ರಾಜ್ಯ

34,863 ಖಾಲಿ ಹುದ್ದೆಗಳನ್ನು ಕಾಲ ಮಿತಿಯಲ್ಲಿ ತುಂಬಲು ಸಿಎಂ ಸೂಚನೆ

ನೇಮಕಾತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆಗೆ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ನೇಮಕಾತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ತಂದು ಯುಪಿಎಸ್ಸಿ ಮಾದರಿಯಲ್ಲಿ ಏಕರೀತಿಯ ನೇಮಕಾತಿ ವ್ಯವಸ್ಥೆಯನ್ನು ಜಾರಿಗೊಳಿಸುವ ಕುರಿತು ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ಅವರು ಇಂದು ಕೃಷ್ಣಾದಲ್ಲಿ ಸರ್ಕಾರದ ಹಂತದಲ್ಲಿ ವಿವಿಧ ಇಲಾಖೆಗಳ ನೇಮಕಾತಿಗಳ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿದರು.

ನೇಮಕಾತಿ ಪ್ರಕ್ರಿಯೆಯಲ್ಲಿ ಸುಧಾರಣೆ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರ ಅಧ್ಯಕ್ಷತೆಯಲ್ಲಿ ಕಳೆದ ವಾರ ಎಲ್ಲಾ ನೇಮಕಾತಿ ಪ್ರಾಧಿಕಾರಗಳ ಸಭೆಯನ್ನು ನಡೆಸಲಾಗಿದೆ. ಸಭೆಯಲ್ಲಿ ಕೈಗೊಂಡಿರುವ ಶಿಫಾರಸುಗಳನ್ನು ಪರಿಶೀಲಿಸಿ ಸುಧಾರಣಾ ಕ್ರಮಗಳನ್ನು ಜಾರಿಗೊಳಿಸಲು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.

ಯುಪಿಎಸ್ಸಿಯಲ್ಲಿ ಕೇವಲ ಗ್ರೂಪ್‌ ಎ ಮತ್ತು ಗ್ರೂಪ್‌ ಬಿ ಹುದ್ದೆಗಳನ್ನು ಮಾಡಲು ನೇಮಕಾತಿ ಮಾಡಲಾಗುತ್ತಿದೆ. ಇದೇ ರೀತಿ ಕೆಪಿಎಸ್‌ಸಿ ಕೇವಲ ಗ್ರೂಪ್‌ ಎ ಮತ್ತು ಬಿ ಮಾತ್ರ ನೇಮಕಾತಿ ಪ್ರಕ್ರಿಯೆ ನಡೆಸಿ, ಗ್ರೂಪ್‌ ಸಿಯಂತಹ ಬೇರೆ ನೇಮಕಾತಿಗಳನ್ನು ಕೆಇಎ ಮಾಡುವ ಕುರಿತು ಚರ್ಚೆ ನಡೆಸಲಾಗಿದೆ.

371ಜೆ ಗೆ ಸಂಬಂಧಿಸಿದಂತೆ ಕಲ್ಯಾಣ ಕರ್ನಾಟಕದ ಸ್ಥಳೀಯ ವ್ಯಕ್ತಿಗಳಿಗೆ ಮೀಸಲಿರಿಸಿರುವ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು 2023ರಲ್ಲಿ ಹೊರಡಿಸಿರುವ ಸುತ್ತೋಲೆಯನ್ನು ಅನುಸರಿಸುವ ಕುರಿತು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.

ಖಾಲಿ ಹುದ್ದೆ ನೇಮಕಾತಿಗೆ ಕಾಲಮಿತಿ

ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 34863 ಹುದ್ದೆಗಳನ್ನು ತುಂಬಲು ಕಾಲ ಮಿತಿಯನ್ನು ನಿಗದಿಪಡಿಸಿಕೊಂಡು ನೇಮಕಾತಿ ಪ್ರಕ್ರಿಯೆ ನಡೆಸಬೇಕು. ಅಗತ್ಯ ಸೇವೆಗಳ ಇಲಾಖೆಗಳಲ್ಲಿ ನೇಮಕಾತಿಗೆ ಆದ್ಯತೆ ನೀಡುವಂತೆ ಮುಖ್ಯಮಂತ್ರಿ ಅವರು ಸೂಚಿಸಿದರು.

ನೇಮಕಾತಿ ಕ್ಯಾಲೆಂಡರ್:

ನೇಮಕಾತಿ ಕುರಿತಾಗಿ ವಾರ್ಷಿಕ ಕ್ಯಾಲೆಂಡರ್‌ ಸಿದ್ಧಪಡಿಸಲು ಇರುವ ತೊಡಕುಗಳನ್ನು ನಿವಾರಿಸಬೇಕು. ಆರ್ಥಿಕ ವರ್ಷದ ಆರಂಭದಲ್ಲಿ ಆಯಾ ಇಲಾಖೆಗಳು ನೇಮಕಾತಿಗೆ ಖಾಲಿಯಿರುವ ಹುದ್ದೆಗಳ ಕುರಿತು ಹಣಕಾಸು ಇಲಾಖೆಗೆ ಪ್ರಸ್ತಾವನೆ ಕಳುಹಿಸಬೇಕು. ಕಾಲಮಿತಿಯೊಳಗಾಗಿ ಹಣಕಾಸು ಇಲಾಖೆಯಿಂದ ಅನುಮೋದನೆ ಪಡೆದುಕೊಂಡು ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸುವ ಕುರಿತಾಗಿ ಏಕರೀತಿಯ ಕ್ಯಾಲೆಂಡರ್‌ ಸಿದ್ಧಪಡಿಸಬೇಕು ಎಂದು ಹೇಳಿದರು.

ಕೇರಳ ಮಾದರಿಯಲ್ಲಿ ನೇಮಕಾತಿ ಪ್ರಕ್ರಿಯೆ ನಡೆಸುವ ಕುರಿತು ಅಲ್ಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.

ಪಿಎಸ್‌ಐ ನೇಮಕಾತಿಯಲ್ಲಿ ದೈಹಿಕ ಪರೀಕ್ಷೆಯನ್ನು ಮೊದಲು ನಡೆಸಲಾಗುತ್ತಿದ್ದು, ಅಬಕಾರಿ ಇಲಾಖೆ ನೇಮಕಾತಿಯಲ್ಲಿ ಲಿಖಿತ ಪರೀಕ್ಷೆಯನ್ನು ಮೊದಲು ಮಾಡಲಾಗುತ್ತದೆ. ಅಬಕಾರಿ ಇಲಾಖೆ ಮಾದರಿಯನ್ನು ಪಿಎಸ್‌ಐ ನೇಮಕಾತಿಯಲ್ಲೂ ಅನುಸರಿಸುವ ಕುರಿತು ಪರಿಶೀಲನೆ ನಡೆಸಲು ಸೂಚನೆ ನೀಡಿದರು.

ರಾಜ್ಯದಲ್ಲಿ 41 ಇಲಾಖೆಗಳ ವೃಂದ ಮತ್ತು ನೇಮಕಾತಿ ನಿಯಮ ತಿದ್ದುಪಡಿಯಾಗದ ಕಾರಣ ನೇಮಕಾತಿ ವಿಳಂಬವಾಗುತ್ತಿದೆ. ಕೆಲವು ಇಲಾಖೆಗಳಲ್ಲಿ ಹಲವು ದಶಕಗಳಿಂದ ಸಿ ಅಂಡ್‌ ಆರ್‌ ತಿದ್ದುಪಡಿಯಾಗಲಿಲ್ಲ. ಈ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳಿಗೆ ಅನುಕೂಲವಾಗುವಂತೆ ಮಾದರಿ ಸಿ ಅಂಡ್‌ ಆರ್‌ ಸಿದ್ಧಪಡಿಸಲು ಸೂಚನೆ ನೀಡಿದರು.

ಸಚಿವರಾದ‌ ಜಿ.ಪರಮೇಶ್ವರ, ಹೆಚ್.ಕೆ.ಪಾಟೀಲ್‌, ಪ್ರಿಯಾಂಕ ಖರ್ಗೆ, ದಿನೇಶ ಗುಂಡೂರಾವ್‌, ಡಾ.ಶರಣ ಪ್ರಕಾಶ ಪಾಟೀಲ್‌, ಮಧು ಬಂಗಾರಪ್ಪ, ಭೈರತಿ ಸುರೇಶ್, ಡಾ.ಎಂ.ಸಿ. ಸುಧಾಕರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹ್ಮದ್‌, ಕಾನೂನು ಸಲಹೆಗಾರ ಎ.ಎಸ್.‌ ಪೊನ್ನಣ್ಣ, ಅಡ್ವೊಕೇಟ್‌ ಜನರಲ್‌ ಶಶಿಕಿರಣ್‌ ಶೆಟ್ಟಿ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…

4 hours ago

ಮೈಸೂರಲ್ಲಿ ಡ್ರಗ್ಸ್‌ ಉತ್ಪಾದನೆ ಶಂಕೆ : ಓರ್ವನ ಬಂಧನ

ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…

4 hours ago

ತೇಗದ ಮರ ಅಕ್ರಮ ಕಟಾವು : ಓರ್ವ ಬಂಧನ

ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…

4 hours ago

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

6 hours ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

6 hours ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

6 hours ago