ತುಮಕೂರು(ಪಾವಗಡ) : ತುಂಗಭದ್ರಾ ಜಲಾಶಯದ ಹಿನ್ನೀರಿನಿಂದ ಪಾವಗಡ ತಾಲ್ಲೂಕು ಮತ್ತು ಪಟ್ಟಣ ವ್ಯಾಪ್ತಿಯ ಶುದ್ಧ ಕುಡಿಯುವ ನೀರಿನ ಯೋಜನೆಯು ಸುಮಾರು 17.50 ಲಕ್ಷ ಜನರ ಆರೋಗ್ಯವನ್ನು ಕಾಪಾಡುವ ಉತ್ತಮ ಯೋಜನೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ತುಮಕೂರಿನ ಪಾವಗಡದಲ್ಲಿ ತುಂಗಭದ್ರಾ ಜಲಾಶಯದ ಹಿನ್ನರಿನಿಂದ ಪಾವಗಡ ತಾಲ್ಲೋಕು ಮತ್ತು ಪಟ್ಟಣ ವ್ಯಾಪ್ತಿಯ ಬಹುಗ್ರಾಮ ಕುಡಿಯುವ ನೀರಿನ ಸರಬರಾಜು ಯೋಜನೆ ಯ ಉದ್ಘಾಟನೆ ಮತ್ತು 2250 ಮೆಗಾವ್ಯಾಟ್ ಸೋಲಾರ್ ಪ್ಲಾಂಟ್ ನಿರ್ಮಾಣ ದ ಘೋಷಣೆ ಹಾಗೂ ಪಾವಗಡ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಿ ನಂತರ ಸರ್ಕಾರಿ ಇಲಾಖೆ ಗಳ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು.
ಫ್ಲೋರೈಡ್ ಯುಕ್ತ ನೀರಿನಿಂದ ಮುಕ್ತಿ
2018ರ ಜನರಿಯಲ್ಲಿ ಪಾವಗಡ ಮತ್ತಿತರ ಐದು ತಾಲ್ಲೂಕುಗಳಿಗೆ ಅನುಕೂಲ ಕಲ್ಪಿಸುವ ಕುಡಿಯುವ ನೀರಿನ ಯೋಜನೆಗೆ ಇಂದು ಚಾಲನೆ ನೀಡಲಾಗಿದೆ. ಇಲ್ಲಿನ ಜನರು ಫ್ಲೋರೈಡ್ ಯುಕ್ತ ನೀರನ್ನು ಕುಡಿಯುವ ಅನಿವಾರ್ಯತೆ ಇತ್ತು. ಇದರಿಂದ ಜನರಿಗೆ ಆರೋಗ್ಯದ ತೊಂದರೆಗಳಿಗೆ ಒಳಗಾಗುತ್ತಿದ್ದರು. ಈ ಸಮಸ್ಯೆಯಿಂದ ಜನರನ್ನು ಹೊರತೆಗೆಯಲು ,ಸುಮಾರು 200 ಕಿ.ಮೀ. ನಷ್ಟು ದೂರವಿರುವ ತುಂಗಭದ್ರಾ ಜಲಾಶಯದ ಹಿನ್ನೀರನ್ನು ಪಾವಗಡಕ್ಕೆ ತರುವ ಯೋಜನೆಗೆ ಚಾಲನೆ ನೀಡಲಾಗಿದೆ. ಹಿಂದಿನ ಅವಧಿಯಲ್ಲಿಯೂ ಕಾಂಗ್ರೆಸ್ ಸರ್ಕಾರವೇ ಅಧಿಕಾರದಲ್ಲಿದ್ದಿದ್ದರೇ, ಈ ಯೋಜನೆಯನ್ನು ಮೂರು ವರ್ಷಗಳ ಮುಂಚೆಯೇ ಪೂರ್ಣಗೊಳಿಸಬಹುದಾಗಿತ್ತು ಎಂದರು.
2050ರವರೆಗೆ ಈ ಯೋಜನೆಯ ಲಾಭವನ್ನು ಜನರು ಪಡೆಯಬಹುದಾಗಿದೆ. ಈ ಯೋಜನೆಯಿಂದ ಸುಮಾರು 17.50 ಲಕ್ಷ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಿದಂತಾಗುತ್ತದೆ. ಶುದ್ಧ ಕುಡಿಯುವ ನೀರಿನ ಯೋಜನೆಯಿಂದ ಜನರು ಅಂಗವೈಕಲ್ಯತೆಯಂತಹ ಗಂಭೀರ ಆರೋಗ್ಯ ಸಮಸ್ಯೆಗಳಿಂದ ಪಾರಾಗಿದ್ದಾರೆ ಎಂದರು.
ಪಾವಗಡ ತಾಲ್ಲೂಕಿನ 270 ಹಳ್ಳಿಗಳಿಗೆ ಮತ್ತು ಪಾವಗಡ ಪಟ್ಟಣಕ್ಕೆ ಈ ಯೋಜನೆಯಿಂದ ಶುದ್ಧ ಕುಡಿಯುವ ನೀರನ್ನು ಪೂರೈಸಲಾಗುತ್ತದೆ. ಈ ಯೋಜನೆಗೆ ಹಗಲಿರುಳು ದುಡಿದ ಸಚಿವರು ಹಾಗೂ ಶಾಸಕರ ಪ್ರಯತ್ನಗಳು ಇಂದು ಫಲಿಸಿದೆ. ಈ ಯೋಜನೆಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ನೆರವೇರಿಸುವ ಸುಯೋಗ ನನಗೆ ದೊರೆತಿರುವುದು ಸಂತೋಷ ತಂದಿದೆ ಎಂದರು.
ಏಷ್ಯಾದಲ್ಲಿ ನಂ.1 ವಿದ್ಯುತ್ ಉತ್ಪಾದನೆ ಘಟಕ
ಪಾವಗಡದಲ್ಲಿ ವಿದ್ಯುತ್ ಉತ್ಪಾದನೆ ಪ್ಲಾಂಟ್ ಏಷ್ಯಾದಲ್ಲೇ ನಂ.1 ಆಗಿದೆ.ಈಗಾಗಲೇ 2050 ಮೆ.ವ್ಯಾ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದ್ದು , ಮುಂದಿನ ಎರಡು ತಿಂಗಳಲ್ಲಿ 2400 ಮೆ.ವ್ಯಾಟ್ ವಿದ್ಯುತ್ ಉತ್ಪಾದನೆಯಾಗಲಿದ್ದು, ಇದರಿಂದ ಪಾವಗಡದ ಚಿತ್ರಣವೇ ಬದಲಾಗಲಿದೆ ಎಂದರು.ನಂಜುಂಡಪ್ಪ ವರದಿಯಲ್ಲಿ ಪಾವಗಡವನ್ನು ಅತ್ಯಂತ ಹಿಂದುಳಿದ ತಾಲ್ಲೂಕು ಎಂದು ಗುರುತಿಸಲ್ಪಟ್ಟಿತ್ತು.ಈಗ ತುಮಕೂರಿನ ತಾಲ್ಲೂಕಿನ ಪಟ್ಟಿಯಲ್ಲಿ ಪಾವಗಡ ಮೊದಲನೇ ಸ್ಥಾನದಲ್ಲಿದ್ದು, ಈ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರವೇ ಕಾರಣ.ಈ ಭಾಗಕ್ಕೆ ಸೇರಿದ ಕಾಂಗ್ರೆಸ್ ನ ಸಚಿವರು ಹಾಗೂ ಶಾಸಕರಿಗೆ ಜನರು ಸದಾ ಆಶೀರ್ವಾದ ಮಾಡಬೇಕು ಎಂದರು.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…