ರಾಜ್ಯ

ವಿದ್ಯಾವಂತರಲ್ಲಿ ಹೆಚ್ಚುತ್ತಿರುವ ಮೌಢ್ಯತೆ, ಕಂದಾಚಾರ : ಸಿಎಂ ವಿಷಾದ

ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು ವಿಷಾದನೀಯ ಸಂಗತಿ. ವೈಚಾರಿಕತೆ ಹಾಗೂ ವೈಜ್ಞಾನಿಕ ವಿದ್ಯೆ ಪ್ರತಿಯೊಬ್ಬರಿಗೂ ಸಿಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಮಳವಳ್ಳಿಯಲ್ಲಿ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ 1066ನೇಯ ಜಯಂತಿ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಳವಳ್ಳಿಯಲ್ಲಿ ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ 1066 ಜಯಂತಿ ಮಹೋತ್ಸವ ಕಾರ್ಯಕ್ರಮವನ್ನು ರಾಷ್ಟ್ರ ಪತಿಗಳು ಉದ್ಘಾಟನೆ ನೆರವೇರಿಸಿದ್ದಾರೆ. ಈ ಜಯಂತಿ ಮಹೋತ್ಸವ ಎಲ್ಲಾ ತಾಲ್ಲೂಕುಗಳಲ್ಲಿ ನಡೆಯುತ್ತಿದ್ದು ಬಹಳ ದಿರ್ಘಕಾಲದಿಂದಲೂ ನಡೆಯುತ್ತಾ ಬಂದಿದೆ. ಮುಂದಿನ ವರ್ಷ ಗುಂಡ್ಲುಪೇಟೆಯಲ್ಲಿ ನಡೆಯುವ ಬಗ್ಗೆ ತಿರ್ಮಾನ ಮಾಡಲಾಗಿದ್ದು ಎಲ್ಲಾ ಕಾರ್ಯಕ್ರಮಗಳು ಅದ್ಧೂರಿಯಾಗಿ ಈ ಕಾರ್ಯಕ್ರಮ ಆಚರಣೆ ಮಾಡುತ್ತಾ ಬಂದಿದ್ದಾರೆ ಎಂದು ತಿಳಿಸಿದರು. ‌

ನಮ್ಮ ಸಮಾಜದಲ್ಲಿ ಅನೇಕ ಜಾತಿಗಳು ಇರುವುದರಿಂದ ಸಮಾಜದಲ್ಲಿ ಅಸಮಾನತೆ ಇದೆ. ಜಾತಿ ವ್ಯವಸ್ಥೆಯಿಂದ ಶಾಂತಿ ಮೂಡಿಬರುವುದಿಲ್ಲ. ಈ ವಿಷಯವನ್ನು ಈ ಹಿಂದೆ ದಾರ್ಶನಿಕರು, ಬಸವವಾದಿ ಶರಣರು ಹೇಳುತ್ತಾ ಬಂದಿದ್ದಾರೆ. ಕುವೆಂಪು ಅವರು ಮನುಷ್ಯ ಸಮಾಜ ನಿರ್ಮಾಣ ಆಗಬೇಕು ಎಂದು ಹೇಳಿದ್ದರು. ಸಮಾಜದಲ್ಲಿ ಜನರ ನಡುವೆ ಪ್ರೀತಿ ಇರಬೇಕು. ಇದೇ ನಮ್ಮ ಸಂಸ್ಕೃತಿ ಆಗಿದೆ. ಅನೇಕ ಸಾಧು ಮುನಿಗಳು, ಖುಷಿಗಳು ಮನುಷ್ಯ ಮನುಷ್ಯ ನಡುವೆ ಪ್ರೀತಿಯಿಂದ ಇರಬೇಕು ಎಂದು ಹೇಳಿದ್ದಾರೆ‌. ದ್ವೇಷ ಮಾಡಬಾರದು. ಜಾತಿ ಹೋಗಬೇಕಾದರೆ ಸಾಮಾಜಿಕ ಹಾಗೂ ಆರ್ಥಿಕ ಶಕ್ತಿ ಬರಬೇಕು ಜಾತಿ ವ್ಯವಸ್ಥೆಗೆ ಚಲನೆ ಇಲ್ಲ. ಚಲನೆ ಸಿಗುವುದು ಆರ್ಥಿಕವಾಗಿ ಸಾಮಾಜಿಕವಾಗಿ ಶಕ್ತಿ ಬಂದರೆ ಮಾತ್ರ ಸಿಗುತ್ತದೆ ಎಂದು ಅವರು ಮುಖ್ಯಮಂತ್ರಿಗಳು ತಿಳಿಸಿದರು.

ಇದನ್ನು ಓದಿ: ಬಂಧನದ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕನಿಗೆ ಲುಕ್‌ಔಟ್‌ ನೋಟಿಸ್‌ ಜಾರಿ

ಜಯಂತಿಗಳನ್ನು ಆಚರಣೆ ಮಾಡುತ್ತಿರುವುದು ಎಲ್ಲಾ ಒಗ್ಗೂಡಿ ಪ್ರೀತಿಯಿಂದ ಇರಬೇಕು ಎಂಬ ಉದ್ದೇಶದಿಂದ ಮಾತ್ರ ಎಂದು ಅವರು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚೆಲುವರಾಯಸ್ವಾಮಿ ಮಾತನಾಡಿ, ಮಳವಳ್ಳಿಯಲ್ಲಿ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ 1066 ನೇಮ ಜಯಂತಿ ಮಹೋತ್ಸವ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ಜಯಂತೋತ್ಸವ ನಡೆದಿದ್ದು ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಹೆಚ್.ಸಿ.ಮಹಾದೇವಪ್ಪ ಮಾತನಾಡಿ, ಸುತ್ತೂರು ಶ್ರೀ ಮಠ ಪ್ರತಿವರ್ಷ ಜಯಂತೋತ್ಸವ ಆಚರಣೆ ಮಾಡುತ್ತಿದೆ. ಶಿವಯೋಗಿಗಳು ನಾಡಿನ ಜನರನ್ನ ಒಗ್ಗೂಡಿಸಿ ಸೋದರತ್ವ ಬೆಳೆಸಿದವರು. ಮನುಷ್ಯ ಹುಟ್ಟಿದ ಮೇಲೆ ಧರ್ಮ, ಧರ್ಮವನ್ನು ಸರಿಯಾಗಿ ಅರ್ಥೈಹಿಸಿ ನಾವೆಲ್ಲರೂ ಒಂದೇ ರೀತಿ ಅನ್ನೋ ಮನೋಭಾವ ಮೂಡಿಸಿರುವುದೇ ಗುರಿ.ಶ್ರೀ ಮಠಕ್ಕೆ ಎಲ್ಲಾ ಪಕ್ಷ, ಎಲ್ಲಾ ಧರ್ಮೀಯರು ಬರುತ್ತಾರೆ. ಪ್ರಜಾಪ್ರಭುತ್ವ ನಡವಳಿಕೆ ಬಗ್ಗೆ ನಂಬಿಕೆ ಇದೆ. ಬಸವಣ್ಣ ಯಾರ ವಿರುದ್ಧ ಸೇಡುತೀರಿಸಿಕೊಳ್ಳಲ್ಲಿಲ್ಲ. ಡಾ ಬಿ.ಆರ್.ಅಂಬೇಡ್ಕರ್ ಬಾಲ್ಯದಲ್ಲೇ ನೋವು ಅನುಭವಿಸಿದರು. ಆದರೂ ಯಾರ ಬಗ್ಗೆಯೂ ದ್ವೇಷ ಮಾಡಿಲ್ಲ. ಶ್ರೀಗಳು ಮನುಷ್ಯರ ನಡುವೆ ಸೋದರತ್ವ ಬಿತ್ತುವ ಕೆಲಸ ಮಾಡಿದ್ದಾರೆ. ಜಯಂತೋತ್ಸವದಲ್ಲಿ ಎಲ್ಲಾ ಧರ್ಮೀಯರು ಸೇರಿದ್ದಾರೆ ಇದೇ ಒಗ್ಗೂಡೂವಿಕೆಯಾಗಿದ್ದು ಸುತ್ತೂರು ಶ್ರೀ ಮಠ ಮಹತ್ತರ ಕಾರ್ಯ ಮಾಡುತ್ತಿದೆ ಎಂದು ಅವರು ತಿಳಿಸಿದರು‌.

ಆಂದೋಲನ ಡೆಸ್ಕ್

Recent Posts

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ; ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಿ ಪ್ರಗತಿ : ಸಿಎಂ ಮೆಚ್ಚುಗೆ

ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…

1 hour ago

ರಾಜ್ಯದ 22 ಸಾವಿರಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

​ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…

2 hours ago

ಸಕಾಲಕ್ಕೆ ಸಿಗದ ಆಂಬುಲೆನ್ಸ್‌ ; ಡೋಲಿಯಲ್ಲಿ ವೃದ್ಧೆಯನ್ನು ಆಸ್ಪತ್ರೆಗೆ ಕರೆದೊಯ್ದ ಗ್ರಾಮಸ್ಥರು

ಹನೂರು : ಮೂರ್ಛೆ ತಪ್ಪಿದ್ದ ವೃದ್ದೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಆಂಬುಲೆನ್ಸ್ ಸಿಗದೆ ಡೋಲಿ ಮುಖಾಂತರ ಕರೆದುಕೊಂಡು ಬಂದಿರುವ ಘಟನೆ…

3 hours ago

ಮಾತು ಕೊಟ್ಟಂತೆ ನಡೆದಿದ್ದೇವೆ : ಸಿಎಂ

2.5 ವರ್ಷದಲ್ಲಿ 592 ಭರವಸೆಗಳಲ್ಲಿ 243 ಭರವಸೆ ಈಡೇರಿಕೆ ಹಾವೇರಿ : ಏನು ಮಾತು ಕೊಟ್ಟಿದ್ದೆವೋ ಅದರಂತೆ ನಡೆದಿದ್ದೇವೆ. ಸಾವಿರ…

3 hours ago

4 ಕೆ.ಜಿಗೂ ಹೆಚ್ಚು ಹೆರಾಯಿನ್‌ ವಶ : ಪಾಕ್‌ ಕಳ್ಳ ಸಾಗಣಿಕೆ ಪ್ರಯತ್ನ ವಿಫಲ

ಜಮ್ಮು : ನೆರೆಯ ಪಾಕಿಸ್ತಾನದಿಂದ ಡ್ರೋನ್ ಮೂಲಕ ಬಂದ ನಾಲ್ಕು ಕೆಜಿಗೂ ಹೆಚ್ಚು ಹೆರಾಯಿನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಅಂತಾರಾಷ್ಟ್ರೀಯ ಗಡಿಯಲ್ಲಿ…

3 hours ago

ಮದ್ದೂರು ಮೇಲ್ದರ್ಜೆಗೇರಿಸಲು ಅಗತ್ಯ ಕ್ರಮ : ಸಚಿವ ಚಲುವರಾಯಸ್ವಾಮಿ ಭರವಸೆ

ಮದ್ದೂರು : ಮದ್ದೂರು ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿಸುವ ಸಲುವಾಗಿ ನಗರಸಭೆಗೆ ಗ್ರಾ.ಪಂ‌.ಗಳ ಸೇರ್ಪಡೆ ಸಂಬಂಧ ಸರ್ಕಾರದ ಹಂತದಲ್ಲಿ ಮಾತನಾಡಿ ಕ್ರಮ…

3 hours ago