಲೆಯ ಮಂತ್ರಿಗಳ ಭಿನ್ನಮತ ತಿಳಿಗೊಳಿಸಲು ಪ್ರಯತ್ನ ಮಾಡಿದ್ದಾರೆ. ಇದರಿಂದ ಪರಮೇಶ್ವರ್ ಅವರನ್ನು ಡಿಸಿಎಂ ಮಾಡುವ ಸಂಶಯ ಬರುತ್ತಿದೆ. ರಾಜ್ಯದಲ್ಲಿ ಇದುವರೆಗೂ ನಮ್ಮ ಸಮುದಾಯದವರು ಸಿಎಂ ಆಗಿಲ್ಲ. ಪರಮೇಶ್ವರ್ ಅವರಿಗೆ ಆ ರೀತಿಯ ಭರವಸೆ ಸಿದ್ದರಾಮಯ್ಯ ಕೊಟ್ಟಿದ್ದರೆ ಅದನ್ನು ನಾನು ಸ್ವಾಗತ ಮಾಡುತ್ತೇನೆ ಎಂದಿದ್ದಾರೆ.
ಕಾಂಗ್ರೆಸ್ನಲ್ಲಿ ಈಗ ಮೂರು ಗುಂಪುಗಳಾಗಿವೆ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಹಾಗೂ ಶಾಮನೂರು ಶಿವಶಂಕರಪ್ಪರ ಗುಂಪುಗಳಾಗಿವೆ. ಈ ರೀತಿ ರಾಜ್ಯದಲ್ಲಿ ಅಧಿಕಾರಕ್ಕಾಗಿ ಕಚ್ಚಾಟ ನಡೆಯುತ್ತಿದೆ. ರಾಜ್ಯ ಇವತ್ತು ಸಂಕಷ್ಟದ ಪರಿಸ್ಥಿತಿಗೆ ಬಂದು ಸಿಲುಕಿದೆ. ಸಿದ್ದರಾಮಯ್ಯನವರು ಸಿಎಂ ಆಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಅವರ ವಿರುದ್ಧ ಶಾಸಕರು ಅಸಮಾಧಾನಗೊಂಡಿದ್ದಾರೆ. ಇನ್ನೊಂದು ಕಡೆ ಹಳ್ಳಿ ಹಳ್ಳಿಗಳಲ್ಲಿ ಶಾಸಕರಿಗೆ ಜನರು ಪ್ರಶ್ನೆ ಮಾಡುತ್ತಿದ್ದಾರೆ. ಹೀಗಾಗಿ ಶಾಸಕರು ಬಂಡಾಯ ಎದ್ದಿದ್ದಾರೆ. ಇದರಿಂದ ಸರ್ಕಾರದ ಅಭದ್ರತೆ ಕಾಡುತ್ತಿದೆ. ಈ ವಿಚಾರದ ಮೇಲಿನ ಗಮನವನ್ನು ಬೇರೆಡೆಗೆ ತಿರುಗಿಸಲು ಹುಲಿ ಉಗುರಿನ ದೊಂಬರಾಟವನ್ನು ಸರ್ಕಾರ ಮಾಡುತ್ತಿದೆ ಎಂದಿದ್ದಾರೆ.
ಆಪರೇಷನ್ ಕಮಲದ ವಿಚಾರವಾಗಿ ಶಾಸಕ ರವಿ ಗಣಿಗ ಆರೋಪದ ಬಗ್ಗೆ, ಕಾಂಗ್ರೆಸ್ ಶಾಸಕರು ತಮ್ಮ ರೇಟ್ ಫಿಕ್ಸ್ ಮಾಡಿಕೊಂಡಿದ್ದಾರೆ. ಈ ಶಾಸಕರು ತಮ್ಮನ್ನು ತಾವೇ ಹರಾಜಿಗೆ ಇಟ್ಟುಕೊಂಡಿದ್ದಾರಾ? ಇಷ್ಟು ಲಜ್ಜೆಗೆಟ್ಟು ಯಾರು ನಡೆದುಕೊಳ್ಳಬಾರದು. ಯಾರು ಕೂಡ ಶಾಸಕರಿಗೆ ಆ ರೀತಿ ಮಾಡಿಲ್ಲ. ಅವರು ಅಧಿಕಾರದಲ್ಲಿದ್ದಾರೆ. ಅವರೇ ಅದರ ಬಗ್ಗೆ ತನಿಖೆ ಮಾಡಲಿ ಎಂದು ಹೇಳಿದ್ದಾರೆ.
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…
ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…