ರಾಜ್ಯ

ಸಿಎಂಗೆ ಮಂತ್ರಿಗಳ ಮನೆ ಮನೆಗೆ ಓಡಾಡುವ ಪರಿಸ್ಥಿತಿ ಬಂದಿದೆ : ಗೋವಿಂದ ಕಾರಜೋಳ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂತ್ರಿಗಳ ಮನೆ ಮನೆಗೆ ಓಡಾಡಿ ಆಂತರಿಕ ಬಿಕ್ಕಟ್ಟನ್ನು ಶಮನ ಮಾಡುವ ಪರಿಸ್ಥಿತಿ ಬಂದಿದೆ. ಅಧಿಕಾರಕ್ಕೆ ಬಂದು ಮೂರು ತಿಂಗಳಲ್ಲೇ ಜನರ ವಿಶ್ವಾಸವನ್ನು ಕಾಂಗ್ರೆಸ್ ಕಳೆದುಕೊಂಡಿದೆ ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಸ್ಯೆ ಬಗೆಹರಿಸಲು ನಿನ್ನೆ ಪರಮೇಶ್ವರ್ ಮನೆಗೆ ಸಿಎಂ ಹೋಗಿದ್ದಾರೆ. ಬೆಳಗಾವಿ ಜಿಲ್ಲೆಯ ಮಂತ್ರಿಗಳ ಭಿನ್ನಮತ ತಿಳಿಗೊಳಿಸಲು ಪ್ರಯತ್ನ ಮಾಡಿದ್ದಾರೆ. ಇದರಿಂದ ಪರಮೇಶ್ವರ್ ಅವರನ್ನು ಡಿಸಿಎಂ ಮಾಡುವ ಸಂಶಯ ಬರುತ್ತಿದೆ. ರಾಜ್ಯದಲ್ಲಿ ಇದುವರೆಗೂ ನಮ್ಮ ಸಮುದಾಯದವರು ಸಿಎಂ ಆಗಿಲ್ಲ. ಪರಮೇಶ್ವರ್ ಅವರಿಗೆ ಆ ರೀತಿಯ ಭರವಸೆ ಸಿದ್ದರಾಮಯ್ಯ ಕೊಟ್ಟಿದ್ದರೆ ಅದನ್ನು ನಾನು ಸ್ವಾಗತ ಮಾಡುತ್ತೇನೆ ಎಂದಿದ್ದಾರೆ.

ಕಾಂಗ್ರೆಸ್‍ನಲ್ಲಿ ಈಗ ಮೂರು ಗುಂಪುಗಳಾಗಿವೆ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಹಾಗೂ ಶಾಮನೂರು ಶಿವಶಂಕರಪ್ಪರ ಗುಂಪುಗಳಾಗಿವೆ. ಈ ರೀತಿ ರಾಜ್ಯದಲ್ಲಿ ಅಧಿಕಾರಕ್ಕಾಗಿ ಕಚ್ಚಾಟ ನಡೆಯುತ್ತಿದೆ. ರಾಜ್ಯ ಇವತ್ತು ಸಂಕಷ್ಟದ ಪರಿಸ್ಥಿತಿಗೆ ಬಂದು ಸಿಲುಕಿದೆ. ಸಿದ್ದರಾಮಯ್ಯನವರು ಸಿಎಂ ಆಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಅವರ ವಿರುದ್ಧ ಶಾಸಕರು ಅಸಮಾಧಾನಗೊಂಡಿದ್ದಾರೆ. ಇನ್ನೊಂದು ಕಡೆ ಹಳ್ಳಿ ಹಳ್ಳಿಗಳಲ್ಲಿ ಶಾಸಕರಿಗೆ ಜನರು ಪ್ರಶ್ನೆ ಮಾಡುತ್ತಿದ್ದಾರೆ. ಹೀಗಾಗಿ ಶಾಸಕರು ಬಂಡಾಯ ಎದ್ದಿದ್ದಾರೆ. ಇದರಿಂದ ಸರ್ಕಾರದ ಅಭದ್ರತೆ ಕಾಡುತ್ತಿದೆ. ಈ ವಿಚಾರದ ಮೇಲಿನ ಗಮನವನ್ನು ಬೇರೆಡೆಗೆ ತಿರುಗಿಸಲು ಹುಲಿ ಉಗುರಿನ ದೊಂಬರಾಟವನ್ನು ಸರ್ಕಾರ ಮಾಡುತ್ತಿದೆ ಎಂದಿದ್ದಾರೆ.

ಆಪರೇಷನ್ ಕಮಲದ ವಿಚಾರವಾಗಿ ಶಾಸಕ ರವಿ ಗಣಿಗ ಆರೋಪದ ಬಗ್ಗೆ, ಕಾಂಗ್ರೆಸ್ ಶಾಸಕರು ತಮ್ಮ ರೇಟ್ ಫಿಕ್ಸ್ ಮಾಡಿಕೊಂಡಿದ್ದಾರೆ. ಈ ಶಾಸಕರು ತಮ್ಮನ್ನು ತಾವೇ ಹರಾಜಿಗೆ ಇಟ್ಟುಕೊಂಡಿದ್ದಾರಾ? ಇಷ್ಟು ಲಜ್ಜೆಗೆಟ್ಟು ಯಾರು ನಡೆದುಕೊಳ್ಳಬಾರದು. ಯಾರು ಕೂಡ ಶಾಸಕರಿಗೆ ಆ ರೀತಿ ಮಾಡಿಲ್ಲ. ಅವರು ಅಧಿಕಾರದಲ್ಲಿದ್ದಾರೆ. ಅವರೇ ಅದರ ಬಗ್ಗೆ ತನಿಖೆ ಮಾಡಲಿ ಎಂದು ಹೇಳಿದ್ದಾರೆ.

 

lokesh

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

3 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

3 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

3 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

3 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

3 hours ago