ರಾಜ್ಯ

ಆರೋಗ್ಯ ಕವಚ ಯೋಜನೆಯಡಿ 262 ಹೊಸ ಆಂಬ್ಯುಲೆನ್ಸ್‌ಗಳಿಗೆ ಸಿಎಂ ಚಾಲನೆ

ಬೆಂಗಳೂರು : ಆರೋಗ್ಯ ಕವಚ ಯೋಜನೆಯಡಿ 108 ಸೇವೆಯ ನೂತನ 262 ಆಂಬ್ಯುಲೆನ್ಸ್ ಸೇವೆಗಳನ್ನು ಗುರುವಾರ ವಿಧಾನಸೌಧ ಮುಂದೆ ಸಿಎಂ ಸಿದ್ದರಾಮಯ್ಯ ಅವರು ಲೋಕಾರ್ಪಣೆ ಮಾಡಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವಿಧಾನಸೌಧದ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 262 ಆಧುನಿಕ ಅಂಬ್ಯುಲೆನ್ಸ್ ಗಳನ್ನು ಅರ್ಪಿಸಿದರು.

ಬಳಿಕ ಮಾತನಾಡಿದ ಸಿದ್ದರಾಮಯ್ಯ, ಜಯದೇವ ಆಸ್ಪತ್ರೆಯಲ್ಲಿರುವ ಗುಣಮಟ್ಟದ ಆರೋಗ್ಯ ಸೇವೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲೂ ಸಿಗಬೇಕೆನ್ನುವುದು ಸರ್ಕಾರದ ಗುರಿಯಾಗಿದೆ. ಪ್ರತಿಯೊಬ್ಬರನ್ನು ಮಾನವೀಯವಾಗಿ ನಡೆಸಿಕೊಂಡು ತಾರತಮ್ಯ ಮಾಡದೆ ಉತ್ತಮ ಆರೋಗ್ಯ ಸೇವೆ ನೀಡಬೇಕು ಎಂದು ಸಿಎಂ ಸೂಚಿಸಿದರು.

ನಾಡಿನ ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ಧವಾಗಿದೆ. ಚಿಕಿತ್ಸೆ ಸಿಗದೆ ಯಾರೂ ಪ್ರಾಣ ಹಾನಿಯಾಗುವುದನ್ನು ತಡೆಯಲು ತುರ್ತು 108 ಅಂಬ್ಯುಲೆನ್ಸ್ ಗಳನ್ನು ಆರೋಗ್ಯ ಸೇವೆಗೆ ಒದಗಿಸಲಾಗಿದೆ. ಪ್ರತಿ ತಾಲ್ಲೂಕಿನಲ್ಲಿ 4 ಅಂಬ್ಯುಲೆನ್ಸ್ ಗಳು ಕಾರ್ಯನಿರ್ವಹಿಸುತ್ತಾ ತುರ್ತು ಆರೋಗ್ಯ ಸೇವೆ ಒದಗಿಸುತ್ತಿವೆ. ಸದ್ಯ ರಾಜ್ಯದಲ್ಲಿ 840ಕ್ಕೂ ಹೆಚ್ಚು ಅಂಬ್ಯುಲೆನ್ಸ್ ಗಳ ಅವಶ್ಯಕತೆಯಿದೆ ಎಂದು ಹೇಳಿದರು.

ಖಾಸಗಿ ಡಯಾಗ್ನೊಸ್ಟಿಕ್ ಸೆಂಟರ್‌ಗಳಲ್ಲಿ ಸೇವಾವೆಚ್ಚ ದುಬಾರಿಯಿಂದ ಬಡವರಿಗೆ ಕಷ್ಟವಾಗುತ್ತಿದೆ. ಆದ್ದರಿಂದ ಸರ್ಕಾರಿ ಆಸ್ಪತ್ರೆಗಳಲ್ಲೇ ಉತ್ತಮ‌ ಗುಣಮಟ್ಟದ ಚಿಕಿತ್ಸೆ ಸಿಗುತ್ತದೆ ಎನ್ನುವ ವಾತಾವರಣ ರಾಜ್ಯದಲ್ಲಿ ಸೃಷ್ಟಿ ಆಗುತ್ತಿದೆ. ಜಯದೇವ ಆಸ್ಪತ್ರೆಯಿಂದ ಉತ್ತಮ‌ಸೇವೆ ಸಾಧ್ಯ ಆಗಿರುವಾಗ ಉಳಿದ ಕಡೆಗಳಲ್ಲೂ ಅದೇ ಗುಣಮಟ್ಟದ ಸೇವೆ ಒದಗಿಸಲು ಸಾಧ್ಯವಿದೆ. ಈ ಹಿನ್ನೆಲೆಯಲ್ಲಿ ಪ್ರತೀ ಜಿಲ್ಲೆಯಲ್ಲಿ ಎಂಆರ್‌ಐ ಸ್ಕ್ಯಾನಿಂಗ್ ಸೌಲಭ್ಯ ಒದಗಿಸುವ ದಿಕ್ಕಿನಲ್ಲಿ ರಾಜ್ಯ ಸರ್ಕಾರ ಶ್ರಮಿಸುತ್ತಿದೆ ಎಂದು ತಿಳಿಸಿದರು.

ಇದೇ ವೇಳೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಿ, ನಮ್ಮ ದೇಶದ ಇತರೆ ರಾಜ್ಯಗಳು ನಮ್ಮನ್ನು ಅನುಸರಿಸುತ್ತಿವೆ. 108 ಆ್ಯಂಬುಲೆನ್ಸ್​ಗೆ ಡಿಜಿಟಲೀಕರಣ ಅಳವಡಿಸಿಕೊಳ್ಳಬೇಕು. ಮೊದಲು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಚಿಕಿತ್ಸೆ ಕೊಡಿಸಬೇಕು. ಯಾವ ಖಾಸಗಿ ಆಸ್ಪತ್ರೆಗಿಂತ ನಮ್ಮ ಸರ್ಕಾರಿ ಆಸ್ಪತ್ರೆ ಕಡಿಮೆ ಇಲ್ಲ ಎಂದರು. ರಾಜ್ಯದ ಎಲ್ಲಾ ಜಿಲೆಗಳಲ್ಲಿಯೂ ಮೆಡಿಕಲ್‌ ಕಾಲೇಜು ಸ್ಥಾಪಿಸಲಾಗಿದೆ ಎಂದು ಹೇಳಿದರು.

ಅಂಬ್ಯುಲೆನ್ಸ್‌ ಮಾಹಿತಿ : 82.02 ಕೋಟಿ ರೂಪಾಯಿ ವೆಚ್ಚದಲ್ಲಿ 262 ಆಂಬ್ಯುಲೆನ್ಸ್‌ ಗಳು ಖರೀದಿಸಲಾಗಿದೆ. 262 ಪೈಕಿ 157 ಅಂಬ್ಯುಲೆನ್ಸ್​ಗಳಲ್ಲಿ ಬಿಎಲ್ ಎಸ್ (Basic life support) ಹಾಗೂ 105 ಅಂಬ್ಯುಲೆನ್ಸ್ ಅಡ್ವಾನ್ಸ್ ಲೈಫ್ ಸಪೋರ್ಟ್ (ALS ) ಸೌಲಭ್ಯವಿದ್ದು, ಹೃದಯ ಮತ್ತು ಉಸಿರಾಟದ ತುರ್ತು ಪರಿಸ್ಥಿಗಳಲ್ಲಿ ಇವುಗಳನ್ನು ಬಳಸಲಾಗುವುದು.

ಈ ವರ್ಷ ಹೊಸ 188 ಇಂದಿರಾ ಕ್ಯಾಂಟೀನ್‌ ಸ್ಥಾಪನೆ : ಜನರಿಗೆ ಅನುಕೂಲ ಆಗುವ ದೃಷ್ಠಿಯಿಂದ  ಬೆಂಗಳೂರಿನಲ್ಲಿ 225 ವಾರ್ಡ್ ಗಳಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಲಾಗುವುದು. ಇದಲ್ಲದೇ ಅಗತ್ಯ ಇರುವ ಕಡೆ ಕ್ಯಾಂಟೀನ್ ಆರಂಭಿಸಲಾಗುವುದು. ಇಂದಿರಾ ಕ್ಯಾಂಟೀನ್‌ಗೆ ಜಾಗದ ಕೊರತೆ ಇರುವ ಕಡೆ ಸಂಚಾರಿ ಕ್ಯಾಂಟೀನ್‌ಗಳನ್ನು ಸ್ಥಾಪಿಸಲಾಗುವುದು. ಈ ವರ್ಷ ಹೊಸದಾಗಿ 188 ಇಂದಿರಾ ಕ್ಯಾಂಟೀನ್‌ ಸ್ಥಾಪಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

andolanait

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

2 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

2 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

2 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

2 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

2 hours ago