ರಾಜ್ಯ

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಶಂಕು ಸ್ಥಾಪನೆ ನೆರವೇರಿಸಿದ ಸಿಎಂ

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ  ಕಳೆದ ಬಜೆಟ್ ನಲ್ಲಿ ಘೋಷಿಸಿದ್ದಂತೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಇಂದು ಶಂಕು ಸ್ಥಾಪನೆ ನೆರವೇರಿಸಿ ಮತ್ತೊಮ್ಮೆ ನುಡಿದಂತೆ ನಡೆದ ಮುಖ್ಯಮಂತ್ರಿ ಎನ್ನುವ ಹೆಗ್ಗಳಿಕೆಯನ್ನು ಮುಂದುವರೆಸಿದ್ದಾರೆ.

ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಮಾತನಾಡಿದ ಮುಖ್ಯಮಂತ್ರಿಗಳು, ರಾಜೀವ್ ಗಾಂಧಿ ವಿವಿ, ಏಷ್ಯಾದ ಅತ್ಯಂತ ದೊಡ್ಡ ಆರೋಗ್ಯ ವಿಶ್ವ ವಿದ್ಯಾಲಯ ಆಗಿದೆ. 3.5 ಲಕ್ಷ ವೈದ್ಯ ವಿದ್ಯಾರ್ಥಿಗಳಿರುವ ಅತ್ಯಂತ ದೊಡ್ಡ ಆರೋಗ್ಯ ವಿವಿ ಇದಾಗಿದೆ. ಆದ್ದರಿಂದ ಗುಣಮಟ್ಟದ ವೈದ್ಯರನ್ನು ರೂಪಿಸುವುದರ ಜೊತೆಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವಲ್ಲಿ ರಾಜೀವ್ ಗಾಂಧಿ ವಿವಿಯ ಕೊಡುಗೆ ಅಪಾರವಾಗಿದೆ ಎಂದರು.

ಸರ್ಕಾರಿ ಆಸ್ಪತ್ರೆಗಳೂ ಖಾಸಗಿ ಆಸ್ಪತ್ರೆಗಳ ಮಾದರಿಯಲ್ಲಿ ಶುಚಿತ್ವ ಮತ್ತು ನಿರ್ವಹಣೆ ಕಾಪಾಡುವ ಜೊತೆಗೆ ಗುಣಮಟ್ಟದ ಚಿಕಿತ್ಸಾ ಸೌಲಭ್ಯ ಸಿಗುವಂತಾಗಬೇಕು. ಶ್ರೀಮಂತರು ಮತ್ತು ನಮ್ಮಂಥಾ ರಾಜಕಾರಣಿಗಳೂ ಸರ್ಕಾರಿ ಆಸ್ಪತ್ರೆಗೆ ಬರುವಂಥಾಗಬೇಕು ಎನ್ನುವ ದಿಕ್ಕಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದೇವೆ ಎಂದರು.

ಜಿಲ್ಲೆಗೊಂದು ಸರ್ಕಾರಿ ವೈದ್ಯಕೀಯ ಕಾಲೇಜು ಇರಬೇಕು ಎನ್ನುವುದು ನನ್ನ ಗುರಿ. ಮಂಗಳೂರಿನಲ್ಲಿ ಉತ್ತಮ ಆರೋಗ್ಯ ಸೇವೆ ಇದ್ದರೂ ಈ ಜಿಲ್ಲೆಗೂ ಸರ್ಕಾರಿ ವೈದ್ಯಕೀಯ ಕಾಲೇಜಿನ ಅಗತ್ಯ ಇದೆ‌. ಈ ದಿಕ್ಕಿನಲ್ಲೂ ಸರ್ಕಾರ ಯೋಚಿಸಿ ಕ್ರಮ ಕೈಗೊಳ್ಳಲಿದೆ.

ರಾಜೀವ್ ಗಾಂಧಿ ಆರೋಗ್ಯ ವಿವಿ ಆರೋಗ್ಯ ಸೇವೆ ಸರಳವಾಗಿ ಜನರಿಗೆ ಸಿಗುವ ದಿಕ್ಕಿನಲ್ಲಿ ಸಂಶೋಧನೆಗಳನ್ನು ಹೆಚ್ಚೆಚ್ಚು ನಡೆಸಬೇಕು. ದೇಶದ ಅತ್ಯುತ್ತಮ ಆರೋಗ್ಯ ಸೇವೆ ಬಡವರಿಗೂ ಸುಲಭವಾಗಿ ಸಿಗುವಂತೆ ಮಾಡಬೇಕು ಎಂದು ಕರೆ ನೀಡಿದರು.

ಈ ಕ್ಷೇತ್ರದ ಡಿಪ್ಲಮೋ ಮತ್ತು ಇತರೆ ಕೋರ್ಸ್ ಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ ನೀಡಲಾಗುತ್ತಿದೆ. ವೈದ್ಯ ವಿಜ್ಞಾನ ಪದವೀಧರರೂ ಯುವ ನಿಧಿಗೆ ಅರ್ಹತೆ ಗಳಿಸಿದ್ದಾರೆ. ವೈದ್ಯ ವಿದ್ಯಾರ್ಥಿಗಳು ಇತರೆ ಕ್ಷೇತ್ರಗಳಿಗೆ ವಲಸೆ ಹೋಗದೆ ಆರೋಗ್ಯ ಕ್ಷೇತ್ರದಲ್ಲೇ ತಮ್ಮ ಸೇವೆ ಸಲ್ಲಿಸಬೇಕು ಎಂದು ಕರೆ ನೀಡಿದರು.

BPL ಇದ್ದವರಿಗೆ ಉಚಿತ ಸೇವೆ

BPL ಕಾರ್ಡ್ ಇದ್ದವರಿಗೆ ಎಲ್ಲಾ ರೀತಿಯ ಆರೋಗ್ಯ ಸೇವೆಯನ್ನು ಉಚಿತ ವಾಗಿ ನೀಡಿ ಎನ್ನುವ ಸೂಚನೆಯನ್ನು ವೈದ್ಯಕೀಯ ಕಾಲೇಜುಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಬಡವರಿಗೂ ಕೂಡ ದೊಡ್ಡ ದೊಡ್ಡ ಕಾಯಿಲೆಗಳು ಬರುತ್ತಿವೆ. ಕಿಡ್ನಿ ಕಸಿಗೆ 5000 ಮಂದಿ ಸಾಲಿನಲ್ಲಿದ್ದಾರೆ. ಕಿಡ್ನಿ ದಾನಿಗಳು ಸಿಕ್ಕರೆ ನಿತ್ಯ ಕಿಡ್ನಿ ಕಸಿ ಮಾಡುವ ನುರಿತ ವೈದ್ಯರ ತಂಡ ನಮ್ಮಲ್ಲಿದೆ ಎಂದರು.

ಇಂದು ನಾನು ಶಂಕುಸ್ಥಾಪನೆ ನೆರವೇರಿಸಿರುವ ಪ್ರಾದೇಶಿಕ ಕಚೇರಿಯ ನಿರ್ಮಾಣ ಮತ್ತು ಕಾರ್ಯಕ್ಷಮತೆ ಎರಡೂ ಗುಣಮಟ್ಟದಲ್ಲಿ ಕೂಡಲಿ ಎಂದು ಸೂಚಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

3 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

8 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

8 hours ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

8 hours ago

ಬಾಗಿಲುಗಳನ್ನು ತೆರೆದಿಡಿ, ಸಂವಹನವನ್ನು ಪಾರದರ್ಶಕವಾಗಿಡಿ

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ  ಯಾವುದೇ ನಾಗರಿಕನು ತನ್ನ…

8 hours ago

ಗಾಲಿಕುರ್ಚಿಯಲ್ಲಿ ಕುಳಿತೇ ಯಶಸ್ವೀ ಲೇಖಕಿಯಾದ ಹಿಮಾಂಶಿಕಾ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…

8 hours ago