ರಾಜ್ಯ

ಶುದ್ಧ ಕುಡಿಯುವ ನೀರಿನ ಯೋಜನೆ ಉದ್ಘಾಟಿಸಿದ ಸಿಎಂ

ತುಮಕೂರು(ಪಾವಗಡ) : ತುಂಗಭದ್ರಾ ಜಲಾಶಯದ ಹಿನ್ನೀರಿನಿಂದ ಪಾವಗಡ ತಾಲ್ಲೂಕು  ಮತ್ತು ಪಟ್ಟಣ ವ್ಯಾಪ್ತಿಯ ಶುದ್ಧ ಕುಡಿಯುವ ನೀರಿನ ಯೋಜನೆಯು ಸುಮಾರು 17.50 ಲಕ್ಷ ಜನರ ಆರೋಗ್ಯವನ್ನು ಕಾಪಾಡುವ ಉತ್ತಮ ಯೋಜನೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ತುಮಕೂರಿನ ಪಾವಗಡದಲ್ಲಿ ತುಂಗಭದ್ರಾ ಜಲಾಶಯದ ಹಿನ್ನರಿನಿಂದ ಪಾವಗಡ ತಾಲ್ಲೋಕು ಮತ್ತು ಪಟ್ಟಣ ವ್ಯಾಪ್ತಿಯ ಬಹುಗ್ರಾಮ ಕುಡಿಯುವ ನೀರಿನ ಸರಬರಾಜು ಯೋಜನೆ ಯ ಉದ್ಘಾಟನೆ ಮತ್ತು 2250 ಮೆಗಾವ್ಯಾಟ್ ಸೋಲಾರ್ ಪ್ಲಾಂಟ್ ನಿರ್ಮಾಣ ದ ಘೋಷಣೆ ಹಾಗೂ ಪಾವಗಡ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಿ ನಂತರ ಸರ್ಕಾರಿ ಇಲಾಖೆ ಗಳ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು.

ಫ್ಲೋರೈಡ್ ಯುಕ್ತ ನೀರಿನಿಂದ ಮುಕ್ತಿ
2018ರ ಜನರಿಯಲ್ಲಿ ಪಾವಗಡ ಮತ್ತಿತರ ಐದು ತಾಲ್ಲೂಕುಗಳಿಗೆ ಅನುಕೂಲ ಕಲ್ಪಿಸುವ ಕುಡಿಯುವ ನೀರಿನ ಯೋಜನೆಗೆ ಇಂದು ಚಾಲನೆ ನೀಡಲಾಗಿದೆ. ಇಲ್ಲಿನ ಜನರು ಫ್ಲೋರೈಡ್ ಯುಕ್ತ ನೀರನ್ನು ಕುಡಿಯುವ ಅನಿವಾರ್ಯತೆ ಇತ್ತು. ಇದರಿಂದ ಜನರಿಗೆ ಆರೋಗ್ಯದ ತೊಂದರೆಗಳಿಗೆ ಒಳಗಾಗುತ್ತಿದ್ದರು. ಈ ಸಮಸ್ಯೆಯಿಂದ ಜನರನ್ನು ಹೊರತೆಗೆಯಲು ,ಸುಮಾರು 200 ಕಿ.ಮೀ. ನಷ್ಟು ದೂರವಿರುವ ತುಂಗಭದ್ರಾ ಜಲಾಶಯದ ಹಿನ್ನೀರನ್ನು ಪಾವಗಡಕ್ಕೆ ತರುವ ಯೋಜನೆಗೆ ಚಾಲನೆ ನೀಡಲಾಗಿದೆ. ಹಿಂದಿನ ಅವಧಿಯಲ್ಲಿಯೂ ಕಾಂಗ್ರೆಸ್ ಸರ್ಕಾರವೇ ಅಧಿಕಾರದಲ್ಲಿದ್ದಿದ್ದರೇ, ಈ ಯೋಜನೆಯನ್ನು ಮೂರು ವರ್ಷಗಳ ಮುಂಚೆಯೇ ಪೂರ್ಣಗೊಳಿಸಬಹುದಾಗಿತ್ತು ಎಂದರು.

2050ರವರೆಗೆ ಈ ಯೋಜನೆಯ ಲಾಭವನ್ನು ಜನರು ಪಡೆಯಬಹುದಾಗಿದೆ.  ಈ ಯೋಜನೆಯಿಂದ ಸುಮಾರು 17.50 ಲಕ್ಷ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಿದಂತಾಗುತ್ತದೆ. ಶುದ್ಧ ಕುಡಿಯುವ ನೀರಿನ ಯೋಜನೆಯಿಂದ ಜನರು ಅಂಗವೈಕಲ್ಯತೆಯಂತಹ ಗಂಭೀರ ಆರೋಗ್ಯ ಸಮಸ್ಯೆಗಳಿಂದ ಪಾರಾಗಿದ್ದಾರೆ ಎಂದರು.

ಪಾವಗಡ ತಾಲ್ಲೂಕಿನ 270 ಹಳ್ಳಿಗಳಿಗೆ ಮತ್ತು ಪಾವಗಡ ಪಟ್ಟಣಕ್ಕೆ ಈ ಯೋಜನೆಯಿಂದ ಶುದ್ಧ ಕುಡಿಯುವ ನೀರನ್ನು ಪೂರೈಸಲಾಗುತ್ತದೆ. ಈ ಯೋಜನೆಗೆ ಹಗಲಿರುಳು ದುಡಿದ ಸಚಿವರು ಹಾಗೂ ಶಾಸಕರ ಪ್ರಯತ್ನಗಳು ಇಂದು ಫಲಿಸಿದೆ. ಈ ಯೋಜನೆಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ನೆರವೇರಿಸುವ ಸುಯೋಗ ನನಗೆ ದೊರೆತಿರುವುದು ಸಂತೋಷ ತಂದಿದೆ ಎಂದರು.

ಏಷ್ಯಾದಲ್ಲಿ ನಂ.1 ವಿದ್ಯುತ್ ಉತ್ಪಾದನೆ ಘಟಕ
ಪಾವಗಡದಲ್ಲಿ ವಿದ್ಯುತ್ ಉತ್ಪಾದನೆ ಪ್ಲಾಂಟ್ ಏಷ್ಯಾದಲ್ಲೇ ನಂ.1 ಆಗಿದೆ.ಈಗಾಗಲೇ 2050 ಮೆ.ವ್ಯಾ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದ್ದು , ಮುಂದಿನ ಎರಡು ತಿಂಗಳಲ್ಲಿ 2400 ಮೆ.ವ್ಯಾಟ್ ವಿದ್ಯುತ್ ಉತ್ಪಾದನೆಯಾಗಲಿದ್ದು, ಇದರಿಂದ ಪಾವಗಡದ ಚಿತ್ರಣವೇ ಬದಲಾಗಲಿದೆ ಎಂದರು.ನಂಜುಂಡಪ್ಪ ವರದಿಯಲ್ಲಿ ಪಾವಗಡವನ್ನು ಅತ್ಯಂತ ಹಿಂದುಳಿದ ತಾಲ್ಲೂಕು ಎಂದು ಗುರುತಿಸಲ್ಪಟ್ಟಿತ್ತು.ಈಗ ತುಮಕೂರಿನ ತಾಲ್ಲೂಕಿನ ಪಟ್ಟಿಯಲ್ಲಿ ಪಾವಗಡ ಮೊದಲನೇ ಸ್ಥಾನದಲ್ಲಿದ್ದು, ಈ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರವೇ ಕಾರಣ.ಈ ಭಾಗಕ್ಕೆ ಸೇರಿದ ಕಾಂಗ್ರೆಸ್ ನ ಸಚಿವರು ಹಾಗೂ ಶಾಸಕರಿಗೆ ಜನರು ಸದಾ ಆಶೀರ್ವಾದ ಮಾಡಬೇಕು ಎಂದರು.

ಆಂದೋಲನ ಡೆಸ್ಕ್

Recent Posts

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

2 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

6 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

7 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

8 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

8 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

8 hours ago